ಛಂದ ಪುಸ್ತಕದಿಂದ ಹೊಸ ಕಥಾಸಂಕಲನ ಬಿಡುಗಡೆ
ಬೆಂಗಳೂರು, ಆ. 24 : ಯುವ ಬರಹಗಾರರಿಗೆ ಮತ್ತು ಹೊಸ ಲೇಖಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಛಂದ ಪುಸ್ತಕ ಪ್ರಕಾಶನ ಪ್ರತಿವರ್ಷ ಸಣ್ಣಕಥಾ ಸ್ಪರ್ಧೆಯನ್ನು ನಡೆಸುತ್ತಿರುತ್ತದೆ ಮತ್ತು ಆಯ್ಕೆಯಾದ ಪುಸ್ತಕವನ್ನು ಬಿಡುಗಡೆ ಮಾಡುತ್ತಿರುತ್ತದೆ. ಅಂಥದೊಂದು ಪುಸ್ತಕ ಬಿಡುಗಡೆಯ ಸಂಭ್ರಮ ಮತ್ತೆ ಬೆಂಗಳೂರಿನ ಪುಸ್ತಕ ಪ್ರೇಮಿಗಳ ಎದುರಿಗೆ ಬಂದಿದೆ.
ಛಂದ ಪುಸ್ತಕ ಸ್ಪರ್ಧೆಯಲ್ಲಿ 2013ರಲ್ಲಿ ಬಹುಮಾನ ಪಡೆದ ಕೃತಿ, ಮೌನೇಶ್ ಬಡಿಗೇರ್ ಅವರ 'ಮಾಯಾ ಕೋಲಾಹಲ' ಎಂಬ ಶೀರ್ಷಿಕೆಯ ಕಥಾಸಂಕಲನ ಆಗಸ್ಟ್ 25, ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಚಾಮರಾಜಪೇಟೆ, ಪಂಪ ಮಹಾಕವಿ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಬಿಡುಗಡೆಯಾಗುತ್ತಿದೆ.

ಸಾಹಿತ್ಯ ಪ್ರೇಮಿಗಳಿಗೆ ಇದಕ್ಕಿಂತ ರಸಗವಳ ಇನ್ನೇನು ಬೇಕು? ಹೊಸ ಮತ್ತು ಹಳೆ ಪುಸ್ತಕಗಳನ್ನು ಕೊಳ್ಳುವುದು, ಹೊಸ ಬರಹಗಳನ್ನು ಓದುವುದು, ಹೊಸ ಗೆಳೆಯರನ್ನು ಪರಿಚಯ ಮಾಡಿಕೊಳ್ಳುವುದು, ಹಳೆ ಗೆಳೆಯ ಗೆಳತಿಯರನ್ನು ಕಂಡು ಭೇಟಿಯಾಗುವುದು, ಜೊತೆಗೆ ಪುಸ್ತಕ ಬಿಡುಗಡೆಗೆ ಬಂದ ಘಟಾನುಘಟಿ ಸಾಹಿತಿಗಳನ್ನು ಕಂಡು ಮಾತನಾಡಿಸುವುದು, ಹರಟೆ ಹೊಡೆಯುವುದು, ಫೋಟೋ ಕ್ಲಿಕ್ಕಿಸುವುದು, ಫೇಸ್ ಬುಕ್ಕಲ್ಲಿ ಹಾಕಿಕೊಳ್ಳುವುದು.
ಮೌನೇಶ್ ಬಡಿಗೇರ್ ಅವರ ಹೊಸ ಪುಸ್ತಕ 'ಮಾಯಾ ಕೋಲಾಹಲ' ಕೃತಿಯ ಕುರಿತು ಖ್ಯಾತ ವಿಮರ್ಶಕ ಟಿ.ಪಿ. ಅಶೋಕ್ ಅವರು ಮಾತನಾಡಲಿದ್ದಾರೆ. ಜೊತೆಗೆ, 'ಹೊಸ ಕಾಲ, ಹೊಸ ಬರಹ, ಹೊಸ ಸಂಕಟಗಳು' ಎಂಬ ವಿಷಯ ಕುರಿತು ಆನಂದ ಝಂಜರವಾಡ ಅವರು ಉಪನ್ಯಾಸವನ್ನು ನೀಡಲಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಬರುವವರು ಮನೆಯಲ್ಲಿ ಉಪಹಾರ ಮುಗಿಸಿಕೊಂಡು ಬರಬೇಕಿಲ್ಲ, ಉಪಹಾರ ಆಯೋಜಿಸಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications