ಶ್ರೀವತ್ಸ ಜೋಶಿಯವರ 'ಪುಳಕದ ಟಚ್'ನಲ್ಲೇನಿದೆ?

ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಪ್ರತಿ ಭಾನುವಾರ ಪ್ರಕಟವಾಗುತ್ತಿದ್ದ 'ಪರಾಗಸ್ಪರ್ಶ' ಅಂಕಣ ಬರಹಗಳ ಸಂಕಲನವೇ 'ಪುಳಕದ ಟಚ್'. ಕಳೆದ ವರ್ಷ ಇದೇ ಅಂಕಣ ಬರಹದ ಎರಡು ಸಂಕಲನಗಳಾದ 'ಚೆಲುವಿನ ಟಚ್' ಮತ್ತು 'ಗೆಲುವಿನ ಟಚ್' ಬಿಡುಗಡೆಯಾಗಿದ್ದವು. ಒನ್ಇಂಡಿಯಾ ಕನ್ನಡದಲ್ಲಿ ಕೂಡ ಜೋಶಿಯವರು 2000ರಿಂದ 5 ವರ್ಷಗಳ ಕಾಲ 'ವಿಚಿತ್ರಾನ್ನ' ಅಂಕಣ ಬರೆಯುತ್ತಿದ್ದರು. ಆ ಅಂಕಣ ಬರಹಗಳು ಕೂಡ ಮೂರು ಭಾಗಗಳಲ್ಲಿ ಪ್ರಕಟವಾಗಿವೆ (ವಿಚಿತ್ರಾನ್ನ, ಇನ್ನೊಂದಿಷ್ಟು ವಿಚಿತ್ರಾನ್ನ, ಮತ್ತೊಂದಿಷ್ಟು ವಿಚಿತ್ರಾನ್ನ).
ಪುಳಕದ ಟಚ್ ಪುಸ್ತಕದಲ್ಲೇನಿದೆ? : ಯಾಂತ್ರಿಕ ಬದುಕಿನಲ್ಲಿ ನೈಜ ಜೀವನ ಸೌಂದರ್ಯವನ್ನು ಎಲ್ಲರಿಗೂ ಸರಳವಾಗಿ ತಿಳಿಸಬೇಕೆಂಬ ಅರ್ಥಪೂರ್ಣ ಕಾಳಜಿ ಮತ್ತು ಲಘು ಹಾಸ್ಯದ ಧಾಟಿಯಲ್ಲಿ ಓದುಗರನ್ನು ನಕ್ಕುನಗಿಸುತ್ತಲೇ ಚಿಂತನೆಗೆ ಹಚ್ಚುವ ವಿಶಿಷ್ಟ ಕರಾಮತ್ತುಗಳು ಈ ಬರಹಗಳಲ್ಲಿ ವಿಪುಲವಾಗಿ ಕಾಣಿಸುತ್ತವೆ.
ಪ್ರತಿಯೊಂದು ಲೇಖನವೂ ಅದರ ವಸ್ತುವಿನ ಸುತ್ತ ಮಾತ್ರ ಸುತ್ತದೆ ವಿವಿಧ ಸಂಗತಿಗಳ ಸಾಧ್ಯತೆ, ಹೊಂದಿಕೆ, ಹೋಲಿಕೆಗಳಿಂದ ಸೃಜನಶೀಲವಾಗುತ್ತದೆ. ಎಷ್ಟೋಸರ್ತಿ ಲೇಖನದ ತಲೆಬರಹವೇ ಓದುವಂತೆ ಪ್ರೇರೇಪಿಸುತ್ತದೆ. ಆರಂಭಿಕ ಹಂತದಲ್ಲೇ ಓದುಗರ ಮನಸ್ಸನ್ನು ಹೈಜಾಕ್ ಮಾಡುತ್ತದೆ. ಕೊನೆತನಕ ಸಲೀಸಾಗಿ ಓದಿಸಿ ಅನುಪಮ ಆನಂದಕ್ಕೆ, ಹದವಾದ ಹಿತಾನುಭವಕ್ಕೆ ಕಾರಣವಾಗುತ್ತದೆ.
ಬಾಲ್ಯ ಕಳೆದ ಹಳ್ಳಿ ಪರಿಸರದ ಸುಂದರ ನೆನಪುಗಳು, ಶಿಕ್ಷಣ ಮತ್ತು ವೃತ್ತಿಯಿಂದ ಬಂದಿರುವ ಎಂಜಿನಿಯರ್ ಮನಸ್ಸು, ತಾರ್ಕಿಕ ವಿಶ್ಲೇಷಣೆ, ಸಣ್ಣಸಣ್ಣ ಸಂಗತಿಗಳಲ್ಲೂ ಸ್ವಾರಸ್ಯವನ್ನು ಹುಡುಕುವ ಮನೋಭಾವ, ಅಕ್ಷರಗಳೊಂದಿಗೆ ಆಟವಾಡುತ್ತ ಪದವಿನೋದದಿಂದ ಹೊಸಹೊಸ ಅರ್ಥಗಳನ್ನು ಹುಟ್ಟುಹಾಕುತ್ತ ಸಾಗುವ ನವಿರಾದ ನಿರೂಪಣೆ- ಇವೆಲ್ಲವೂ ಶ್ರೀವತ್ಸ್ ಜೋಶಿಯವರ ಬರವಣಿಗೆಗೆ ತನ್ನದೇ ಆದ ಛಾಪು ನೀಡುತ್ತದೆ.
ಕಲೆ, ವಿಜ್ಞಾನ, ಸಂಸ್ಕೃತಿ ಎಲ್ಲವನ್ನೂ ಒಳಗೊಂಡ ವಿಷಯಗಳು ಆಮೀಬದಿಂದ ಅನಂತದತ್ತ ಸಾಗುತ್ತವೆ. ಸಣ್ಣಸಣ್ಣ ಸ್ವಾರಸ್ಯಕರ ಸಂಗತಿಗಳನ್ನು ಬೀಜದೊಳಗಿನ ವೃಕ್ಷದಂತೆ ಮುಂದಿಟ್ಟು ಓದುಗರನ್ನು ಸೂಕ್ಷ್ಮಗ್ರಾಹಿಗಳನ್ನಾಗಿ ಮಾಡುತ್ತವೆ.
ಪುಳಕದ ಟಚ್ ವಿವರಗಳು
ಪುಸ್ತಕದ ಹೆಸರು : "ಪರಾಗಸ್ಪರ್ಶ- ಪುಳಕದ ಟಚ್!" (ಇದು ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಜುಲೈ 2011ರಿಂದ ಮೇ 2012ರ ಅವಧಿಯಲ್ಲಿ ಪ್ರಕಟವಾದ 'ಪರಾಗಸ್ಪರ್ಶ' ಅಂಕಣ ಬರಹಗಳ ಸಂಕಲನ)
ಲೇಖಕ : ಶ್ರೀವತ್ಸ ಜೋಶಿ
ಪ್ರಕಾಶಕರು : ಗೀತಾ ಬುಕ್ ಹೌಸ್, ಮೈಸೂರು
ಮುಖಪುಟ ವಿನ್ಯಾಸ : ವಿನಯ್ ಸಾಯ, ಉಡುಪಿ
ಬೆಲೆ : ರೂ.135
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications