ಡಿವಿಜಿ ಮಂಕುತಿಮ್ಮನ ಕಗ್ಗಕ್ಕೆ ಸರಳ ಕನ್ನಡದ ಸ್ಪರ್ಶ
ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು|
ಕಲ್ಲಾಗು ಕಷ್ಟಗಳ ಮಳೆ ವಿಧಿ ಸುರಿಯೇ||
ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಗೆ|
ಎಲ್ಲರೊಳಗೊಂದಾಗು ಮಂಕುತಿಮ್ಮ||
ಡಿ.ವಿ.ಗುಂಡಪ್ಪ ಅವರ ಕಗ್ಗಗಳ ಬಗ್ಗೆ ಹೇಳಲೇ ಬೇಕಿಲ್ಲ. ಅಪಾರ ಜೀವನದ ಅರ್ಥವನ್ನು ಕೆಲವೇ ವಾಕ್ಯದಲ್ಲಿ ಹೇಳಿರುವ ಮಂಕುತಿಮ್ಮನ ಕಗ್ಗವನ್ನು ಮತ್ತಷ್ಟು ಸರಳ ಮಾಡಿದರೆ? ಹೌದು ಅಂಥದ್ದೊಂದು ಪ್ರಯತ್ನ ಮಾಡಿದ್ದ ಲೇಖಕ ಯು ವಿ ಸೂರ್ಯನಾರಾಯಣ ಅವರ 'ಕಗ್ಗ ನಾ ಕಂಡಂತೆ' ಕೃತಿ ಮರು ಮುದ್ರಣಗೊಂಡಿದ್ದು ಕಗ್ಗದ ಅಭಿಮಾನಿಗಳ ಮಾತ್ರವಲ್ಲದೇ ಸಾಮಾನ್ಯ ಜನರ ಪ್ರೀತಿಗೆ ಪಾತ್ರವಾಗಿದೆ.[ಡಿವಿಜಿ ಜೀವನ ಸಾಧನೆ ತಿಳಿದುಕೊಳ್ಳಿ]
ಕವಿ ಎಚ್ ಎಸ್ ಲಕ್ಷ್ಮೀ ನಾರಾಯಣ ಭಟ್ಟ, ಸಾಹಿತಿ ಎಚ್ ಆರ್ ಚಂದ್ರಶೇಖರ್, ಡಾ. ನಾ ಗೀತಾಚಾರ್ಯ, ಪ್ರೊ. ಜಿ ಅಶ್ವತ್ಥನಾರಾಯಣ, ಬಿಎಂಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷ ಪಿ ವಿ ನಾರಾಯಣ ಸೇರಿದಂತೆ ಅನೇಕ ಮಹನೀಯರು ಕೃತಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

'ಕಗ್ಗ ನಾ ಕಂಡಂತೆ ಕೃತಿಯಲ್ಲಿ 945 ಮುಕ್ತಕಗಳಿವೆ. ಒಂದಕ್ಕಿಂತ ಒಂದು ಭಿನ್ನವಾಗಿದೆ ಮತ್ತು ಸುಲಭವಾಗಿದೆ. ಡಿವಿಜಿಯವರ ಕಗ್ಗದಲ್ಲಿನ ಹಳೆಗನ್ನಡದ ಪದಗಳು ಸಾಮಾನ್ಯರಿಗೆ ಅರ್ಥವಾಗದೇ ಹೋಗಬಹುದು, ಆದರೆ ಇಲ್ಲಿ ಎಲ್ಲವೂ ಸರಳ ಮತ್ತು ಸುಂದರ.
ಯಾವ ಮುಕ್ತಕಗಳಿಗೂ ಭಾವಾರ್ಥ ನೀಡಲಾಗಿಲ್ಲ. ಅದರ ಅಗತ್ಯವೂ ಇಲ್ಲ. 2008ರಲ್ಲಿ ಹೊರ ಬಂದ ಕೃತಿ ಇದೀಗ ಮತ್ತೆ ಪುನರ್ ಮುದ್ರಣಗೊಂಡಿದೆ. ಡಿವಿಜಿಯವರ ಕಗ್ಗಗಳ ಬಗ್ಗೆ ಅದೆಷ್ಟೋ ವಿಮರ್ಶೆಗಳು, ಟೀಕೆ ಟಿಪ್ಪಣಿಗಳು ಬಂದು ಹೋಗಿವೆ. ಆದರೆ ಕಗ್ಗ ನಾ ಕಂಡಂತೆ ಹಾಗಲ್ಲ. ಇಲ್ಲಿ ಡಿವಿಜಿಯವರ ಕಗ್ಗವನ್ನೇ ಸೂರ್ಯನಾರಾಯಣರು ಸರಳ ಕನ್ನಡಕ್ಕೆ ಇಳಿಸಿದ್ದಾರೆ.
ಡಿವಿಜಿಯವರ ಕಗ್ಗದಲ್ಲಿ ಬರುವ ಮಂಕುತಿಮ್ಮ ಇಲ್ಲಿ ತಿಮ್ಮ ಗೆಳೆಯನಾಗಿದ್ದಾನೆ. ಅರ್ಥವಾಗದ ಹಳೆಗನ್ನಡದ ಗಟ್ಟಿ ಪದಗಳು ಇಲ್ಲಿ ಸವಿಗನ್ನಡದ ಸರಳ ಪದಗಳಾಗಿ ಎದುರಿಗೆ ನಿಲ್ಲುತ್ತವೆ.

ದರ ನಮೂದಿಸಿಲ್ಲ
ಕಗ್ಗ ಬೆಲೆಕಟ್ಟಲಾಗದ ಚಿಂತನೆಗಳ ಗುಚ್ಛ. ಸೂರ್ಯನಾರಾಯಣ ಅವರ ಕಗ್ಗ ನಾ ಕಂಡಂತೆ ನಿಮೆಗೆ ಮಾರುಕಟ್ಟೆಯಲ್ಲಿ ಸಿಗಲಾರದು. ಕೃತಿಗೆ ಬೆಲೆಯನ್ನು ನಿಗದಿ ಮಾಡಲಾಗಿಲ್ಲ. ಕಗ್ಗದ ಅಭಿಮಾನಿಗಳು ಲೇಖಕರಿಗೆ ಕರೆ ಮಾಡಿ ಪುಸ್ತಕವನ್ನು ಪಡೆದುಕೊಳ್ಳಬಹುದು. ಕಗ್ಗ ನಾ ಕಂಡಂತೆ ಪುಸ್ತಕ ಓದುವ ಮನಸ್ಸಾಗಿದ್ದರೆ 080 2241 3042ಕ್ಕೆ ಕರೆ ಮಾಡಿದರೆ ಸಾಕು.[ಅಭಿವೃದ್ಧಿಯ ಪುಸ್ತಕ ಅರ್ಧ ಬರೆದು ಹೊರಟ ಅಬ್ದುಲ್ ಕಲಾಂ]
ನಿರೂಪಣೆ ಹೇಗಿದೆ?
ಸರಳ ಕನ್ನಡದಲ್ಲಿ ಕಗ್ಗದ ನಿರೂಪಣೆ ಹೇಗಿದೆ ಎಂಬುದಕ್ಕೆ ಉತ್ತರ ಇಲ್ಲಿದೆ.
ಡಿವಿಜಿಯವರ ಮೂಲ ಕಗ್ಗ
ಸುಮ್ಮನಿರಲೊಲದೆ ತನಗೊಡನಾಡಿಯೊರ್ವಳನು ।
ನಿರ್ಮಿಸಿ ನಿಜಾಂಶದಿಂ ಮಾಯೆಯೆಂಬವಳಿಂ ॥
ದುಣ್ಮಿದ ಜಗಜ್ಜಾಲಗಳಲ್ಲಿ ವಿಹರಿಸುತಿರುವ ।
ಬೊಮ್ಮನಾಟವ ಮೆರೆಸೊ - ಮಂಕುತಿಮ್ಮ||
ಇದೇ ಕಗ್ಗವನ್ನು ಸೂರ್ಯನಾರಾಯಣರು ಸರಳವಾಗಿ ಹೇಳಿದ ರೀತಿ
ಸುಮ್ಮನಿರಲಾರದೆ ಸಂಗಾತಿಯನು ಬಯಸಿ|
ತನ್ನ ಅಂಶದಿಂ ಮಾಯೆಯ ನಿರ್ಮಿಸಿ||
ಹರುಷದಿ ಅವಳೋಳಗೂಡಿ ಜಗದ ನಾಟಕದಿ|
ವಿಹರಿಸುತಿಹ ಬೊಮ್ಮನಾಟಕದಿ ಒಂದಾಗಿ ಮೆರೆಸದನು-ತಿಮ್ಮ ಗೆಳೆಯ||
ಇದೇ ಬಗೆಯಲ್ಲಿ ಸೂರ್ಯನಾರಾಯಣರು ಮುಕ್ತಗಳನ್ನು ಹೇಳಿಕೊಂಡು ಹೋಗುತ್ತಾರೆ. ಸಾಹಿತ್ಯ ಪ್ರೇಮಿಗೆ, ಓದುಗನಿಗೆ ಎಲ್ಲಿಯೂ ಕ್ಲಿಷ್ಟ ಎಂದು ಅನಿಸುವುದೇ ಇಲ್ಲ. ಕನ್ನಡದ ಕಂಪನ್ನು ತನ್ನ ಕೆಲವೇ ಪದಗಳಲ್ಲಿ ಪಸರಿಸುವ ಕಗ್ಗದ ತಾಕತ್ತೇ ಅಂಥದ್ದು. ಅದನ್ನು ಸರಳೀಕರಣ ಮಾಡಿರುವುದು ಸಾಹಿತ್ಯ ಪ್ರೇಮಿಗೆ ಹಲಸಿನ ಹಣ್ಣನ್ನು ಬಿಡಿಸಿ ನೀಡಿದಂತಾಗಿದೆ. ಉದಯೋನ್ಮುಖ ಕವಿಗಳಿಗೆ, ಬರಹಗಾರರ ಹಾದಿಗೆ ಗುರಿ ತೋರಿಸುವ ಗುರುವಾಗಿ ನಿಂತಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications