ಸುಚಿತ್ರಾದಲ್ಲಿ ಪ್ರಣತಿಯ ಐದನೇ ಕನಸು ನನಸು

ಸುಶ್ರುತ ದೊಡ್ಡೇರಿಯ ಹೊಳೆಬಾಗಿಲು ಬಿಡುಗಡೆ ಮಾಡಿ ಮಾತನಾಡಿದ ನಾಗತಿಹಳ್ಳಿ, ಹಳ್ಳಿಯ ಹುಡುಗರು ನಗರಗಳಿಗೆ ಬಂದು, ಮತ್ತೆ ಹಳ್ಳಿಗೆ ಮರಳದೇ, ಒಂದು ರೀತಿಯ ಅನಿವಾಸಿ ಹಳ್ಳಿಗ ಪ್ರಜ್ಞೆಯಲ್ಲಿ- ಎನ್ ಆರ್ ವಿ- ನಾನ್ ರೆಸಿಡೆಂಟ್ ವಿಲೇಜ್ ಪ್ರಜ್ಞೆಯಲ್ಲಿ ಬದುಕುತ್ತಿದ್ದಾರೆ ಎಂದರು. ನಾವು ಇಂದಿನ ಆಧುನಿಕ ಪಲ್ಲಟಗಳ ಬಗ್ಗೆ ತಲೆಕೆಡಿಸಿಕೊಳ್ಳದೇ,ಅವುಗಳ ಜೊತೆ ಬದುಕುವುದನ್ನು ಕಲಿಯಬೇಕೆಂದು ಅವರು ಅಭಿಪ್ರಾಯಪಟ್ಟರು.
ಹೂವು ಹೆಕ್ಕುವ ಸಮಯ ಬಿಡುಗಡೆ ಮಾಡಿದ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಪರಂಪರೆಯ ಓದು ಅತ್ಯಂತ ಅವಶ್ಯಕ ಎಂದು ಪ್ರತಿಪಾದಿಸಿದರು. ಹಳೆಯ ಕವಿಗಳ, ಗ್ರಂಥಗಳ ಅಧ್ಯಯನದಿಂದ ಜ್ಞಾನ ಹೆಚ್ಚುತ್ತದೆ ಎಂದ ಅವರು, ಅಂತಹ ಅಧ್ಯಯನ ಇಲ್ಲದ ಸಾಹಿತಿ, ಬರವಣಿಗೆಯ ಮುಖ್ಯ ಹೆದ್ದಾರಿಗೆ ಬರಲು ಸಾಧ್ಯವಿಲ್ಲ ಎಂದರು. ಕುಮಾರವ್ಯಾಸನಂತಹ ಕವಿಗಳನ್ನು ಓದುವುದರಿಂದ ಹೊಸ ಹೊಳಹು ಸಿಗುತ್ತದೆ ಎಂದ ಎಚ್ ಎಸ್ ವಿ, ಹೊಸ ತಲೆಮಾರಿನ ಹುಡುಗರು ಸಾಹಿತ್ಯದ ಬಗ್ಗೆ ಆಸಕ್ತಿ ಬೆಳಸಿಕೊಂಡಿರುವುದಕ್ಕೆ ಖುಷಿ ವ್ಯಕ್ತಪಡಿಸಿದರು.
ಬ್ಲಾಗ್ ಜಗತ್ತಿನ ಆಗು ಹೋಗುಗಳ ಬಗ್ಗೆ ಮಾತನಾಡಿದ ಜೋಗಿ ಇತ್ತೀಚಿನ ದಿನಗಳಲ್ಲಿ ಅಂತರ್ಜಾಲ ಕನ್ನಡ ಬರಹಗಳಲ್ಲಿ ಅಸಹನೆ ವ್ಯಕ್ತವಾಗುತ್ತಿರುವುದರ ಬಗ್ಗೆ ಖೇದ ವ್ಯಕ್ತಪಡಿಸಿದರು. ಸುಮಾರು ಎರಡುಸಾವಿರದವರೆಗಿರುವ ಕನ್ನಡ ಬ್ಲಾಗಿಗರು ಬರಹ ಜಗತ್ತಿನ ಹೊಸ ಸಾಧ್ಯತೆಗಳನ್ನು ತೋರಿಸುತ್ತಿದ್ದಾರೆಂಬುದು ಅವರ ಅಭಿಪ್ರಾಯ.
ಪರಿಸರ ಸಂಬಂಧೀ ಕೃತಿ ಚಿತ್ರಚಾಪ ಬಿಡುಗಡೆ, ಕನ್ನಡ ಬ್ಲಾಗಿಗರ ಕೂಟ, ನುಡಿವ ವೀಣೆ, ಗಮಕ ಕಾರ್ಯಕ್ರಮಗಳನ್ನು ಈಗಾಗಲೇ ಆಯೋಜಿಸಿರುವ ಪ್ರಣತಿಗೆ ಇದು ಐದನೇ ಕಾರ್ಯಕ್ರಮ. ಕನ್ನಡ ಬ್ಲಾಗ್ ಜಗತ್ತಿನ ಹಲವರು ಮತ್ತು ಹಿರಿಯ ಸಾಹಿತಿಗಳೂ ಸೇರಿದಂತೆ ಹಲವು ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications