ಎಸ್.ದಿವಾಕರ್ ಅವರ ಕಥಾ ಜಗತ್ತು

'ಕಥಾ ಜಗತ್ತು' ನೊಬೆಲ್ ಸಾಹಿತ್ಯ ಪುರಸ್ಕಾರಕ್ಕೆ ಪಾತ್ರರಾದ ಐವತ್ತು ಕಥೆಗಾರರ ಕಥೆಗಳ ಸಂಕಲನ. ಜಗತ್ತಿನ ಅತ್ಯುತ್ತಮ ಕಥೆಗಳನ್ನು ಕನ್ನಡದ ಮೂಲಕ ಕಾಣಿಸುವ ದಿವಾಕರ್ ಅವರ ಕೆಲಸ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಕೃತಿಯ ಬಗ್ಗೆ ಕವಿ ಗೋಪಾಲಕೃಷ್ಣ ಅಡಿಗರು ಅಭಿಪ್ರಾಯವೆಂದರೆ "ಎಸ್.ದಿವಾಕರ್ ಈ ಕಥೆಗಳೆಲ್ಲವನ್ನೂ ಅತ್ಯಂತ ಸಮರ್ಪಕ ರೀತಿಯಲ್ಲಿ, ಮೂಲ ಕಥೆಗಳ ಶ್ರೇಷ್ಠತೆಗೆ ಕುಂದು ಬಾರದ ರೀತಿಯಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ಕಥೆಗಳಲ್ಲಿ ಪಾತ್ರ, ಸನ್ನಿವೇಶಗಳನ್ನು ಒತ್ತಟ್ಟಿಗಿಟ್ಟು ನೋಡಿದಲ್ಲಿ, ಇವು ಕನ್ನಡದ್ದೇ ಕಥೆಗಳೋ ಎಂದೆನ್ನಿಸುವಷ್ಟು ಸಹಜವಾಗಿವೆ. ಇದು ಕನ್ನಡಕ್ಕೆ ಅವರು ಸಲ್ಲಿಸುತ್ತಿರುವ ದೊಡ್ಡ ಸೇವೆ ಎನ್ನುವುದರಲ್ಲಿ ಸಂದೇಹವಿಲ್ಲ" ಎಂದು ಮೆಚ್ಚಿಕೊಂಡಿದ್ದರು.
"ನನ್ನ ಜೀವನದಲ್ಲಿ ಈ ತನಕ ಸಿಕ್ಕಿರುವ ಎಲ್ಲ ಬಹುಮಾನಗಳಿಗಿಂತಲೂ ಅತ್ಯಂತ ದೊಡ್ಡ ಬಹುಮಾನ ಈ ಕಥಾಜಗತ್ತು. ಇಷ್ಟೊಂದು ಕಥೆಗಳ ಅನುವಾದವನ್ನು ಒಬ್ಬರೇ ಮಾಡುವುದೆಂದರೆ ಎಂಟೆದೆ ಬೇಕು. ಇಲ್ಲಿನ ಕಥೆಗಳು ಕನ್ನಡದವೇ ಎಂದು ಭ್ರಮೆ ಹುಟ್ಟಿಸುವಷ್ಟು ಯಶಸ್ಚಿಯಾಗಿದೆ ಅನುವಾದ" ಎನ್ನುವುದು ಕಾದಂಬರಿಕಾರ ಚದುರಂಗರು ವ್ಯಕ್ತಪಡಿಸಿದ್ದ ಮೆಚ್ಚುಗೆ.
ಕಥಾಜಗತ್ತು ಕೃತಿಯ ಪ್ರತಿಗಳು ತೀರಿಹೋಗಿ ಬಹುಕಾಲವಿದ್ದರೂ ಎರಡನೇ ಮುದ್ರಣದ ಭಾಗ್ಯ ಕೂಡಿಬಂದಿರಲಿಲ್ಲ. ಬೆಂಗಳೂರಿನ ಸಾಗರ ಪ್ರಕಾಶನ ಇದೀಗ ಕಥಾಜಗತ್ತನ್ನು ಮರಳಿ ಮುದ್ರಿಸಿದೆ. ಮಳೆಯ ದಿನಗಳು; ಕಥೆಗೆ ಒಡ್ಡಿಕೊಳ್ಳಲು ಲಾಯಕ್ಕಾದ ದಿನಗಳು.
(ದಟ್ಸ್ ಕನ್ನಡ ಸಭೆಸಮಾರಂಭ)
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications