ಬೆಂಗಳೂರಿನಲ್ಲಿ ಶ್ರೀವತ್ಸ ಜೋಶಿ ಪುಸ್ತಕ ಬಿಡುಗಡೆ
ವಿಶ್ವವಾಣಿ ಪತ್ರಿಕೆ ಆರಂಭವಾದಾಗಿನಿಂದಲೂ ಪ್ರತಿ ಭಾನುವಾರ ಪ್ರಕಟವಾಗಿ ಅಪಾರ ಮೆಚ್ಚುಗೆ ಗಳಿಸಿರುವ ತಿಳಿರುತೋರಣ ಅಂಕಣಬರಹಗಳು ಇದೀಗ ಪುಸ್ತಕ ರೂಪದಲ್ಲಿ ಹೊರಬರುತ್ತಿವೆ. ಬಿಡಿ ಬಿಡಿ ಲೇಖನಗಳನ್ನು ಹಿಡಿಯಾಗಿ ಒಂದೇ ಕಡೆ ಓದುವ ಅವಕಾಶ ಓದುಗರಿಗೆ ಸಿಗಲಿದೆ.
ಪರ್ಣಮಾಲೆ-1 ಮತ್ತು ಪರ್ಣಮಾಲೆ-2 ಎಂಬ ಶೀರ್ಷಿಕೆಯುಳ್ಳ ಈ ಅವಳಿ ಪುಸ್ತಕಗಳನ್ನು ಸಾಹಿತ್ಯ ಪ್ರಕಾಶನ ಹುಬ್ಬಳ್ಳಿ ಇವರು ಪ್ರಕಟಿಸಿದ್ದಾರೆ. ಪುಸ್ತಕಗಳ ಲೋಕಾರ್ಪಣೆಯ ಅನೌಪಚಾರಿಕ ಕಾರ್ಯಕ್ರಮವೊಂದನ್ನು ಶನಿವಾರ 16, ಡಿಸೆಂಬರ್ 2017ರಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಸುಚಿತ್ರಾ ಸಿನೆಮಾ ಮತ್ತು ಸಾಂಸ್ಕೃತಿಕ ಅಕಾಡೆಮಿ ಆವರಣದ ನಾಣಿ ಅಂಗಳದಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ಸಾಂಪ್ರದಾಯಿಕ ಪುಸ್ತಕ ಬಿಡುಗಡೆ ಸಮಾರಂಭಗಳಂತಿರದೆ, ಸ್ನೇಹಸಮ್ಮಿಲನದ ಆತ್ಮೀಯ ಸ್ವರೂಪದ್ದಾಗಿರುತ್ತದೆ. ಭಾಷಣಗಳ ಭೋರ್ಗರೆತ ಇರುವುದಿಲ್ಲ. ಅಮೆರಿಕದಿಂದ ರಜೆಯಲ್ಲಿ ಬೆಂಗಳೂರಿಗೆ ಬಂದಿರುವ ಅಂಕಣಕಾರ ಶ್ರೀವತ್ಸ ಜೋಶಿ ಅವರೊಂದಿಗೆ ಓದುಗರಿಗೆ ಮುಕ್ತ ಸಂವಾದಕ್ಕೆ ಒಂದು ಅವಕಾಶ.
ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಮತ್ತು ಸಾಹಿತ್ಯ ಪ್ರಕಾಶನದ ಎಂ.ಎ.ಸುಬ್ರಹ್ಮಣ್ಯ ಉಪಸ್ಥಿತರಿರುತ್ತಾರೆ. ಪುಸ್ತಕಗಳನ್ನು ಲೋಕಾರ್ಪಣೆ ಮಾಡುವುದಕ್ಕೆ ಸಭಿಕರಲ್ಲೇ ಯಾರಾದರೂ ಒಬ್ಬರನ್ನು ವೇದಿಕೆಗೆ ಕರೆಸುವ ವಿನೂತನ ಯೋಜನೆ ಇದೆ. ಲೋಕಾರ್ಪಣೆಗೊಂಡ ಪುಸ್ತಕಗಳು ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಲಭ್ಯವಿರುತ್ತವೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications