Rtd IAS ಅಧಿಕಾರಿ ಮದನ್ ಗೋಪಾಲ್ 'ರೇನ್ಬೋ ಇಯರ್ಸ್' ಪುಸ್ತಕ ಬಿಡುಗಡೆ
ಬೆಂಗಳೂರು, ಮಾ. 17: ರಾಜ್ಯ ಕಂಡ ಅತ್ಯಂತ ಪ್ರಾಮಾಣಿಕ ಮತ್ತು ದಕ್ಷ ಐಎಎಸ್ ಅಧಿಕಾರಿ ಮದನ ಗೋಪಾಲ್. ನಿವೃತ್ತಿ ಬಳಿಕ ಅವರು ಬರೆದಿರುವ "ರೇನ್ಬೋ ಇಯರ್ಸ್" ಕಾದಂಬರಿ ಬಿಡುಗಡೆ ಸಮಾರಂಭ ಮಾ. 23 ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿದೆ.
ಇನ್ಫೆಂಟ್ರಿ ರಸ್ತೆಯಲ್ಲಿರುವ ಐಎಎಸ್ ಅಧಿಕಾರಿಗಳ ಅಸೋಸಿಯೇಷನ್ ನಲ್ಲಿ ಈ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ನಿವೃತ್ತ ಲೋಕಾಯುಕ್ತ ನ್ಯಾ. ಎನ್. ಸಂತೋಷ್ ಹೆಗ್ಡೆ ಅವರು ಭಾಗವಹಿಸಲಿದ್ದಾರೆ. ವಿಶೇಷ ಅತಿಥಿಗಳಾಗಿ ಮಾಜಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಕರ್ನಾಟಕ ರಾಜ್ಯ ಕಂಡ ಪ್ರಾಮಾಣಿಕ ಐಪಿಎಸ್ ಅಧಿಕಾರಿ ಡಾ. ಅಜಯ್ ಕುಮಾರ್ ಸಿಂಗ್ ಪಾಲ್ಗೊಳ್ಳಲಿದ್ದಾರೆ.

ನಿವೃತ್ತ ಐಎಎಸ್ ಅಧಿಕಾರಿ ಮದನ ಗೋಪಾಲ್ 1984 ರಲ್ಲಿ ನಂಜನಗೂಡು ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಮೊದಲು ಸೇವೆಯನ್ನು ಆರಂಭಿಸಿದ್ದರು. ರಾಜ್ಯದಲ್ಲಿ ಕಳೆದ 30 ವರ್ಷ ಸೇವೆ ಸಲ್ಲಿಸಿ ತಮ್ಮದೇ ಕೊಡುಗೆ ನೀಡುವ ಮೂಲಕ ಸಮಾಜಕ್ಕೆ ಚಿರಪರಿಚಿತರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ನಿವೃತ್ತ ಬಳಿಕ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಸಂಬಂಧ ಸರ್ಕಾರ ರಚನೆ ಮಾಡಿದ್ದ ಸಮಿತಿಯ ಮುಖ್ಯಸ್ಥರಾಗಿ ಇಡೀ ಕರ್ನಾಟಕದಲ್ಲಿ ಶೈಕ್ಷಣಿಕ ವಲಯ ರಚಿಸಿ ಶಿಫಾರಸು ಮಾಡಿದ್ದಾರೆ. ಇದೀಗ ಅವರು ಬರೆದಿರುವ ರೇನ್ಬೋ ಇಯರ್ಸ್ ಪುಸ್ತಕ ದೊಡ್ಡ ಸಂಚಲನ ಮೂಡಿಸಿದೆ.

ಭಾರತ ಸ್ವಾತಂತ್ರ್ಯಗೊಂಡ ಕೆಲ ದಶಕಗಳ ನಂತರ ಮಾರ್ಕ್ಸಿಸ್ ( ಕಮ್ಯುನಿಸ್ಟ್ ) ವಾದ ಯುವ ಸಮೂಹವನ್ನು ಆಕರ್ಷಣೆ ಮಾಡಿತ್ತು. ಸಮಾಜದಲ್ಲಿ ಕ್ರಾಂತಿ ಮಾಡಬೇಕು ಎಂಬ ಉನ್ಮಾದ. ಇಂತಹ ಸಂದರ್ಭದಲ್ಲಿ ರಾಜನ್, ಸೂರಿ, ಮಲ್ಲಣ್ಣ ಎಂಬ ಮೂವರು ಸ್ನೇಹಿತರು ಎಡ ಪಂಥೀಯ ಸಂಘಟನೆಗಳ ಜತೆ ಸೇರಿ ಕ್ರಾಂತಿ ಮಾಡುವ ತೀರ್ಮಾನ ತೆಗೆದುಕೊಳ್ಳುತ್ತಾರೆ. ದಶಕಗಳು ಕಳೆದ ನಂತರ ಅವರ ತಂತ್ರಗಳು ವಿಫಲಾಗುತ್ತದೆ. ಐಡಿಯಾಲಜಿ ನಿರುಪಯುಕ್ತವಾಗುತ್ತದೆ. ವಿದೇಶಿ ಬಂಡವಾಳ ಆಗಮನ ಸೇರಿ ನಾನಾ ಬದಲಾವಣೆ ಆಗುತ್ತದೆ. ರಾಜನ್ ಒಬ್ಬ ಪ್ರಾಮಾಣಿಕ ಐಎಎಸ್ ಅಧಿಕಾರಿಯಾಗಿ ಜೀವನದ ಕೊನೆ ಘಟ್ಟ ತಲುಪುತ್ತಾರೆ. ಅವರ ಸ್ನೆಹಿತರಾದ ಸೂರಿ ಮತ್ತು ಮಲ್ಲಣ್ಣ ಅವರದ್ದೇ ಒಂದು ಜೀವನ ಸಾಗಿಸುತ್ತಾರೆ. ಕೆಲವು ದಶಕಗಳು ಕಳೆದ ನಂತರ ಮೂವರು ಸೇರುತ್ತಾರೆ. ಆ ಹಳೇ ನೆನಪುಗಳಿಗೆ ಜಾರುತ್ತಾರೆ. ಹೀಗೆ ಕ್ರಾಂತಿಕಾರಿ ಆಲೋಚನೆ ಇಟ್ಟುಕೊಂಡು ಸಾಗುವ ಮೂವರು ಸ್ನೇಹಿತರ ಜೀವನಾಧಾರಿತ ಕಾಂದಬರಿ ರೇನ್ಬೋ ಇಯರ್ಸ್ ತಿರುಳು.
Recommended Video
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ










Click it and Unblock the Notifications