ಶಿರಸಿಯಲ್ಲಿ 'ಯಾರೂ ನೆಡದ ಗಿಡ' ನೆಡಬನ್ನಿ

ಶಿರಸಿಯ ಚಿಂತನ ಉತ್ತರಕನ್ನಡ, ಕವಿ-ಕಾವ್ಯ ಬಳಗ ಮತ್ತು ಗದಗದ ಲಡಾಯಿ ಪ್ರಕಾಶನದ ಸಹಯೋಗದಲ್ಲಿ ಪುಸ್ತಕ ಬಿಡುಗಡೆಯಾಗುತ್ತಿದೆ. ಪುಸ್ತಕ ಅನಾವರಣಗೊಳ್ಳುವ ಸ್ಥಳ : ಹೊಟೇಲ್ ಮಧುವನದ ಆರಾಧನಾ ಸಭಾಂಗಣ. ಸಮಯ : ಮಧ್ಯಾಹ್ನ 3.30ಕ್ಕೆ.
ಕೃತಿಯನ್ನು ಬಿಡುಗಡೆ ಮಾಡುತ್ತಿರುವವರು ಕಾರ್ಕಳದ ಕವಯಿತ್ರಿ ಜ್ಯೋತಿ ಗುರುಪ್ರಸಾದ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಕಾಶಕರಾದ ಬಸವರಾಜ ಸೂಳಿಭಾವಿ ಅವರು ವಹಿಸುತ್ತಿದ್ದಾರೆ. ಕೆರೆಕೋಣದ ಮಾಧವಿ ಬಂಡಾರಿ ಅವರು ಕೃತಿಯ ಕುರಿತು ಮಾತನಾಡಲಿದ್ದಾರೆ. ಅತಿಥಿಗಳಾಗಿ ಕವಿಗಳಾದ ಡಾ. ರಾಜು ಹೆಗಡೆ ಮತ್ತು ಸುಬ್ರಾಯ ಸಿ. ಹೆಗಡೆ ಅವರು ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮದ ನಿರ್ವಹಣೆಯನ್ನು ಸಿಂಧು ಹೆಗಡೆ ಮಾಡಲಿದ್ದಾರೆ.
ಪುಸ್ತಕ ಬಿಡುಗಡೆಯೆಂದರೆ ಬೆಂಗಳೂರು, ಅದರಲ್ಲೂ ಬಸವನಗುಡಿಯ ಬಿಪಿ ವಾಡಿಯಾರ್ ರಸ್ತೆಯಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್! ನಗರದ ಇತರೆಡೆ ಕೂಡ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯುತ್ತದಾದರೂ ಐಐಡಬ್ಯೂಸಿಯನ್ನು ಹಿಂದಿಕ್ಕಲು ಸಾಧ್ಯವೇ ಇಲ್ಲ. ಪುಸ್ತಕ ಬಿಡುಗಡೆ ಮಟ್ಟಿಗೆ ಐಐಡಬ್ಯೂಸಿ ಪುಸ್ತಕ ಬಿಡುಗಡೆ ಮಾಡುವವರ ಮತ್ತು ಕಾರ್ಯಕ್ರಮಕ್ಕೆ ಬಂದು ಪುಸ್ತಕ ಕೊಳ್ಳುವವರ ನೆಚ್ಚಿನ ತಾಣ.
ಇಂಥ ಸಂದರ್ಭದಲ್ಲಿ ಮಲೆನಾಡ ಮಡಿಲಲ್ಲಿರುವ ಶಿರಸಿಯಲ್ಲಿ ಪುಸ್ತಕ ಬಿಡುಗಡೆಯಾಗುತ್ತಿರುವುದು ಕನ್ನಡಿಗರಿಗೆ ಸಂತಸದ ಸಂಗತಿ. ಹೇಗಿದ್ದರೂ ವಾರಾಂತ್ಯ. ಇನ್ನೆರಡು ದಿನಗಳ ರಜಾ ಹಾಕಿ ಶಿರಸಿಯ ಪ್ರಕೃತಿ ಸೌಂದರ್ಯವನ್ನು ಸವಿಯಲು ಸಖತ್ ಅವಕಾಶ. ಹೋಗಿ ಬನ್ನಿ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications