'ಈ ಹೊತ್ತಿಗೆ' ಸಾಹಿತ್ಯ ವಿಮರ್ಶಾ ಕಮ್ಮಟಕ್ಕೆ ಆಹ್ವಾನ
'ಈ ಹೊತ್ತಿಗೆ'ಯು ಇದೇ ನವೆಂಬರ್ 21 ಮತ್ತು 22ರಂದು (ಶನಿವಾರ ಮತ್ತು ಭಾನುವಾರ), ಖ್ಯಾತ ಸಾಹಿತಿ ಎಸ್. ದಿವಾಕರ್ ಅವರ ನಿರ್ದೇಶನದಲ್ಲಿ 'ಸಾಹಿತ್ಯ ವಿಮರ್ಶಾ ಕಮ್ಮಟ'ವನ್ನು ಏರ್ಪಡಿಸಿ, ಅದರಲ್ಲಿ ಭಾಗವಹಿಸಲು ರಾಜ್ಯಾದ್ಯಂತ ಆಸಕ್ತ ಓದುಗರು ಮತ್ತು ಬರಹಗಾರರನ್ನು ಆಹ್ವಾನಿಸುತ್ತಿದೆ. ಆಸಕ್ತರು ದಿನಾಂಕ ನವೆಂಬರ್ 10ರ ಒಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಕೋರಲಾಗಿದೆ.
ಸಾಹಿತ್ಯ ವಿಮರ್ಶೆ - ಏನು? ಯಾಕೆ?, ವಿಮರ್ಶೆಯ ಆಯಾಮಗಳು, ಸಹೃದಯ, ನವ್ಯ, ಬಂಡಾಯ, ಸ್ತ್ರೀವಾದಿ, ಆಧುನಿಕೋತ್ತರ, ರೂಪ ನಿಷ್ಠ ಮತ್ತು ಮನೋವಿಶ್ಲೇಷಣಾ ವಿಮರ್ಶೆಗಳು ಕಮ್ಮಟದ ವಿಷಯಗಳಾಗಿರುತ್ತವೆ.
ನಮ್ಮ ನಾಡಿನ ಖ್ಯಾತ ವಿಮರ್ಶಕರುಗಳಾದ ಎಸ್ ದಿವಾಕರ್, ಸಿ.ಎನ್ ರಾಮಚಂದ್ರನ್, ಓ.ಎಲ್ ನಾಗಭೂಷಣಸ್ವಾಮಿ, ಬಸವರಾಜ ಕಲ್ಗುಡಿ, ಬಿ,ಎನ್ ಸುಮಿತ್ರಾಬಾಯಿ, ಎಸ್.ಆರ್ ವಿಜಯಶಂಕರ್, ಕೆ.ವೈ ನಾರಾಯಣಸ್ವಾಮಿ ಮತ್ತು ಜಿ.ಬಿ ಹರೀಶ್ ಅವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಈ ಕಮ್ಮಟವನ್ನು ನಡೆಸಿಕೊಡಲಿದ್ದಾರೆ. [ಅಂದು ಉಪನ್ಯಾಸಕಿ, ಇಂದು ಸಾಹಿತ್ಯ ಪ್ರಸಾರಕಿ]

ಎರಡು ದಿನದ ಈ ಕಮ್ಮಟದಲ್ಲಿ ಭಾಗವಹಿಸಲು ಐದು ನೂರು ರೂಪಾಯಿಗಳ (ರೂ. 500/-) ಪ್ರವೇಶ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪರ ಊರಿನಿಂದ ಬರಲಿಚ್ಛಿಸುವ ಅಭ್ಯರ್ಥಿಗಳು ತಾವು ಬಂದು ಹೋಗುವ ಮತ್ತು ಉಳಿದುಕೊಳ್ಳುವ ವ್ಯವಸ್ಥೆಯನ್ನು ತಾವೇ ನೋಡಿಕೊಳ್ಳಬೇಕು.
ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ನಡೆಯುವ ಈ ಕಮ್ಮಟದಲ್ಲಿ ಎರಡೂ ದಿನ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತದೆ.
ಕಮ್ಮಟ ನಡೆವ ಸ್ಥಳ : ಕಪ್ಪಣ್ಣ ಅಂಗಳ, 148/1, 32, ಎ ಮುಖ್ಯರಸ್ತೆ, ಜೆ.ಪಿ.ನಗರ, ಮೊದಲ ಹಂತ, ಬೆಂಗಳೂರು - 560 078.
ಆಸಕ್ತರು ದಿನಾಂಕ ನವೆಂಬರ್ 10ರ ಒಳಗಾಗಿ ತಮ್ಮ ಹೆಸರು, ವಿಳಾಸ, ಫೋನ್ ನಂಬರ್ ಮತ್ತು ಇ ಮೇಲ್ ಐಡಿಗಳನ್ನು ಈ ಕೆಳಗಿನ ವಿಳಾಸಕ್ಕೆ ಇಲ್ಲವೆ ಇ ಮೇಲ್ ಐಡಿಗೆ ಕಳುಹಿಸಿ ನೊಂದಾಯಿಸಿಕೊಳ್ಳಬಹುದು. [ಭಾವ ಜೀವಿಯ ಕೈ ಹಿಡಿದ ಪ್ರೀತಿಯ ಸೆಲೆ!]
ವಿವರಗಳನ್ನು ಕಳುಹಿಸಬೇಕಾದ ವಿಳಾಸ:
'ಈ ಹೊತ್ತಿಗೆ', #65, 'ಮುಗುಳ್ನಗೆ', 3rd A ಅಡ್ಡರಸ್ತೆ, ಪಿ.ಎನ್.ಬಿ.ನಗರ, ದೊಡ್ಡಕಲ್ಲಸಂದ್ರ, ಕೋಣನಕುಂಟೆ, ಬೆಂಗಳೂರು - 560 062.
ಈಮೇಲ್ : [email protected]
ಮೊಬೈಲ್ : +91 99456 05906
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications