ಫೆ.20ಕ್ಕೆ ಟಿಜಿ ಶ್ರೀನಿಧಿ 'ಬೆರಳ ತುದಿಯ ಬೆರಗು' ಪುಸ್ತಕ ಲೋಕಾರ್ಪಣೆ
ಬೆಂಗಳೂರು, ಫೆಬ್ರವರಿ 18: ತಾಯ್ನುಡಿ ದಿನ ಸಂದರ್ಭಕ್ಕೆ ಸುರಾನಾ ಕಾಲೇಜು, ಇಜ್ಞಾನ ಟ್ರಸ್ಟ್ ಹಾಗೂ ವಿಕಾಸ ಪ್ರಕಾಶನ ಸಹಯೋಗದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂತಾರಾಷ್ಟ್ರೀಯ ತಾಯ್ನುಡಿ ದಿನ-2021ರ ಸಂದರ್ಭಕ್ಕೆ ಬೆಂಗಳೂರಿನ ಸುರಾನಾ ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶನಿವಾರದಂದು (ಫೆ. 20) ಇಜ್ಞಾನ ಟ್ರಸ್ಟ್ ಸ್ವಯಂಸೇವಾ ಸಂಸ್ಥೆಯ ಸಹಯೋಗದಲ್ಲಿ ಕಾಲೇಜಿನ ಪದವಿ ವಿದ್ಯಾರ್ಥಿಗಳಿಗಾಗಿ 'ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ' ಕಾರ್ಯಾಗಾರವನ್ನು ನಡೆಸಲಾಗುತ್ತಿದೆ.
ತಂತ್ರಜ್ಞಾನ ಜಗತ್ತನ್ನು ಕುರಿತು ಲೇಖಕ ಟಿ. ಜಿ. ಶ್ರೀನಿಧಿ ಬರೆದಿರುವ 'ಬೆರಳ ತುದಿಯ ಬೆರಗು' ಕೃತಿಯನ್ನೂ ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಗುವುದು.

ಸುರಾನಾ ಕಾಲೇಜಿನ ಕನ್ನಡ ವಿಭಾಗವು ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ ಕುರಿತ ಕಾರ್ಯಾಗಾರಗಳನ್ನು ಹಲವು ವರ್ಷಗಳಿಂದ ಆಯೋಜಿಸುತ್ತಿದ್ದು, ಇಜ್ಞಾನ ಟ್ರಸ್ಟ್ ಸ್ವಯಂಸೇವಾ ಸಂಸ್ಥೆ ಈ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದೆ.
ಸಂಸ್ಥೆಯ ಟಿ. ಜಿ. ಶ್ರೀನಿಧಿ ಹಾಗೂ ಅಭಿಷೇಕ್ ಜಿ. ಎಸ್. ಅವರು ನಡೆಸಿಕೊಡಲಿರುವ ಈ ಕಾರ್ಯಾಗಾರವು ಭಾಷೆಗೆ ಸಂಬಂಧಿಸಿದ ತಂತ್ರಜ್ಞಾನಗಳು, ಕನ್ನಡ ತಂತ್ರಾಂಶಗಳು, ಕನ್ನಡದ ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿರುವ ಅವಕಾಶಗಳು ಸೇರಿದಂತೆ ಹಲವು ವಿಷಯಗಳ ಸ್ಥೂಲ ಪರಿಚಯ ಮಾಡಿಕೊಡಲಿದೆ.

Recommended Video
ಅಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಹಿರಿಯ ಪತ್ರಕರ್ತೆ ಡಾ. ಆರ್. ಪೂರ್ಣಿಮಾ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸುರಾನಾ ವಿದ್ಯಾಸಂಸ್ಥೆಗಳ ಮ್ಯಾನೇಜಿಂಗ್ ಟ್ರಸ್ಟೀ ಡಾ. ಅರ್ಚನಾ ಸುರಾನಾ, ಪ್ರಾಂಶುಪಾಲರಾದ ಡಾ. ಭವಾನಿ ಎಂ. ಆರ್., ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ವತ್ಸಲಾ ಮೋಹನ್, ಇಜ್ಞಾನ ಟ್ರಸ್ಟ್ನ ಟಿ. ಜಿ. ಶ್ರೀನಿಧಿ ಉಪಸ್ಥಿತರಿರಲಿದ್ದಾರೆ.
ಲೋಕಾರ್ಪಣೆಯಾಗುತ್ತಿರುವ 'ಬೆರಳ ತುದಿಯ ಬೆರಗು' ಕೃತಿಯನ್ನು ವಿಕಾಸ ಪ್ರಕಾಶನ ಪ್ರಕಟಿಸಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications