ಅ. 1ಕ್ಕೆ ‘ಕುಂವೀ 70 ಕಥೆ 50’ ಕೃತಿ ಲೋಕಾರ್ಪಣೆ ಮತ್ತು ಜನ್ಮೋತ್ಸವ ಕಾರ್ಯಕ್ರಮ
ಶಿವಮೊಗ್ಗ, ಸೆ. 29 : ಕುಂವೀ ಎಂದೇ ಖ್ಯಾತರಾಗಿರುವ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಕುಂಬಾರ ವೀರಭದ್ರಪ್ಪ ಅವರ 'ಕುಂವೀ 70 ಕಥೆ 50' ಕೃತಿ ಅಕ್ಟೋಬರ್ 01 ರಂದು ಶಿವಮೊಗ್ಗದಲ್ಲಿ ಲೋಕಾರ್ಪಣೆಯಾಗಲಿದೆ. ಇದರ ಜೊತೆಗೆ ಜನ್ಮೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸುವ್ವಿ ಪಬ್ಲಿಕೇಶನ್ಸ್, ಕುಂವೀ ಅಭಿಮಾನಿ ಬಳಗ, ಜನಸ್ಪಂದನ ಟ್ರಸ್ಟ್(ರಿ), ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶಿವಮೊಗ್ಗದ ಕರ್ನಾಟಕ ಜಾನಪದ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 01 ರಂದು ಸಂಜೆ 5ಕ್ಕೆ ಕಮಲಾ ನೆಹರೂ ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ 'ಕುಂವೀ 70 ಕಥೆ 50' ಕೃತಿ ಲೋಕಾರ್ಪಣೆಯಾಗಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಮಾಜಿ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ ನೆರವೇರಿಸಲಿದ್ದಾರೆ. ಬಳ್ಳಾರಿ ಜ್ಞಾನಾಮೃತ ವಸತಿ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಎಂ.ಜಿ. ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಕು. ವೀರಭದ್ರಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮ ಕೂಡ ನಡೆಯಲಿದೆ.

ಖ್ಯಾತ ಸಾಹಿತಿ ಡಾ.ನಾ.ಡಿಸೋಜ ಅವರು ಕೃತಿ ಲೋಕಾರ್ಪಣೆಗೊಳಿಸಲಿದ್ದು, ಚಿಂತಕ ಹಾಗೂ ವಿಮರ್ಶಕ ಡಾ.ರಾಜೇಂದ್ರ ಚೆನ್ನಿ ಅವರು ಪುಸ್ತಕದ ಕುರಿತು ಮಾತನಾಡಲಿದ್ದಾರೆ. ಕೇಂದ್ರ ಬಾಲ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಹಾಫೀಜ್ ಕರ್ನಾಟಕಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಮಂಜುನಾಥ ಕಾರ್ಯಕ್ರಮದ ಮುಖ್ಯ ಅತಿಥಿಗಳು.
'ಕುಂವೀ 70 ಕಥೆ 50' ಕೃತಿ ಲೋಕಾರ್ಪಣೆ ಮತ್ತು ಜನ್ಮೋತ್ಸವ ಸಮಿತಿ ಅಧ್ಯಕ್ಷ ಕೆ.ಎಸ್. ಹುಚ್ರಾಯಪ್ಪ, ಸುವ್ವಿ ಪಬ್ಲಿಕೇಶನ್ಸ್ನ ಪ್ರಕಾಶಕ ಬಿ.ಎನ್.ಸುನೀಲ್ ಕುಮಾರ್ ಉಪಸ್ಥಿತರಿರಲಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕುಂವೀಯವರು ತಮ್ಮ ಕಥೆ ಕಾದಂಬರಿಗಳ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಅನನ್ಯವಾದ ಕೊಡುಗೆಗಳನ್ನು ನೀಡಿದ್ದಾರೆ. ಕುಂ. ವೀರಭದ್ರಪ್ಪ ಅವರು ಆಕರ್ಷಕ ಭಾಷಾ ಪ್ರಯೋಗ ಮತ್ತು ಗಡಿಸೀಮೆಯ ನುಡಿಬೆಡಗು, ನುಡಿಗಟ್ಟುಗಳನ್ನು ಬಳಸುವ ಕಾರಣಕ್ಕೆ ಜನ ಸಾಮಾನ್ಯರಿಗೆ ಹತ್ತಿರವಾಗಿದ್ದಾರೆ.

ಕುಂವೀ. ಕಥಾಸಾಹಿತ್ಯ ಆರಂಭಿಸಿ ಐವತ್ತು ವರ್ಷಗಳು ತುಂಬಿರುವುದು ಮತ್ತು ಎಪ್ಪತ್ತನೇ ವಸಂತಕ್ಕೆ ಕಾಲಿರಿಸುತ್ತಿರುವ ಜನ್ಮದಿನದ ಸಂಭ್ರಮಕ್ಕೆ 'ಕುಂವೀ 70 ಕಥೆ 50' ಎಂಬ ಕೃತಿಯನ್ನು ಲೋಕಾರ್ಪಣೆ ಮಾಡಲಾಗುತ್ತಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications