ಶಾಲಿನಿ ರಜನೀಶ್ ಅವರ 'ನಡೆಮುಂದೆ' ಲೋಕಾರ್ಪಣೆ

'ವಿಜಯ ಕರ್ನಾಟಕ'ದ ಮಹಿಳಾ ವಿಜಯ ಪುರವಣಿಯಲ್ಲಿ ಬರೆದ ಅಂಕಣ ಬರಹಗಳ ಈ ಕೃತಿ ಬಿಡುಗಡೆ ನಂತರ ಮಾತನಾಡಿದ ಅವರು ಕರ್ತವ್ಯದ ಜತೆಗೆ ಸಾಮಾಜಿಕ ಜವಾಬ್ದಾರಿಯೂ ಮುಖ್ಯ ಎಂಬುದನ್ನು ತೋರಿಸಿಕೊಟ್ಟಿರುವ ಶಾಲಿನಿ ರಜನೀಶ್ ಎಲ್ಲ ಹಿರಿಯ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.
ದೇವದಾಸಿ ಪದ್ಧತಿ, ಲೈಂಗಿಕ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಮಹಿಳೆಯ ಆಸ್ತಿ ಹಕ್ಕುಗಳು, ಮದುವೆ ನೋಂದಣಿ, ಬಾಲ ಕಾರ್ಮಿಕರ ನಿರ್ಮೂಲನೆ ಇದೇ ಮೊದಲಾದ ಸಾಕಷ್ಟು ಮಾಹಿತಿಪೂರ್ಣ ಅಂಶಗಳನ್ನು 'ನಡೆಮುಂದೆ' ಒಳಗೊಂಡಿದೆ. ಒಟ್ಟಿನಲ್ಲಿ ಮಹಿಳಾ ಸಬಲೀಕರಣಕ್ಕೆ ಬೇಕಿರುವ ಎಲ್ಲ ಅಗತ್ಯಮಾಹಿತಿಗಳನ್ನು ಒಳಗೊಂಡಿರುವ ಈ ಕೃತಿಯ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಮಹಿಳೆಯರಿಗೆ ಮುಟ್ಟಿಸುವ ಕೆಲಸವನ್ನು ಪ್ರಾಧಿಕಾರ ಮಾಡಲಿದೆ ಎಂದು ಆಶ್ವಾಸನೆ ನೀಡಿದರು.
ಬೇರೆ ರಾಜ್ಯದಲ್ಲಿ ಹುಟ್ಟಿ, ಕನ್ನಡ ಕಲಿತು, ಕನ್ನಡದಲ್ಲೇ ಅಂಕಣ ಬರೆಯುತ್ತಿರುವ ಶಾಲಿನಿ, ಹೊರ ರಾಜ್ಯದಿಂದ ಬಂದು ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳಿಗೆ ಮಾದರಿ ಎಂದು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವತ್ಸಲಾ ವತ್ಸ ಬಣ್ಣಿಸಿದರು.
ಮಹಿಳೆಯರಿಗೆ ತಮ್ಮ ಸಬಲೀಕರಣಕ್ಕಾಗಿ ದಾರಿ ತೋರುವ ಪ್ರಯತ್ನ ಈ ಕೃತಿಯಲ್ಲಿ ಮಾಡಲಾಗಿದೆ. ಸಾವಿರಾರು ವರ್ಷಗಳಿಂದ ಮಹಿಳೆಯರು ಸಾಮಾಜಿಕ, ಆರ್ಥಿಕ, ದೈಹಿಕ ಹಾಗೂ ಮಾನಸಿಕವಾಗಿ ಶೋಷಿತರಾಗಿ ಸಂಪೂರ್ಣ ಸ್ವಾಭಿಮಾನದಿಂದ ತಮ್ಮ ಜೀವನ ಸಾಗಿಸಲು ವಿಫಲರಾಗಿದ್ದಾರೆ. ಈ ವಿಷ ವರ್ತುಲದಿಂದ ಹೊರಬಂದು ಧೈರ್ಯದಿಂದ ತಮ್ಮ ಅಭಿವೃದ್ಧಿಯನ್ನು ಸಾಧಿಸಿ, ಸಮಾಜದ ಅಭಿವೃದ್ಧಿಗೆ ಕಾರಣರಾಗಬೇಕು ಎಂಬ ಅಂಶವನ್ನು ಲೇಖಕರು ಕೃತಿಯಲ್ಲಿ ಪ್ರತಿಪಾದಿಸಿದ್ದಾರೆ.
2008ರ ವಿಶ್ವ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಆರಂಭವಾದ ಈ ಲೇಖನಗಳ ಸಂಗ್ರಹದ ಕೃತಿಯನ್ನು ಸ್ವಪ್ನ ಬುಕ್ ಹೌಸ್ ಹೊರತಂದಿದೆ.
(ದಟ್ಸ್ ಕನ್ನಡ ವಾರ್ತೆ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications