ಕನ್ನಡದ ಸಣ್ಣ ಕಥೆ ಕೇಳಲು 'ಕಥಾ ಕಣಜ' ಆಕಾಶವಾಣಿ ಕಾರ್ಯಕ್ರಮ
ಬೆಂಗಳೂರು, ಮೇ 25 : ಕನ್ನಡ ಸಾಹಿತ್ಯ ಲೋಕದಲ್ಲಿ ಸಣ್ಣಕಥೆಗಳಿಗೆ ವಿಶಿಷ್ಠ ಸ್ಥಾನವಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಕಾಶವಾಣಿ ಮೂಲಕ ಸಣ್ಣಕಥೆಗಳನ್ನು ಜನರಿಗೆ ತಲುಪಿಸಲು ಸರಣಿ ಕಾರ್ಯಕ್ರಮವನ್ನು ನಡೆಸಲಿದೆ.
ಸಣ್ಣಕಥೆಗಳ ಕೌತುಕಗಳನ್ನು ಅನಾವರಣಗೊಳಿಸಿ ಜನರಿಗೆ ಕೇಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ 'ಕಥಾ ಕಣಜ' ಎಂಬ ಕಾರ್ಯಕ್ರಮವನ್ನು ನಡೆಸಲಿದೆ. ಅತ್ಯುತ್ತಮ ಕಥೆಗಳ ಓದು ಹಾಗೂ ವಿಮರ್ಶೆಯನ್ನು ಈ ಮಾಲಿಕೆ ಒಳಗೊಂಡಿರುತ್ತದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪನವರ ಪ್ರಧಾನ ಸಂಪಾದಕತ್ವದಲ್ಲಿ ಮತ್ತು ಡಾ. ಗಿರಡ್ಡಿ ಗೋವಿಂದರಾಜು ಮತ್ತು ಬೋಳುವಾರು ಮೊಹಮದ್ ಕುಂಇ ಇವರ ಸಂಪಾದಕತ್ವದಲ್ಲಿ ನಮ್ಮ ನಾಡಿನ ಎಲ್ಲಾ ಪ್ರದೇಶಗಳ ಎಲ್ಲಾ ಪ್ರಕಾರಗಳ ಎಲ್ಲಾ ಸಮುದಾಯಗಳ ಸಾಕ್ಷಿಪ್ರಜ್ಞೆಯಂತೆ ಮತ್ತು ಎಲ್ಲರೂ ಒಪ್ಪುವಂತೆ ಆರಿಸಿದ 'ಶತಮಾನದ ಸಣ್ಣಕಥೆಗಳು' ಕಥಾ ಸಂಕಲನವು ಕಥಾಕಣಜ ಮಾಲಿಕೆಗೆ ಪ್ರಮುಖ ಆಕರವಾಗಿದೆ.

ಲೇಖಕ ಹಾಗೂ ವಿಮರ್ಶಕರಾದ ಡಾ. ಎಸ್. ದಿವಾಕರ್ ರವರು ಸಂಪಾದಿಸಿರುವ ಕಥಾ ಸಂಕಲನ ಮತ್ತು ಪ್ರೊ. ಜಿ.ಹೆಚ್. ನಾಯಕ್ ರವರು ಸಂಪಾದಿಸಿರುವ ಕಥಾ ಸಂಕಲನದ ಕೆಲವು ಉತ್ತಮ ಕಥೆಗಳನ್ನು ಸಹ ಈ ಮಾಲಿಕೆಯಲ್ಲಿ ಬಳಸಿಕೊಳ್ಳಲಾಗಿದೆ.
ಈ ಸರಣಿ ಮಾಲಿಕೆಯಲ್ಲಿ ಪ್ರತಿವಾರ ಒಂದು ಕಥೆಯಂತೆ ಒಂದು ವರ್ಷಕ್ಕೆ 52 ಕಥೆಗಳು ಪ್ರಸಾರಗೊಳ್ಳಲಿವೆ. ಈ ಕಾರ್ಯಕ್ರಮವು ಕಥೆಗಾರನ ಮಾತು, ಕಥೆಯ ಓದು, ಹಿರಿಯ ಸಾಹಿತಿಗಳಿಂದ ವಿಮರ್ಶೆ ಹಾಗೂ ಪೂರಕ ಸಂಗೀತವನ್ನು ಒಳಗೊಂಡಿರುತ್ತದೆ.
ಹಿರಿಯ ಸಾಹಿತಿಗಳಾದ ಡಾ. ಹೆಚ್.ಎಸ್ ವೆಂಕಟೇಶ್ ಮೂರ್ತಿ, ಕುಂ.ವೀರಭದ್ರಪ್ಪ, ಜಯಂತಿ ಕಾಯ್ಕಿಣಿ ಮತ್ತು ಡಾ. ಎಂ.ಎಸ್.ಆಶಾದೇವಿ ಅವರು ಸೇರಿದಂತೆ 19 ಜನ ಸಾಹಿತಿಗಳು ಕಥಾ ವಿಮರ್ಶಕರಾಗಿ ಭಾಗವಹಿಸಲಿದ್ದಾರೆ.
ಶ್ರೀನಿವಾಸ ಪ್ರಭು, ಡಾ. ಅಬ್ದುಲ್ ರೆಹಮಾನ್ ಪಾಷಾ, ಜೆ.ಪಿ. ರಾಮಣ್ಣ, ಬಿ.ಕೆ ಸುಮತಿ ಸೇರಿದಂತೆ ಕನ್ನಡದ ಅತ್ಯುತ್ತಮ ನಿರೂಪಕರು ಕಥೆಗಳನ್ನು ಓದಲಿದ್ದಾರೆ.
ಕಾರ್ಯಕ್ರಮದ ವಿವರ
* ಪ್ರಸಾರದ ಅವಧಿ : ಪ್ರತಿ ಸೋಮವಾರ fm rainbow 101.3 mhz ನಲ್ಲಿ ಬೆಳಗ್ಗೆ 8.02ಕ್ಕೆ
* ಪ್ರತಿ ಬುಧವಾರ ಬೆಳಗ್ಗೆ 7.15 ಕ್ಕೆ ಕರ್ನಾಟಕದ ಎಲ್ಲ 13 ಬಾನುಲಿ ಕೇಂದ್ರಗಳು ಮತ್ತು ಬೆಂಗಳೂರು ಆಕಾಶವಾಣಿ ಮುಖ್ಯ ವಾಹಿನಿಯಲ್ಲಿ ಪ್ರಸಾರ
* ಪ್ರತಿ ಶುಕ್ರವಾರ ವಿವಿಧ ಭಾರತಿ fm 102.9 MHz ನಲ್ಲಿ 8.30 ಕ್ಕೆ ಮರುಪ್ರಸಾರ
ಕಾರ್ಯಕ್ರಮದ ಕುರಿತು : ಕಥಾ ಕಣಜ ಕಾರ್ಯಕ್ರಮದ ಪರಿಕಲ್ಪನೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಎನ್.ಆರ್. ವಿಶುಕುಮಾರ್ ಅವರದ್ದು. ಶೀರ್ಷಿಕೆ ಗೀತೆಯನ್ನು ಡಾ.ಕೆ.ವೈ ನಾರಾಯಣಸ್ವಾಮಿ ಅವರು ರಚಿಸಿದ್ದಾರೆ.
ಆಕಾಶವಾಣಿ ತಂಡ : ಸುಬ್ಬಯ್ಯ ( ಸುಬ್ಬು ಹೊಲೆಯಾರ್), ಶಿವಪ್ರಕಾಶ, ಬಿ.ಕೆ. ಸುಮತಿ. ಪ್ರತಿವಾರ ಒಂದು ಕಥೆಯಂತೆ ಒಂದು ವರ್ಷಕ್ಕೆ 52 ಕಥೆಗಳು ಪ್ರಸಾರವಾಗಲಿವೆ. ಈ ಕಾರ್ಯಕ್ರಮವು ಕಥೆಗಾರನ ಮಾತು, ನಿರೂಪಕರಿಂದ ಕಥೆಯ ಓದು, ಹಿರಿಯ ಸಾಹಿತಿಗಳಿಂದ ವಿಮರ್ಶೆ ಹಾಗೂ ಪೂರಕ ಸಂಗೀತ ಒಳಗೊಂಡಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ
Download











Click it and Unblock the Notifications