ಬೆಂಗಳೂರಿನಲ್ಲಿ ಶ್ರೀವತ್ಸ ಜೋಶಿ ಪುಸ್ತಕ ಬಿಡುಗಡೆ
ವಿಶ್ವವಾಣಿ ಪತ್ರಿಕೆ ಆರಂಭವಾದಾಗಿನಿಂದಲೂ ಪ್ರತಿ ಭಾನುವಾರ ಪ್ರಕಟವಾಗಿ ಅಪಾರ ಮೆಚ್ಚುಗೆ ಗಳಿಸಿರುವ ತಿಳಿರುತೋರಣ ಅಂಕಣಬರಹಗಳು ಇದೀಗ ಪುಸ್ತಕ ರೂಪದಲ್ಲಿ ಹೊರಬರುತ್ತಿವೆ. ಬಿಡಿ ಬಿಡಿ ಲೇಖನಗಳನ್ನು ಹಿಡಿಯಾಗಿ ಒಂದೇ ಕಡೆ ಓದುವ ಅವಕಾಶ ಓದುಗರಿಗೆ ಸಿಗಲಿದೆ.
ಪರ್ಣಮಾಲೆ-1 ಮತ್ತು ಪರ್ಣಮಾಲೆ-2 ಎಂಬ ಶೀರ್ಷಿಕೆಯುಳ್ಳ ಈ ಅವಳಿ ಪುಸ್ತಕಗಳನ್ನು ಸಾಹಿತ್ಯ ಪ್ರಕಾಶನ ಹುಬ್ಬಳ್ಳಿ ಇವರು ಪ್ರಕಟಿಸಿದ್ದಾರೆ. ಪುಸ್ತಕಗಳ ಲೋಕಾರ್ಪಣೆಯ ಅನೌಪಚಾರಿಕ ಕಾರ್ಯಕ್ರಮವೊಂದನ್ನು ಶನಿವಾರ 16, ಡಿಸೆಂಬರ್ 2017ರಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಸುಚಿತ್ರಾ ಸಿನೆಮಾ ಮತ್ತು ಸಾಂಸ್ಕೃತಿಕ ಅಕಾಡೆಮಿ ಆವರಣದ ನಾಣಿ ಅಂಗಳದಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ಸಾಂಪ್ರದಾಯಿಕ ಪುಸ್ತಕ ಬಿಡುಗಡೆ ಸಮಾರಂಭಗಳಂತಿರದೆ, ಸ್ನೇಹಸಮ್ಮಿಲನದ ಆತ್ಮೀಯ ಸ್ವರೂಪದ್ದಾಗಿರುತ್ತದೆ. ಭಾಷಣಗಳ ಭೋರ್ಗರೆತ ಇರುವುದಿಲ್ಲ. ಅಮೆರಿಕದಿಂದ ರಜೆಯಲ್ಲಿ ಬೆಂಗಳೂರಿಗೆ ಬಂದಿರುವ ಅಂಕಣಕಾರ ಶ್ರೀವತ್ಸ ಜೋಶಿ ಅವರೊಂದಿಗೆ ಓದುಗರಿಗೆ ಮುಕ್ತ ಸಂವಾದಕ್ಕೆ ಒಂದು ಅವಕಾಶ.
ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಮತ್ತು ಸಾಹಿತ್ಯ ಪ್ರಕಾಶನದ ಎಂ.ಎ.ಸುಬ್ರಹ್ಮಣ್ಯ ಉಪಸ್ಥಿತರಿರುತ್ತಾರೆ. ಪುಸ್ತಕಗಳನ್ನು ಲೋಕಾರ್ಪಣೆ ಮಾಡುವುದಕ್ಕೆ ಸಭಿಕರಲ್ಲೇ ಯಾರಾದರೂ ಒಬ್ಬರನ್ನು ವೇದಿಕೆಗೆ ಕರೆಸುವ ವಿನೂತನ ಯೋಜನೆ ಇದೆ. ಲೋಕಾರ್ಪಣೆಗೊಂಡ ಪುಸ್ತಕಗಳು ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಲಭ್ಯವಿರುತ್ತವೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications