ತಲೆಬರಹ : ನೂರೆಂಟು ಮಾತು ಕೇಳಲು ಭಾನುವಾರ ಬನ್ನಿ

ಪ್ರತಿ ಗುರುವಾರ ಪ್ರಕಟವಾಗುವ ಅಂಕಣ 'ನೂರೆಂಟು ಮಾತು' ಮೊನಚಿನಿಂದ ಕೂಡಿದ ಅಭಿಪ್ರಾಯ, ಸೊಗಸಾದ ನಿರೂಪಣೆಯಿಂದ ಓದುಗರ ಮನ ಮುಟ್ಟಿದೆ. ಈ ಅಂಕಣ ಬರಹದ ಐದನೇ ಪುಸ್ತಕ ಭಾನುವಾರ ಓದಗರ ಕೈಸೈರಲಿದೆ. ಇನ್ನು 'ತಲೆಬರಹ ಪತ್ರಿಕೆ ಹಣೆಬರಹ'ದಂಥ ಪುಸ್ತಕ ಪ್ರಕಟವಾಗಿರುವುದು ಕಡಿಮೆಯೇ. ಸೊಗಸಾದ ಮತ್ತು ಸೂಕ್ತವಾದ ತಲೆಬರಹ ಒಂದು ಸಾಧಾರಣ ಲೇಖನವನ್ನು ಕೂಡ ಓದುವಂತೆ ಸೆಳೆಯಬಲ್ಲದು. ಅದೇ ರೀತಿ ಒಂದು ಅರ್ಥಹೀನ, ಕೆಟ್ಟ ತಲೆಬರಹ ಅತ್ಯುತ್ತಮವಾದ ಬರಹವನ್ನು ಕೊಲ್ಲಲೂಬಹುದು. ನೂರೆಂಟು ಮಾತು ಬರಹಗಳು ಕೂಡ ಓದುಗರನ್ನು ಸೆಳೆದದ್ದು ಉತ್ತಮ ತಲೆಬರಹಗಳಿಂದಲೇ.
ಪುಸ್ತಕ ಬಿಡುಗಡೆ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ 10.30ಕ್ಕೆ ಬಸವನಗುಡಿಯ ಬಿಪಿ ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ಜರುಗಲಿದೆ.
ಬೆಳಗಿನ ಬಿಸಿಬಿಸಿ ಉಪಹಾರದ ಜೊತೆಗೆ ಸವಿಸವಿಯಾದ ನೂರೆಂಟು ಮಾತುಗಳಿಗೂ ಕೊರತೆಯಿರುವುದಿಲ್ಲ. ವಿಶ್ವೇಶ್ವರ ಭಟ್ ಅವರ ಜೊತೆ ಮುಖ್ಯ ಅತಿಥಿಗಳಾಗಿ ಕವಿ, ಕಥೆಗಾರ ಜಯಂತ್ ಕಾಯ್ಕಿಣಿ ಮತ್ತು ಜಿಎನ್ ಮೋಹನ್ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖ್ಯಾತ ಕವಿ ಡಾ. ಎಚ್.ಎಸ್.ವೆಂಕಟೇಶ ಮೂರ್ತಿ ಅವರು ವಹಿಸಿಕೊಳ್ಳಲಿದ್ದಾರೆ.
ಎರಡೂ ಪುಸ್ತಕಗಳನ್ನು ಅಂಕಿತ ಪುಸ್ತಕ ಪ್ರಕಾಶನ ಹೊರತಂದಿದೆ. ನೂರೆಂಟು ಮಾತು ಕೇಳಲು ಮತ್ತು ಕೊಳ್ಳಲು ಪುಸ್ತಕ ಪ್ರೇಮಿಗಳೇ ಭಾನುವಾರ ಬನ್ನಿ.
(ದಟ್ಸ್ ಕನ್ನಡ ವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications