ಸುಚಿತ್ರಾದಲ್ಲಿ ಪ್ರಣತಿಯ ಐದನೇ ಕನಸು ನನಸು

ಸುಶ್ರುತ ದೊಡ್ಡೇರಿಯ ಹೊಳೆಬಾಗಿಲು ಬಿಡುಗಡೆ ಮಾಡಿ ಮಾತನಾಡಿದ ನಾಗತಿಹಳ್ಳಿ, ಹಳ್ಳಿಯ ಹುಡುಗರು ನಗರಗಳಿಗೆ ಬಂದು, ಮತ್ತೆ ಹಳ್ಳಿಗೆ ಮರಳದೇ, ಒಂದು ರೀತಿಯ ಅನಿವಾಸಿ ಹಳ್ಳಿಗ ಪ್ರಜ್ಞೆಯಲ್ಲಿ- ಎನ್ ಆರ್ ವಿ- ನಾನ್ ರೆಸಿಡೆಂಟ್ ವಿಲೇಜ್ ಪ್ರಜ್ಞೆಯಲ್ಲಿ ಬದುಕುತ್ತಿದ್ದಾರೆ ಎಂದರು. ನಾವು ಇಂದಿನ ಆಧುನಿಕ ಪಲ್ಲಟಗಳ ಬಗ್ಗೆ ತಲೆಕೆಡಿಸಿಕೊಳ್ಳದೇ,ಅವುಗಳ ಜೊತೆ ಬದುಕುವುದನ್ನು ಕಲಿಯಬೇಕೆಂದು ಅವರು ಅಭಿಪ್ರಾಯಪಟ್ಟರು.
ಹೂವು ಹೆಕ್ಕುವ ಸಮಯ ಬಿಡುಗಡೆ ಮಾಡಿದ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಪರಂಪರೆಯ ಓದು ಅತ್ಯಂತ ಅವಶ್ಯಕ ಎಂದು ಪ್ರತಿಪಾದಿಸಿದರು. ಹಳೆಯ ಕವಿಗಳ, ಗ್ರಂಥಗಳ ಅಧ್ಯಯನದಿಂದ ಜ್ಞಾನ ಹೆಚ್ಚುತ್ತದೆ ಎಂದ ಅವರು, ಅಂತಹ ಅಧ್ಯಯನ ಇಲ್ಲದ ಸಾಹಿತಿ, ಬರವಣಿಗೆಯ ಮುಖ್ಯ ಹೆದ್ದಾರಿಗೆ ಬರಲು ಸಾಧ್ಯವಿಲ್ಲ ಎಂದರು. ಕುಮಾರವ್ಯಾಸನಂತಹ ಕವಿಗಳನ್ನು ಓದುವುದರಿಂದ ಹೊಸ ಹೊಳಹು ಸಿಗುತ್ತದೆ ಎಂದ ಎಚ್ ಎಸ್ ವಿ, ಹೊಸ ತಲೆಮಾರಿನ ಹುಡುಗರು ಸಾಹಿತ್ಯದ ಬಗ್ಗೆ ಆಸಕ್ತಿ ಬೆಳಸಿಕೊಂಡಿರುವುದಕ್ಕೆ ಖುಷಿ ವ್ಯಕ್ತಪಡಿಸಿದರು.
ಬ್ಲಾಗ್ ಜಗತ್ತಿನ ಆಗು ಹೋಗುಗಳ ಬಗ್ಗೆ ಮಾತನಾಡಿದ ಜೋಗಿ ಇತ್ತೀಚಿನ ದಿನಗಳಲ್ಲಿ ಅಂತರ್ಜಾಲ ಕನ್ನಡ ಬರಹಗಳಲ್ಲಿ ಅಸಹನೆ ವ್ಯಕ್ತವಾಗುತ್ತಿರುವುದರ ಬಗ್ಗೆ ಖೇದ ವ್ಯಕ್ತಪಡಿಸಿದರು. ಸುಮಾರು ಎರಡುಸಾವಿರದವರೆಗಿರುವ ಕನ್ನಡ ಬ್ಲಾಗಿಗರು ಬರಹ ಜಗತ್ತಿನ ಹೊಸ ಸಾಧ್ಯತೆಗಳನ್ನು ತೋರಿಸುತ್ತಿದ್ದಾರೆಂಬುದು ಅವರ ಅಭಿಪ್ರಾಯ.
ಪರಿಸರ ಸಂಬಂಧೀ ಕೃತಿ ಚಿತ್ರಚಾಪ ಬಿಡುಗಡೆ, ಕನ್ನಡ ಬ್ಲಾಗಿಗರ ಕೂಟ, ನುಡಿವ ವೀಣೆ, ಗಮಕ ಕಾರ್ಯಕ್ರಮಗಳನ್ನು ಈಗಾಗಲೇ ಆಯೋಜಿಸಿರುವ ಪ್ರಣತಿಗೆ ಇದು ಐದನೇ ಕಾರ್ಯಕ್ರಮ. ಕನ್ನಡ ಬ್ಲಾಗ್ ಜಗತ್ತಿನ ಹಲವರು ಮತ್ತು ಹಿರಿಯ ಸಾಹಿತಿಗಳೂ ಸೇರಿದಂತೆ ಹಲವು ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications