ಕನ್ನಡದ ಸಣ್ಣ ಕಥೆ ಕೇಳಲು 'ಕಥಾ ಕಣಜ' ಆಕಾಶವಾಣಿ ಕಾರ್ಯಕ್ರಮ
ಬೆಂಗಳೂರು, ಮೇ 25 : ಕನ್ನಡ ಸಾಹಿತ್ಯ ಲೋಕದಲ್ಲಿ ಸಣ್ಣಕಥೆಗಳಿಗೆ ವಿಶಿಷ್ಠ ಸ್ಥಾನವಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಕಾಶವಾಣಿ ಮೂಲಕ ಸಣ್ಣಕಥೆಗಳನ್ನು ಜನರಿಗೆ ತಲುಪಿಸಲು ಸರಣಿ ಕಾರ್ಯಕ್ರಮವನ್ನು ನಡೆಸಲಿದೆ.
ಸಣ್ಣಕಥೆಗಳ ಕೌತುಕಗಳನ್ನು ಅನಾವರಣಗೊಳಿಸಿ ಜನರಿಗೆ ಕೇಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ 'ಕಥಾ ಕಣಜ' ಎಂಬ ಕಾರ್ಯಕ್ರಮವನ್ನು ನಡೆಸಲಿದೆ. ಅತ್ಯುತ್ತಮ ಕಥೆಗಳ ಓದು ಹಾಗೂ ವಿಮರ್ಶೆಯನ್ನು ಈ ಮಾಲಿಕೆ ಒಳಗೊಂಡಿರುತ್ತದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪನವರ ಪ್ರಧಾನ ಸಂಪಾದಕತ್ವದಲ್ಲಿ ಮತ್ತು ಡಾ. ಗಿರಡ್ಡಿ ಗೋವಿಂದರಾಜು ಮತ್ತು ಬೋಳುವಾರು ಮೊಹಮದ್ ಕುಂಇ ಇವರ ಸಂಪಾದಕತ್ವದಲ್ಲಿ ನಮ್ಮ ನಾಡಿನ ಎಲ್ಲಾ ಪ್ರದೇಶಗಳ ಎಲ್ಲಾ ಪ್ರಕಾರಗಳ ಎಲ್ಲಾ ಸಮುದಾಯಗಳ ಸಾಕ್ಷಿಪ್ರಜ್ಞೆಯಂತೆ ಮತ್ತು ಎಲ್ಲರೂ ಒಪ್ಪುವಂತೆ ಆರಿಸಿದ 'ಶತಮಾನದ ಸಣ್ಣಕಥೆಗಳು' ಕಥಾ ಸಂಕಲನವು ಕಥಾಕಣಜ ಮಾಲಿಕೆಗೆ ಪ್ರಮುಖ ಆಕರವಾಗಿದೆ.

ಲೇಖಕ ಹಾಗೂ ವಿಮರ್ಶಕರಾದ ಡಾ. ಎಸ್. ದಿವಾಕರ್ ರವರು ಸಂಪಾದಿಸಿರುವ ಕಥಾ ಸಂಕಲನ ಮತ್ತು ಪ್ರೊ. ಜಿ.ಹೆಚ್. ನಾಯಕ್ ರವರು ಸಂಪಾದಿಸಿರುವ ಕಥಾ ಸಂಕಲನದ ಕೆಲವು ಉತ್ತಮ ಕಥೆಗಳನ್ನು ಸಹ ಈ ಮಾಲಿಕೆಯಲ್ಲಿ ಬಳಸಿಕೊಳ್ಳಲಾಗಿದೆ.
ಈ ಸರಣಿ ಮಾಲಿಕೆಯಲ್ಲಿ ಪ್ರತಿವಾರ ಒಂದು ಕಥೆಯಂತೆ ಒಂದು ವರ್ಷಕ್ಕೆ 52 ಕಥೆಗಳು ಪ್ರಸಾರಗೊಳ್ಳಲಿವೆ. ಈ ಕಾರ್ಯಕ್ರಮವು ಕಥೆಗಾರನ ಮಾತು, ಕಥೆಯ ಓದು, ಹಿರಿಯ ಸಾಹಿತಿಗಳಿಂದ ವಿಮರ್ಶೆ ಹಾಗೂ ಪೂರಕ ಸಂಗೀತವನ್ನು ಒಳಗೊಂಡಿರುತ್ತದೆ.
ಹಿರಿಯ ಸಾಹಿತಿಗಳಾದ ಡಾ. ಹೆಚ್.ಎಸ್ ವೆಂಕಟೇಶ್ ಮೂರ್ತಿ, ಕುಂ.ವೀರಭದ್ರಪ್ಪ, ಜಯಂತಿ ಕಾಯ್ಕಿಣಿ ಮತ್ತು ಡಾ. ಎಂ.ಎಸ್.ಆಶಾದೇವಿ ಅವರು ಸೇರಿದಂತೆ 19 ಜನ ಸಾಹಿತಿಗಳು ಕಥಾ ವಿಮರ್ಶಕರಾಗಿ ಭಾಗವಹಿಸಲಿದ್ದಾರೆ.
ಶ್ರೀನಿವಾಸ ಪ್ರಭು, ಡಾ. ಅಬ್ದುಲ್ ರೆಹಮಾನ್ ಪಾಷಾ, ಜೆ.ಪಿ. ರಾಮಣ್ಣ, ಬಿ.ಕೆ ಸುಮತಿ ಸೇರಿದಂತೆ ಕನ್ನಡದ ಅತ್ಯುತ್ತಮ ನಿರೂಪಕರು ಕಥೆಗಳನ್ನು ಓದಲಿದ್ದಾರೆ.
ಕಾರ್ಯಕ್ರಮದ ವಿವರ
* ಪ್ರಸಾರದ ಅವಧಿ : ಪ್ರತಿ ಸೋಮವಾರ fm rainbow 101.3 mhz ನಲ್ಲಿ ಬೆಳಗ್ಗೆ 8.02ಕ್ಕೆ
* ಪ್ರತಿ ಬುಧವಾರ ಬೆಳಗ್ಗೆ 7.15 ಕ್ಕೆ ಕರ್ನಾಟಕದ ಎಲ್ಲ 13 ಬಾನುಲಿ ಕೇಂದ್ರಗಳು ಮತ್ತು ಬೆಂಗಳೂರು ಆಕಾಶವಾಣಿ ಮುಖ್ಯ ವಾಹಿನಿಯಲ್ಲಿ ಪ್ರಸಾರ
* ಪ್ರತಿ ಶುಕ್ರವಾರ ವಿವಿಧ ಭಾರತಿ fm 102.9 MHz ನಲ್ಲಿ 8.30 ಕ್ಕೆ ಮರುಪ್ರಸಾರ
ಕಾರ್ಯಕ್ರಮದ ಕುರಿತು : ಕಥಾ ಕಣಜ ಕಾರ್ಯಕ್ರಮದ ಪರಿಕಲ್ಪನೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಎನ್.ಆರ್. ವಿಶುಕುಮಾರ್ ಅವರದ್ದು. ಶೀರ್ಷಿಕೆ ಗೀತೆಯನ್ನು ಡಾ.ಕೆ.ವೈ ನಾರಾಯಣಸ್ವಾಮಿ ಅವರು ರಚಿಸಿದ್ದಾರೆ.
ಆಕಾಶವಾಣಿ ತಂಡ : ಸುಬ್ಬಯ್ಯ ( ಸುಬ್ಬು ಹೊಲೆಯಾರ್), ಶಿವಪ್ರಕಾಶ, ಬಿ.ಕೆ. ಸುಮತಿ. ಪ್ರತಿವಾರ ಒಂದು ಕಥೆಯಂತೆ ಒಂದು ವರ್ಷಕ್ಕೆ 52 ಕಥೆಗಳು ಪ್ರಸಾರವಾಗಲಿವೆ. ಈ ಕಾರ್ಯಕ್ರಮವು ಕಥೆಗಾರನ ಮಾತು, ನಿರೂಪಕರಿಂದ ಕಥೆಯ ಓದು, ಹಿರಿಯ ಸಾಹಿತಿಗಳಿಂದ ವಿಮರ್ಶೆ ಹಾಗೂ ಪೂರಕ ಸಂಗೀತ ಒಳಗೊಂಡಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ -
PUC ವಿಜ್ಞಾನ ವಿಭಾಗದಲ್ಲಿ ಶೇ.91.69ರಷ್ಟು ದಾಖಲೆ ಫಲಿತಾಂಶ: ಇವರೇ 599 ಅಂಕ ಗಳಿಸಿದ ಟಾಪರ್ -
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC 'ವಾಣಿಜ್ಯ' ವಿಭಾಗದಲ್ಲಿ ಶೇ.88.4ರಷ್ಟು ಸಾಧನೆ: ಇಬ್ಬರಿಗೆ 600ಕ್ಕೆ 600 ಅಂಕ, ಇವರೇ ಟಾಪರ್ಸ್ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ
Download










Click it and Unblock the Notifications