ನ.12ರಿಂದ ಬೆಂಗಳೂರು ಪುಸ್ತಕೋತ್ಸವ ಸಂಭ್ರಮ

ನಗರದ ಅರಮನೆ ಮೈದಾನದಲ್ಲಿ ಸೋಮವಾರ ಸಂಜೆ ನಡೆದ ಪರಿಚಯ ಸಮಾರಂಭದಲ್ಲಿ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಅವರು, 'ಬೆಂಗಳೂರು ಪುಸ್ತಕೋತ್ಸವ ವರ್ಷದಿಂದ ವರ್ಷಕ್ಕೆ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಇನ್ನೊಂದು ಒಳ್ಳೆಯ ಸಂಗತಿ ಎಂದರೆ ಇಲ್ಲಿ ಕನ್ನಡ ಪುಸ್ತಕಗಳಿಗೂ ಉತ್ತಮ ಬೇಡಿಕೆ ಕಂಡುಬರುತ್ತಿರುವುದು' ಎಂದರು.
'ಟಿವಿಯತ್ತ ಆಕರ್ಷಿತರಾಗುತ್ತಿರುವ ಇಂದಿನ ಯುವ ಪೀಳಿಗೆ, ಪುಸ್ತಕ ಸಂಸ್ಕೃತಿಯನ್ನು ಮರೆಯುತ್ತಿದೆ. ಬೌದ್ಧ ಧರ್ಮ, ಶರಣ ಧರ್ಮದ ನಾಶಕ್ಕೆ ಯತ್ನಿಸಿದ ವಿರೋಧಿಗಳು ಮೊದಲು ಅಮೂಲ್ಯ ಧರ್ಮ ಗ್ರಂಥಗಳನ್ನು ನಾಶ ಮಾಡಲು ಯತ್ನಿಸಿದರು. ಏಕೆಂದರೆ, ಪೀಳಿಗೆಯಿಂದ ಪೀಳಿಗೆಗೆ ಈ ಗ್ರಂಥಗಳು ಜನತೆಯನ್ನು ಕೈಹಿಡಿದು ಮುನ್ನೆಡೆಸುತ್ತವೆ ಎಂಬ ಸತ್ಯ ಧರ್ಮ ವಿರೋಧಿಗಳಿಗೆ ಗೊತ್ತಿತ್ತು. ಇಂಥ ಮಹತ್ವದ ಪುಸ್ತಕಗಳನ್ನು ಸಂರಕ್ಷಿಸಿ, ಪುಸ್ತಕ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವುದು ಯುವ ಪೀಳಿಗೆಯ ಕರ್ತವ್ಯ' ಎಂದು ಕವಿ ಎಚ್ ಎಸ್ ವೆಂಕಟೇಶ್ ಮೂರ್ತಿ ಹೇಳಿದರು.
* ಪ್ರವೇಶ ಶುಲ್ಕ: 20. ರು. ಶಾಲಾ, ಕಾಲೇಜು ವಿದ್ಯಾರ್ಥಿ/ನಿಯರಿಗೆ ಪ್ರವೇಶ ಉಚಿತ.
* ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು, ಜನಪದ ಸಂಗೀತ, ಪ್ರವಚನಗಳು ಇರುತ್ತವೆ.
* ನವೆಂಬರ್ 12ರಿಂದ 21ರವರೆಗೆ ನಡೆಯುವ ಪುಸ್ತಕ ಮೇಳಕ್ಕೆ ಸುಮಾರು 2 ಲಕ್ಷ ಜನ ಬರುವ ನಿರೀಕ್ಷೆಯಿದೆ.
ಸಮಾರಂಭದಲ್ಲಿ ಪುಸ್ತಕೋತ್ಸವ ಕಾರ್ಯಕ್ರಮದ ನಿರ್ದೇಶಕ ಬಿ.ಎಸ್. ರಘುರಾಮ್, ಬೆಂಗಳೂರು ಪುಸ್ತಕ ಪ್ರಕಾಶಕರ ಮತ್ತು ಮಾರಾಟಗಾರರ ಸಂಘದ ಅಧ್ಯಕ್ಷ ಬಲರಾಮ್ ಸಾದ್ವಾನಿ, ಉಪಾಧ್ಯಕ್ಷ ನಿತೀನ್ ಷಾ, ಕಾರ್ಯದರ್ಶಿ ದೇವರು ಭಟ್, ಖಜಾಂಚಿ ಜೆ. ಉಲ್ಲಾಸ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications