ಪುಸ್ತಕ ವಿಮರ್ಶೆ: ಅಭದ್ರತೆ, ಅಹಮ್ಮಿನ ನಡುವೆ ಸಾಗುವ ಸತ್ತು
ಸತ್ತು - ಕನ್ನಡದ ಮಟ್ಟಿಗೆ ವಸ್ತು, ಪಾತ್ರಗಳು, ಹಾಗೂ ನಿರೂಪಣೆಯಲ್ಲಿ revolutionary ಪ್ರಯತ್ನ ಅನ್ನಿಸಿತು. ಓದುಗಳಾಗಿ ನನ್ನ ಸಂವೇದನೆಯ ಮತ್ತು ಆಲೋಚನೆಯ ವ್ಯಾಪ್ತಿಯನ್ನು ಹಿಗ್ಗಿಸಿದ ಪುಸ್ತಕ ಇದು.
ಕೆಲವೇ ದಿನಗಳಲ್ಲಿ ನಡೆಯುವ ಕೆಲವೇ ಪಾತ್ರಗಳ ಕಥೆ. ಆದರೆ ಇಲ್ಲಿರುವ ಜಾತಿ, ಕ್ಲಾಸ್, ಕಲೆ, ಪ್ರಜ್ಞೆ, ನೈತಿಕತೆ, ವಿಜ್ಞಾನ ಇವುಗಳ ಕಾಂಪ್ಲೆಕ್ಸ್ ಹೆಣಿಗೆ ಮತ್ತು ಸಾಮಾಜಿಕ ವಿಶ್ಲೇಷಣೆಯ ಸಾಂದ್ರತೆ ಬಹುಕಾಲ ಯೋಚನೆಗೆ ಹಚ್ಚುವಂತದ್ದು. ಇದರ ಜೊತೆಗೆ ಸಮಯದ ಧೋರಣೆ ಮತ್ತು ಭ್ರಾಮಕತೆಯ ಹಿನ್ನೆಲೆ ಪಾತ್ರಗಳ ಅಸ್ತಿತ್ವಕ್ಕೆ ಹೊಸದೊಂದು ಆಯಾಮ ಕೊಟ್ಟಿದೆ.
ನಮ್ಮ ಅಸ್ತಿತ್ವ ಎಂಬ ಭ್ರಮೆಯ ಸುತ್ತ ನಾವು ಕಟ್ಟಿಕೊಳ್ಳುವ ಧೋರಣೆ, ಈ ಭ್ರಮೆಯನ್ನು ಜೀವಂತವಾಗಿಡಲು ಪಡುವ ಹೆಣಗಾಟ, ಮಾನಸಿಕ ಹಿಂಸೆ. ವೈಯುಕ್ತಿಕ ಧೋರಣೆ, ಭ್ರಮೆಗಳನ್ನು ರಕ್ಷಿಸಿಕೊಳ್ಳುವ ಭರದಲ್ಲಿ ಆಗುವ ಸಾಮಾಜಿಕ ಪರಿಣಾಮ. ಆರ್ಥಿಕ ಮತ್ತು ಸಾಮಾಜಿಕ ಸ್ತರಗಳ ನಡುವೆ, generationally perpetuate ಆಗುವ hierarchy ಮತ್ತು power imbalance, ಇವೆಲ್ಲ ಸತ್ತುವಿನಲ್ಲಿ ನಮಗೆ ಎದುರಾಗುತ್ತವೆ.

ದೇಬ್ನ ಅಸ್ತಿತ್ವದ ಭಾಗವೇ ಆಗಿರುವ ಕಾರು, ಡಾಬ್ರಿ, ಸುಪರ್ಣಾಳ ಜೊತೆಗಿನ relationship - ಅವರುಗಳ ಬಗ್ಗೆ ಅವನ ಅಭದ್ರತೆ, ಅವುಗಳ ಜೊತೆ ಅವನ ಅಹಮ್ಮಿನ ಗುರುತಿಸಿಕೊಳ್ಳುವಿಕೆ, ಅವುಗಳ ಬಗ್ಗೆ ನಿರಂತರ ಸಾಗುವ ಸ್ವಗತ,ಅವುಗಳಿಗೆ ಧಕ್ಕೆ ಬಂದಾಗ (real or imaginary) ಅನಾವರಣ ವಾಗುವ ಅವನ ಘಾತುಕತೆ, ಅಸ್ತಿತ್ವದ ಭ್ರಮೆ ಕಳಚಿದಾಗ ದೇಬ್ನನ್ನು ಆವರಿಸುವ ಅನಾಥಪ್ರಜ್ಞೆ ಮತ್ತು acute desolation - ಇವೆಲ್ಲವೂ ಬುದ್ಧಿಯ ಆಚೆಗೆ, ನಮ್ಮ ಭಾವಕ್ಕೆ ತಾಕುತ್ತವೆ.
ದೇಬ್ ಮತ್ತು ಸುಪರ್ಣಾಳ ಧೋರಣೆಗಳ ತಿಕ್ಕಾಟ ಎಷ್ಟೋ ಕಡೆ ಇಡೀ ಸಮಾಜದ ಸಂಘರ್ಷದ ಪ್ರತಿಫಲನ ಎನಿಸಿದರೆ, ಕೆಲವೊಂದು ಕಡೆ ನಮ್ಮಲ್ಲೇ ಅಂತರ್ಗತವಾಗಿ ಇರುವ ದ್ವಂದ್ವದ (ಆದರ್ಶ vs ಆಚರಣೆ ) ಬಗ್ಗೆ ಯೋಚನೆ ಮಾಡುವಂತೆ ಮಾಡುತ್ತವೆ.

ಕೊನೆ ಕೊನೆಗೆ, 'ಈಗ' ಎಂಬುದು ಇಲ್ಲ, ಸಮಯ ಎಂಬುದು ಇಲ್ಲ ಎನ್ನುತ್ತಲೇ ಸುದೀಪ್ತೋ, ದೇಬ್ ನಿಂದಾಗುವ linear cause and effect ಗೆ ಸಾಕ್ಷಿ ಆದನಾ ಅಥವಾ cause and causation ಎಂಬುದು ಚಲನೆಯ ಎರಡು ಬಿಂದು ಅಷ್ಟೇ ಅದಕ್ಕೂ ಸಮಯಕ್ಕೂ ಸಂಬಂಧ ಇಲ್ಲ ಎಂದು ಲೇಖಕರು ಹೊಸ ದೃಷ್ಟಾಂತ ಇಲ್ಲಿ ನೀಡಿದ್ದಾರಾ ಎಂಬ ಜಿಜ್ಞಾಸೆ ಕೂಡ ನನಗೆ ಬಂತು.
ಕರಣಂ ಅವರ ಮುಂಚಿನ ಕಾದಂಬರಿಗಳಿಗಿಂತ ಸತ್ತು descriptive ಮತ್ತು visual ಆಗಿ ನನಗೆ ಕಂಡಿತು. ಪ್ರತಿಯೊಂದು ಸ್ಥಳ, ಘಟನೆ ಮತ್ತು ಆಲೋಚನೆಯ ಲಹರಿಯೂ ವಿಸ್ತೃತವಾಗಿ immersive ಆಗಿದೆ. ಇಲ್ಲಿನ ಸಾಮಾಜಿಕ ವ್ಯಾಖ್ಯಾನ observation ನಲ್ಲಿ ಸೂಕ್ಷ್ಮವಾದರೂ, ನಿರೂಪಣೆಯಲ್ಲಿ ಸ್ವಲ್ಪ ಜಾಸ್ತಿಯೇ ನೇರವಾಗಿದ್ದಂತೆ ಅನಿಸಿತು.
ಸತ್ತುವಿನ ವಿಷಯ ಘನ ಗಂಭೀರವಾದರೂ, ನಿರೂಪಣೆಯಲ್ಲಿನ dry wit ನಿಂದಾಗಿ ಭಾರ ಅನಿಸುವುದಿಲ್ಲ. ಇನ್ನಷ್ಟು ಓದುಗರ ಅಭಿಪ್ರಾಯವನ್ನು ಗುಡ್ರೀಡ್ನಲ್ಲಿ ಓದಬಹುದು.
ಲೇಖಕರ ಬಗ್ಗೆ: ನಾಟಕಕಾರ ಪಿಪಿ ಶರ್ಮ ಲೇಖಕ ಕರಣಂ ಪವನ್ ಆಗಿ ಈಗ ಜನಪ್ರಿಯ. ಸದ್ಯ ಕಾನ್ ಕೇವ್ ಮೀಡಿಯಾ ಸಂಸ್ಥೆಯಲ್ಲಿ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಕರಣಂ ಪವನ್ ಪ್ರಸಾದ್ ಹಲವು ವರ್ಷಗಳಿಂದ ಸೃಜನಾತ್ಮಕ ವಿನ್ಯಾಸಗಾರರಾಗಿದ್ದಾರೆ. ಕಸ್ತೂರಿ ಮೀಡಿಯಾ. ಪ್ರೈ.ಲಿ ನಲ್ಲಿ ಪೊಗ್ರಾಂ ಕಾನ್ಸೆಪ್ಟ್ ಡಿಸೈನರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ವಂದೇಮಾತರಂ ಟ್ರಸ್ಟ್ನ ಜನಗಣ ರಂಗ ತಂಡದ ಸಂಚಾಲಕರಾಗಿದ್ದರು.
ಬೀದಿ ಬಿಂಬ ರಂಗದ ತುಂಬ, ಪುರಹರ ಸೇರಿದಂತೆ ಐದಾರು ಜನಪ್ರಿಯ ನಾಟಕಗಳನ್ನು ರಚಿಸಿ ನಿರ್ದೇಶಿಸಿದ್ದಾರೆ. ಇವರ ಆರು ಕೃತಿಗಳು ಈವರೆಗೂ ಪ್ರಕಟಗೊಂಡು, ಹೆಚ್ಚು ಓದುಗರನ್ನು ತಲುಪಿವೆ. ಹೆಚ್ಚಿನ ಮಾಹಿತಿಗೆ ಲೇಖಕರ ಕುರಿತ ಹೆಚ್ಚಿನ ಮಾಹಿತಿಯನ್ನು ವಿಕಿಪೀಡಿಯಾ ಪುಟದಲ್ಲಿ ಓದಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications