ಮೇ 31ರಂದು ನಟನದಲ್ಲಿ ರಂಗವಲ್ಲಿಯ ಲೋಕಾರ್ಪಣೆ

ಡಾ|| ಹಾಲತಿ ಸೋಮಶೇಖರ್ ಅವರ ವಿಸ್ಮಯ ಪ್ರಕಾಶನ ಹೊರತಂದಿರುವ ಈ ಕೃತಿಯನ್ನು ಕುತೂಹಲ ಸಂಸ್ಥೆ ಲೋಕಾರ್ಪಣೆಗೊಳಿಸಲಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ, ಜನಪ್ರಿಯ ಲೇಖಕ ಡಾ|| ಸಿದ್ಧಲಿಂಗಯ್ಯ ಬಿಡುಗಡೆ ಮಾಡಲಿದ್ದಾರೆ. ಲೇಖಕರಾದ ಡಾ|| ನಾ. ದಾಮೋದರಶೆಟ್ಟಿ ಹಾಗೂ ಗಣೇಶ್ ಅಮೀನಗಡ ಕೃತಿ ಕುರಿತು ಮಾತನಾಡಲಿದ್ದಾರೆ. ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಬಿ.ಸುರೇಶ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಮಾತು-ಮೌನದ ನಡುವೆ ಒಪ್ಪೊತ್ತಿನ ನೆನಪು ಎಂಬ ಶೀರ್ಷಿಕೆ ಹೊತ್ತ ರಂಗವಲ್ಲಿ ಕೃತಿಯ ಮೂಲಕ ನಟ ಮಂಡ್ಯ ರಮೇಶ್ ತಮ್ಮ ಬದುಕಿನ ಹಲವು ಮಜಲುಗಳನ್ನು 'ರಂಗವಲ್ಲಿ'ಯಲ್ಲಿ ಬಿಡಿಸಿದ್ದಾರೆ. ಮೂಲತಃ ರಂಗಭೂಮಿಯ ಮೈಸೂರಿನ ರಂಗಾಯಣ ಮೂಲಕ ರಂಗಯಾತ್ರೆ ನಡೆಸಿ ನಗರದ ರಾಮಕೃಷ್ಣನಗರದಲ್ಲಿ ನಟನ ರಂಗಮಂಟಪ ಎಂಬ ರಂಗ ಕುಟೀರ ಕಟ್ಟಿ ನಿರಂತರ ರಂಗಭೂಮಿಯ ಕೈಂಕರ್ಯ ನಡೆಸಿಕೊಂಡು ಬಂದವರು. ಈ ಪಯಣದ ಮೆಲುಕುಗಳಲ್ಲದೇ ರಾಜ್ಯದ ಹೆಸರಾಂತ ಪತ್ರಿಕೆಗಳಲ್ಲಿ ಪ್ರಕಟಗೊಂಡ ಅವರ ಲೇಖನಗಳು 'ರಂಗವಲ್ಲಿ'ಯಲ್ಲಿ ಅಡಕವಾಗಿದೆ.
ಈ ಲೋಕಾರ್ಪಣೆ ಸಮಾರಂಭದಲ್ಲಿ ನಟನ ಹೆಣ್ಣು ಮಕ್ಕಳಿಂದ ಬೀಸು ಕಂಸಾಳೆ, ಹಾಡು-ಹಸೆ ಹಾಗೂ ಇನ್ನಿತರ ಸಾಂಸ್ಕೃತಿಕ ಸಡಗರವಿದ್ದು ಸಾಹಿತ್ಯಾಸ್ತಕರು ಸಮಾರಂಭದಲ್ಲಿ ಪಾಲ್ಗೊಳ್ಳಬೇಕೆಂದು ಕುತೂಹಲದ ಕಾರ್ಯದರ್ಶಿ ರವೀಂದ್ರ ಜೋಶಿ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications