ನ.12ರಿಂದ ಬೆಂಗಳೂರು ಪುಸ್ತಕೋತ್ಸವ ಸಂಭ್ರಮ

ನಗರದ ಅರಮನೆ ಮೈದಾನದಲ್ಲಿ ಸೋಮವಾರ ಸಂಜೆ ನಡೆದ ಪರಿಚಯ ಸಮಾರಂಭದಲ್ಲಿ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಅವರು, 'ಬೆಂಗಳೂರು ಪುಸ್ತಕೋತ್ಸವ ವರ್ಷದಿಂದ ವರ್ಷಕ್ಕೆ ಹೆಚ್ಚು ಜನಪ್ರಿಯತೆ ಪಡೆಯುತ್ತಿದೆ. ಇನ್ನೊಂದು ಒಳ್ಳೆಯ ಸಂಗತಿ ಎಂದರೆ ಇಲ್ಲಿ ಕನ್ನಡ ಪುಸ್ತಕಗಳಿಗೂ ಉತ್ತಮ ಬೇಡಿಕೆ ಕಂಡುಬರುತ್ತಿರುವುದು' ಎಂದರು.
'ಟಿವಿಯತ್ತ ಆಕರ್ಷಿತರಾಗುತ್ತಿರುವ ಇಂದಿನ ಯುವ ಪೀಳಿಗೆ, ಪುಸ್ತಕ ಸಂಸ್ಕೃತಿಯನ್ನು ಮರೆಯುತ್ತಿದೆ. ಬೌದ್ಧ ಧರ್ಮ, ಶರಣ ಧರ್ಮದ ನಾಶಕ್ಕೆ ಯತ್ನಿಸಿದ ವಿರೋಧಿಗಳು ಮೊದಲು ಅಮೂಲ್ಯ ಧರ್ಮ ಗ್ರಂಥಗಳನ್ನು ನಾಶ ಮಾಡಲು ಯತ್ನಿಸಿದರು. ಏಕೆಂದರೆ, ಪೀಳಿಗೆಯಿಂದ ಪೀಳಿಗೆಗೆ ಈ ಗ್ರಂಥಗಳು ಜನತೆಯನ್ನು ಕೈಹಿಡಿದು ಮುನ್ನೆಡೆಸುತ್ತವೆ ಎಂಬ ಸತ್ಯ ಧರ್ಮ ವಿರೋಧಿಗಳಿಗೆ ಗೊತ್ತಿತ್ತು. ಇಂಥ ಮಹತ್ವದ ಪುಸ್ತಕಗಳನ್ನು ಸಂರಕ್ಷಿಸಿ, ಪುಸ್ತಕ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವುದು ಯುವ ಪೀಳಿಗೆಯ ಕರ್ತವ್ಯ' ಎಂದು ಕವಿ ಎಚ್ ಎಸ್ ವೆಂಕಟೇಶ್ ಮೂರ್ತಿ ಹೇಳಿದರು.
* ಪ್ರವೇಶ ಶುಲ್ಕ: 20. ರು. ಶಾಲಾ, ಕಾಲೇಜು ವಿದ್ಯಾರ್ಥಿ/ನಿಯರಿಗೆ ಪ್ರವೇಶ ಉಚಿತ.
* ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು, ಜನಪದ ಸಂಗೀತ, ಪ್ರವಚನಗಳು ಇರುತ್ತವೆ.
* ನವೆಂಬರ್ 12ರಿಂದ 21ರವರೆಗೆ ನಡೆಯುವ ಪುಸ್ತಕ ಮೇಳಕ್ಕೆ ಸುಮಾರು 2 ಲಕ್ಷ ಜನ ಬರುವ ನಿರೀಕ್ಷೆಯಿದೆ.
ಸಮಾರಂಭದಲ್ಲಿ ಪುಸ್ತಕೋತ್ಸವ ಕಾರ್ಯಕ್ರಮದ ನಿರ್ದೇಶಕ ಬಿ.ಎಸ್. ರಘುರಾಮ್, ಬೆಂಗಳೂರು ಪುಸ್ತಕ ಪ್ರಕಾಶಕರ ಮತ್ತು ಮಾರಾಟಗಾರರ ಸಂಘದ ಅಧ್ಯಕ್ಷ ಬಲರಾಮ್ ಸಾದ್ವಾನಿ, ಉಪಾಧ್ಯಕ್ಷ ನಿತೀನ್ ಷಾ, ಕಾರ್ಯದರ್ಶಿ ದೇವರು ಭಟ್, ಖಜಾಂಚಿ ಜೆ. ಉಲ್ಲಾಸ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications