ಎಸ್ ಎಲ್ ಭೈರಪ್ಪ ಹೊಸ ಕಾದಂಬರಿ ಉತ್ತರ ಕಾಂಡ ವಿಮರ್ಶೆ
ಎಸ್.ಎಲ್.ಭೈರಪ್ಪ ಅವರ ಹೊಸ ಕಾದಂಬರಿ ಉತ್ತರ ಕಾಂಡದ ವಿಮರ್ಶೆ ಇಲ್ಲಿದೆ. ಕೋಲಾರ ಮೂಲದ ಲೇಖಕರಾದ ವಿಜಯರಾಘವನ್ ವಿಮರ್ಶೆ ಮಾಡಿದ್ದಾರೆ.
ಭಾರತೀಯ ಲೇಖಕರ ಸಾಲಿನಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವಂಥ, ಕನ್ನಡದ ಲೇಖಕ ಎಸ್.ಎಲ್.ಭೈರಪ್ಪ ಅವರ ಹೊಸ ಕಾದಂಬರಿ ಉತ್ತರ ಕಾಂಡದ ವಿಮರ್ಶೆಯನ್ನು ಕೋಲಾರ ಮೂಲದ ಲೇಖಕರಾದ ವಿಜಯ ರಾಘವನ್ ಅವರು ಮಾಡಿದ್ದಾರೆ. ಕಂತುಗಳಲ್ಲಿ ಪ್ರಕಟವಾಗಿರುವ ಈ ವಿಮರ್ಶೆ ಬಗ್ಗೆ ನಿಮ್ಮ ಅಭಿಪ್ರಾಯವನ್ನು ತಿಳಿಸಿ- ಸಂಪಾದಕ
ತಿಣುಕಿದನು ಫಣಿರಾಯ ರಾಮಾಯಣದ ಕಥೆಗಳ ಭಾರದಲ್ಲಿ ಅಂತ ಅನ್ನಿಸಿ ಗದುಗಿನ ನಾರಣಪ್ಪ 'ಕರ್ನಾಟ ಭಾರತ ಕಥಾಮಂಜರಿ'ಯನ್ನು ಬರೆದರು. ಹಾಗೆ ಅವರು ಹೇಳಿ ಶತಮಾನಗಳು ಗತಿಸಿದರೂ ನಮ್ಮ ಕವಿಗಳು ರಾಮಾಯಣ ಬರೆಯುವುದನ್ನು ನಿಲ್ಲಿಸಲೇ ಇಲ್ಲ. ರಾಮಾಯಣ ಅಂಥ ಅದಮ್ಯ ಆಕರ್ಷಣೆಯನ್ನು ಉಳಿಸಿಕೊಂಡು ಬಂದ ಮಹಾಕಾವ್ಯ. ಅದರಲ್ಲಿನ ಪಾತ್ರಗಳ ಮಹೋನ್ನತಿಕೆಯೇನು, ಅಲ್ಲಿನ ಅತಿಮಾನುಷ ಘಟನೆಗಳೇನು, ದೇವಪ್ರಸಾದಗಳೇನು, ವಿಧಿಲಿಖಿತದ ಆಖ್ಯಾನಗಳೇನು, ಮಾನಸಿಕ ಸಂಘರ್ಷಗಳೇನು? ಎಲ್ಲವೂ ಮಹೋಪಮೆಗಳೆಂಬ ಅಭಿವಾದನಕ್ಕೆ ಅರ್ಹವಾದವು.
ಮಹಾಭಾರತದಲ್ಲಿನ ಸಂಬಂಧಗಳ ಸಂಕೀರ್ಣತೆ ಮತ್ತು ಭೂಮಿಕೆಯ ಹರವು ರಾಮಾಯಣದಲ್ಲಿ ಇಲ್ಲದಿರಬಹುದು. ಅದರ ಮೊದಲ ಕಾಂಡವೂ ಉತ್ತರಕಾಂಡವೂ ವಾಲ್ಮೀಕಿಯದಲ್ಲ, ಪ್ರಕ್ಷಿಪ್ತಗಳಿರಬಹುದು. ಯಾರಾದರೂ ಹಾಡಿಕೊಂಡು ಅಂದೊಂದಾಗಿದ್ದ ಭಾರತದ ಭೂಗೋಳ ಸುತ್ತುತ್ತಿದ್ದ ಕಥೆಯನ್ನು ವಾಲ್ಮೀಕಿ ಮಹರ್ಷಿಗಳು ಗ್ರಂಥರೂಪದಲ್ಲಿ ಬರೆದ ಮೇಲೆ ಯಾರು ಯಾರಿಗೋ ಅಲ್ಲಲ್ಲಿ ಕೊರತೆಗಳು ಕಂಡುಬಂದು ಅವರು ಅದರಲ್ಲಿ ತಮ್ಮದನ್ನೂ ಸೇರಿಸಿದರು. ನಮ್ಮಲ್ಲೇ ರಾಮಾಯಣವನ್ನೇ ಕುವೆಂಪು ಅವರು ಪುನಾರಚಿಸಿದ್ದಾರೆ. ಮೊಯಿಲಿಯವರೂ ಶ್ರೀ ರಾಮಾಯಣ ಮಹಾನ್ವೇಷಣಂ ಬರೆದರು. ಹೀಗೆ ರಾಮಾಯಣದ ಕತೆಗಳ ಕಾವ್ಯದ ಪರಂಪರೆಯೇ ಭಾರತೀಯ ಸಾಹಿತ್ಯದಲ್ಲಿದೆ.

ಅದಕ್ಕೊಂದು ಹೊಸ ಸೇರ್ಪಡೆ ಎಸ್ಎಲ್. ಭೈರಪ್ಪನವರು ಬರೆದಿರುವ ಉತ್ತರಕಾಂಡವೆಂಬ ಕಾದಂಬರಿ. ಭೈರಪ್ಪನವರಿಗೆ ರಾಮಾಯಣ ಬಲು ಭಾರವೆಂದು ತೋರಿದ್ದರಿಂದ ಅವರು ಕತೆಯನ್ನು ಯಥಾಶಕ್ತಿ ಕತ್ತರಿಯಾಡಿಸಿ ನೇರ ಮಾಡಿದ್ದಾರೆ. ಅದರಲ್ಲಿನ ಅತಿಮಾನುಷ ಅಂಶಗಳನ್ನು ಹುಷಾರಾಗಿ ತೆಗೆದು, ಸರಳವಾಗಿ ಅದನ್ನು ನಮ್ಮ ಯಾವುದಾದರೂ ಸಂಸಾರಗಳಲ್ಲಿ ಕೆಲ ಕಾಲದ ಹಿಂದೆ ನಡೆದಿರಬಹುದಾದ ಘಟನೆಯಂತೆ ಚಿತ್ರಿಸಲು ಪ್ರಯತ್ನಪಟ್ಟಿದ್ದಾರೆ. ಒಂದೆರಡು ಕಡೆ ಸ್ವಲ್ಪ ಮೊಯಿಲಿಯವರು ಮಾಡಿಕೊಂಡ ಬದಲಾವಣೆಯ ಛಾಯೆ ಕಂಡರೂ ಇದನ್ನು ರಾಮಾಯಣದ ಸಮಗ್ರ ಪುನರ್ವ್ಯಾಖ್ಯೆ ಎಂದು ಕರೆಯಲು ಬರುವುದಿಲ್ಲ.
ಆ ಅರ್ಥದ ಹಿನ್ನೆಲೆಯಲ್ಲಿ ಪುರಾಣ ಕೃತಿಯ ಮರುಶೋಧನೆಗೆ ಭೈರಪ್ಪನವರು ತೊಡಗಿಕೊಂಡಿಲ್ಲ. ಏಕೆಂದರೆ ಇವತ್ತಿನ ರಾಮಾಯಣ ಚಾಲ್ತಿಗೆ ಬಂದದ್ದರ ಇತಿಹಾಸಗಳನ್ನು ರಾಮಾನುಜನ್, ವೆಂಡಿ ಡೋನಿಗರ್ ಮುಂತಾದವರು ಮತ್ತು ಅನೇಕ ದೇಶ ವಿದೇಶಗಳ ವಿದ್ವಾಂಸರು ರಚಿಸಿದ್ದಾರೆ, ಪುನಾರಚಿಸಿದ್ದಾರೆ. ಅವೆಲ್ಲವೂ ನಮಗೆ ಲಭ್ಯವಿದೆ.
ಭೈರಪ್ಪನವರ ಉತ್ತರಕಾಂಡ ಹೆಸರಿನ ಉತ್ತರ ರಾಮಾಯಣದ ಕೃತಿಯಲ್ಲಿನ ಕತೆಯನ್ನು ಸ್ಥೂಲವಾಗಿ ಹೀಗೆ ಹೇಳಬಹುದು. ಮಿಥಿಲೆಯ ಅರಸ ಜನಕ. (ಅಲ್ಲಿನ ರಾಜರೆಲ್ಲರ ಹೆಸರೂ ಜನಕನೇ.) ಅವನಿಗೆ ವಯಸ್ಸಾಗಿದೆ. ಮಕ್ಕಳಾಗಿಲ್ಲ. ಅದಕ್ಕಾಗಿ ಅವನೊಂದು ಯಾಗವನ್ನು ಮಾಡಲು ಬಯಸಿದ್ದಾನೆ. ಕೃಷಿ ಮುಖ್ಯವಾದುದು; ಉಳುವುದು ಬಿತ್ತುವುದಕ್ಕಾಗಿ. ಬಿತ್ತುವುದು ಬೆಳೆಯುವುದಕ್ಕಾಗಿ. ಸಸಿ ತನ್ನ ರೂಪ ಕಳೆದುಕೊಂಡು ಬೆಳೆಯ ಜನ್ಮ ತಳೆಯುವುದು ನೆಲದಲ್ಲಿಯೇ. ಯಾಗಕ್ಕೂ ಮುನ್ನ ಉಳಲು ಅಣಿ ಮಾಡಿದ್ದ ಜಾಗದಲ್ಲಿ ಯಾಗದ ಸರಿಸುಮಾರು ಆದಿಯಲ್ಲಿಯೇ ಒಂದು ಹೆಣ್ಣು ಮಗು - ಸೀತೆ - ಅವನಿಗೆ ದೋಣಿಸಾಲಿನಲ್ಲಿ ದೊರೆಯುತ್ತಾಳೆ. ಅದು ಪರಿತ್ಯಜಿಸಿದ ಮಗುವಿರಬೇಕು. ಅದಕ್ಕೆ ಮೊದಲಿಂದ ಕೊನೆಯವರೆಗೂ ಆ ಪರಿತ್ಯಜಿಸಿದ ಮಗುವಿನ ಬಾಳಿನಂತೆ ಸೀತೆಯದು ಸಹ ರೂಪುಗೊಳ್ಳುತ್ತದೆ. ಇದು ವಿಧಿಯ ಲಿಖಿತ. ಮುಂದುವರಿಯುವುದು....
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications