ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಹೊಸ ಕತೆಗಾರರಿಗೆ 'ಛಂದ'ದ ಆಹ್ವಾನ
ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ/ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು ಕಳುಹಿಸಬೇಕು. ಹಸ್ತಪ್ರತಿ ಹಿಂತಿರುಗಿಸಲಾಗುವದಿಲ್ಲ.
ಆಯ್ಕೆಯಾದ ಕತೆಗಾರರಿಗೆ 10 ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಈ ಪುಸ್ತಕವನ್ನು 2009ರ ಮೇ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ನಡೆಯವ ಸುಂದರ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುವುದು. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ.
ಕತೆಗಳನ್ನು ಕಳಿಸಬೇಕಾದ ವಿಳಾಸ:
ಛಂದ
ಪುಸ್ತಕ
c/o
ವಸುಧೇಂದ್ರ,
I-004
ಮಂತ್ರಿ
ಪ್ಯಾರಡೈಸ್,
ಬನ್ನೇರುಘಟ್ಟ
ರಸ್ತೆ,
ಬೆಂಗಳೂರು
-
560
076
(ದೂರವಾಣಿ
:
98444
22782)
ಕೊನೆಯ ದಿನಾಂಕ : ಏಪ್ರಿಲ್ 15, 2009
ವಿವರಗಳಿಗೆ : [email protected]
Comments
Story first published: Wednesday, March 18, 2009, 18:34 [IST]