ಮಂಚಿ: ಹ್ಹೋ... ಏನು..? ಲಘು ಬರಹಗಳ ಸಂಕಲನ ಬಿಡುಗಡೆ
ತೇಜು ಪಬ್ಲಿಕೇಷನ್ಸ್, ಬೆಂಗಳೂರು ಇವರು ಪ್ರಕಟಿಸಿದ, ಲೇಖಕಿ ಅನಿತಾ ನರೇಶ್ ಮಂಚಿ ಬರೆದ ' ಹ್ಹೋ... ಏನು..? ಎಂಬ ಲಘು ಬರಹಗಳ ಸಂಕಲನ ಬಿಡುಗಡೆ ಕಾರ್ಯಕ್ರಮ ಇದೇ ನವೆಂಬರ್ 14ರಂದು ಮಂಚಿಯಲ್ಲಿ ನಡೆಯಿತು.
ಖ್ಯಾತ ಲೇಖಕಿ ಭುವನೇಶ್ವರಿ ಹೆಗಡೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಶುಭಾರಂಭಗೊಳಿಸಿದರು. ಶ್ರೀ ರಾಮಚಂದ್ರ ಭಟ್ ಕಜೆ ಅವರು ಸ್ವಾಗತಿಸಿದರು.

ಪತ್ರಕರ್ತ ಮನೋಹರ್ ಪ್ರಸಾದ್ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡುತ್ತಾ, ಉತ್ತಮ ಸಾಹಿತ್ಯ ಓದುವಾಗ ಮಾತ್ರ ಆನಂದವನ್ನು ನೀಡುವುದಲ್ಲದೆ ಬಹುಕಾಲ ಮನಸ್ಸಿನಲ್ಲಿ ಉಳಿಯುತ್ತದೆ ಎಂದರು.
ಇನ್ನೊಬ್ಬರನ್ನು ನೋಯಿಸದಂತಹ ಸಾಹಿತ್ಯ ರಚನೆ ಇಂದಿಗೆ ಬಹಳ ಅಗತ್ಯವಿದೆ. ಮಕ್ಕಳಲ್ಲಿ ಓದಿನ ಆಸಕ್ತಿಯನ್ನು ಮೂಡಿಸುವುದು ಮತ್ತು ನಮ್ಮ ಸಂಸ್ಕೃತಿಯ ಅರಿವು ಮೂಡಿಸುವುದು ನಮ್ಮ ಕರ್ತವ್ಯ ಎಂದು ಮನೋಹರ್ ಪ್ರಸಾದ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ನುಡಿದರು.
ಹಿರಿಯ ಹಾಸ್ಯ ಲೇಖಕಿ ಪ್ರೊ. ಭುವನೇಶ್ವರಿ ಹೆಗಡೆ ಮಾತನಾಡುತ್ತಾ, ಮನೆಯಲ್ಲಿ ನಡೆಯುವಂತಹ ಇಂತಹ ಸಾಹಿತ್ಯ ಕಾರ್ಯಕ್ರಮಗಳು ಧನಾತ್ಮಕ ಚಿಂತನೆಗಳನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.
ಅಂಕಣಕಾರ ಅಣಕು ರಾಮನಾಥ್ ಅವರು ಪುಸ್ತಕ ಪರಿಚಯ ಮಾಡಿದರು. ಡಾ. ಸುರೇಖಾ ರವಿಶಂಕರ್ ಅವರು ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಮೇಘಾ ಕಾಯರ್ಪಾಡಿ ಮತ್ತು ರೇಶ್ಮಾ ನರಸಿಂಹ ಅವರಿಂದ ಲಘು ಸಂಗೀತ ಕಾರ್ಯಕ್ರಮ ನಡೆಯಿತು.

ನಂತರ ನಡೆದ ಯಕ್ಷಗಾನಾಮೃತ ಸಿಂಚನ ಕಾರ್ಯಕ್ರಮ ಉತ್ತಮವಾಗಿ ಮೂಡಿ ಸಭಿಕರನ್ನು ರಂಜಿಸಿತು. ಭಾಗವತರಾಗಿ ಶ್ರೀ ಮುರಳಿ ಕೃಷ್ಣ ತೆಂಕಬೈಲ್, ಕು. ಕಾವ್ಯಶ್ರೀ ಅಜೇರು, ಮದ್ದಳೆಯಲ್ಲಿ ನೆಕ್ಕರೆಮೂಲೆ ಗಣೇಶ್ ಭಟ್, ಚೆಂಡೆಯಲ್ಲಿ ನಿಡ್ವಜೆ ಶಂಕರ ಭಟ್, ಸುಭ್ರಮಣ್ಯ ಮುರಾರಿ ಚಕ್ರತಾಳದಲ್ಲಿ ಸಹಕರಿಸಿದರು. ಶ್ರೀ ಕಿಶೋರ್ ಭಟ್ ಕೊಮ್ಮೆ ಕಾರ್ಯಕ್ರಮ ನಿರೂಪಣೆ ಮಾಡಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications