ವಿಶಿಷ್ಟ ಕಾರ್ಯಕ್ರಮಕ್ಕೆ ಸಜ್ಜಾಗಿದೆ ಸಾಹಿತ್ಯ ಪರಿಷತ್ತು

ಇದರಲ್ಲಿ ವೈಶಿಷ್ಟ್ಯತೆ ಏನಿದೆ ಎಂದು ನೀವು ಅಚ್ಚರಿ ಪಡುವುದು ಗ್ಯಾರಂಟಿ. ಆ ವೈಶಿಷ್ಟ್ಯತೆ ಏನೆಂದರೆ ಕನ್ನಡದ ಪ್ರಪ್ರಥಮ ಮೊಬೈಲ್ ಕೃತಿ, ಅಂದರೆ ಸಂಪೂರ್ಣವಾಗಿ ಮೊಬೈಲ್ ನಲ್ಲಿಯೇ ಬರೆದಿರುವ 'ಕನಸಿನ ಚಿಟ್ಟೆಯ ಹಿಡಿಯಲು ಹೊರಟು' ಎಂಬ ಕನ್ನಡ ಕಾದಂಬರಿ ಬಿಡುಗಡೆಯಾಗಲಿದೆ. ಚೀನಾದ ಲೇಖಕರೊಬ್ಬರು ಪ್ರಥಮ ಬಾರಿಗೆ ಈ ಪ್ರಯೋಗ ಮಾಡಿದ್ದರೂ, ಕನ್ನಡದ ಮಟ್ಟಿದೆ ಇದೇ ಪ್ರಥಮ. ['ಕನಸಿನ ಚಿಟ್ಟೆ ಹಿಡಿಯಲು...' ಮೂಡಿದ ಬಗೆ]
ಇದರ ಜೊತೆ, ಒನ್ಇಂಡಿಯಾ ಕನ್ನಡ ಪೋರ್ಟಲ್ ನಲ್ಲಿ ಪ್ರಕಟವಾಗುತ್ತಿದ್ದ ಸ್ಫೂರ್ತಿಸೆಲೆ ಉಕ್ಕಿಸುವ ಸಣ್ಣಕಥೆಗಳ ಸಂಕಲನ 'ಶುಭಸಂಕಲ್ಪ' ಪುಸ್ತಕ ಕೂಡ ಬಿಡುಗಡೆಯಾಗಲಿದೆ. ನೋವೇ ಅನಾರೋಗ್ಯ, ಸಂತೋಷವೇ ಆರೋಗ್ಯ, ಶುಭಸಂಕಲ್ಪದೊಂದಿಗೆ ಗುಣಮುಖರಾಗುವುದೇ ಭಾಗ್ಯ! ಎಂಬ ಅಡಿಬರಹದೊಂದಿಗೆ ಈ ಸ್ಫೂರ್ತಿದಾಯಕ ಸಣ್ಣಕಥೆಗಳು ಪ್ರತಿ ಭಾನುವಾರ ಪ್ರಕಟವಾಗುತ್ತಿದ್ದವು. ಅದ್ವೈತ ಪಬ್ಲಿಕೇಷನ್ ಈ ಎರಡು ಕೃತಿಗಳನ್ನು ಪ್ರಕಟಿಸಿದೆ.
ಒನ್ಇಂಡಿಯಾ ಕನ್ನಡ ಸಂಪಾದಕ ಎಸ್.ಕೆ. ಶಾಮ ಸುಂದರ, ಉದಯವಾಣಿ ಪುರವಣಿ ಸಂಪಾದಕ ಮತ್ತು ಲೇಖಕ ಗಿರೀಶ್ ರಾವ್ (ಜೋಗಿ), ಕವಯಿತ್ರಿ ಮತ್ತು ಪತ್ರಕರ್ತೆ ಚೇತನಾ ತೀರ್ಥಹಳ್ಳಿ, ರಂಗಕರ್ಮಿ ಮತ್ತು ಜನಪ್ರಿಯ ಚಿತ್ರನಟಿ ಸುಕೃತ ವಾಗ್ಲೆ ಮುಂತಾದ ಗಣ್ಯರು ಶುಭಹಾರೈಸಲು ಬರುತ್ತಿದ್ದಾರೆ. ಇವರೆಲ್ಲ ಇದ್ದಾರೆಂದರೆ ಮಾತುಕತೆಗಳಿಗೆ ಕೊರತೆ ಇರುವುದಿಲ್ಲ.
ವಿದ್ಯಾಶಂಕರ ಹರಪನಹಳ್ಳಿ ಅವರು ಕಾರ್ಯಕ್ರಮಕ್ಕೆ ಬರುವ ಪುಸ್ತಕ ಪ್ರೇಮಿಗಳೇ ಮುಖ್ಯ ಅತಿಥಿಗಳು ಎಂದು ಹೇಳಿದ್ದಾರೆ. ಮುಖ್ಯ ಅತಿಥಿಗಳೆಂದ ಮೇಲೆ ಪುಸ್ತಕ ಬಿಡುಗಡೆ ತಪ್ಪಿಸಿಕೊಂಡರೆ ಹೇಗೆ? ಖಂಡಿತ ಬರ್ತೀರಿ ತಾನೆ? ಹೇಗಿದ್ರೂ ಮತ್ತೊಂದಿಷ್ಟು ಗೆಳೆಯ, ಗೆಳತಿಯರು ಹರಟೆಗೆ ಸಿಗುತ್ತಾರೆ. ಚಳಿಗೆ ಹೆದರಿಕೊಂಡು ಮನೆಯಲ್ಲಿ ಕುಳಿತುಕೊಳ್ಳಬೇಡಿ, ಬಿಸಿಬಿಸಿ ಕಾಫಿ ಮತ್ತು ತಿಂಡಿಯನ್ನು ವಿದ್ಯಾಶಂಕರ ಅರೇಂಜ್ ಮಾಡಿರುತ್ತಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications