ಗಣಪತಿ ಭಟ್, ಶ್ರೀಧರ್ ಸೇರಿದಂತೆ 18 ಕಲಾಸಾಧಕರಿಗೆ ಪ್ರಶಸ್ತಿ
ಬೆಂಗಳೂರು, ಆಗಸ್ಟ್ 02 : ನಾದಗ್ರಾಮ ಸೃಷ್ಟಿಕರ್ತ ಹಿಂದೂಸ್ತಾನಿ ಗಾಯಕ ಗಣಪತಿ ಭಟ್ ಮತ್ತು ಭರತನಾಟ್ಯ ಪ್ರವೀಣ ನಟ ಶ್ರೀಧರ್ ಸೇರಿದಂತೆ 18 ಕಲಾಸಾಧಕರನ್ನು 2007-08 ಸಾಲಿನ ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಅಕಾಡೆಮಿ ಅಧ್ಯಕ್ಷ ರಾಜಶೇಖರ್ ಮನ್ಸೂರ್ ಅವರು ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿ ಡಿಸೆಂಬರ್ ಮೊದಲ ವಾರದಲ್ಲಿ ಮೈಸೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಗೌರವ ಪ್ರಶಸ್ತಿ ಪುರಸ್ಕೃತರಿಗೆ ಹತ್ತು ಸಾವಿರ ರುಪಾಯಿ ಮತ್ತು ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ಐದು ಸಾವಿರ ರುಪಾಯಿ ನೀಡಲಾಗುವುದು. ಇದರೊಂದಿಗೆ ಶಾಲು, ಹಾರ, ಫಲ-ತಾಂಬೂಲ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಅವರು ವಿವರಿಸಿದರು.
ಪ್ರಶಸ್ತಿ ವಿಜೇತರ ಪಟ್ಟಿ ಇಂತಿದೆ:
ಕರ್ನಾಟಕ ಸಂಗೀತ
ಡಾ.ರತ್ನಾ ಶಿವಶಂಕರ್, ಬೆಂಗಳೂರು (ಹಾಡುಗಾರಿಕೆ)
ಬಿ.ಜಿ.ಶ್ರೀನಿವಾಸ, ಬೆಂಗಳೂರು (ಕೊಳಲು)
ಕೆ.ಜೆ.ವೆಂಕಟೇಶಾಚಾರ್, ಮೈಸೂರು (ಪಿಟೀಲು)
ಹಿಂದೂಸ್ತಾನಿ ಸಂಗೀತ
ಗಣಪತಿ ಭಟ್ ಹಾಸಣಗಿ, ಉತ್ತರ ಕನ್ನಡ (ಗಾಯನ)
ಎಂ.ವೆಂಕಟೇಶಕುಮಾರ್, ಧಾರವಾಡ (ಗಾಯನ)
ಅಕ್ಕಮಹಾದೇವಿ ಹಿರೇಮಠ, ಧಾರವಾಡ (ಪಿಟೀಲು)
ಭರತನಾಟ್ಯ
ಚಿತ್ರನಟ ಶ್ರೀಧರ್, ಬೆಂಗಳೂರು
ನಿರ್ಮಲಾ ಮಂಜುನಾಥ್, ಬೆಂಗಳೂರು
ಕೆ.ಜಿ.ಕುಲಕರ್ಣಿ, ಹಾವೇರಿ
ಕುಮುದಿನಿರಾವ್, ಧಾರವಾಡ
ಸುಗಮ ಸಂಗೀತ
ನಾರಾಯಣ ಢಗೆ, ರಾಯಚೂರು
ಕಥಾಕೀರ್ತನ
ಬಿ.ಪಿ. ರಾಜಮ್ಮ, ಬೆಂಗಳೂರು
ಡಾ.ಎಂ.ಕಿರಣಕುಮಾರ್, ಬೆಂಗಳೂರು
ಗಮಕವಾಚನ
ಕೆ.ಜಯಮ್ಮ, ಹಾಸನ
ಎಂ.ಆರ್.ಸತ್ಯನಾರಾಯಣ, ಬೆಂಗಳೂರು
ಸಂಘಸಂಸ್ಥೆ
ಕುಮಾರವ್ಯಾಸ ಮಂಟಪ, ರಾಜಾಜಿನಗರ, ಬೆಂಗಳೂರು
ಗೌರವ ಪ್ರಶಸ್ತಿಗಾಗಿ ಕರ್ನಾಟಕ ಸಂಗೀತಜ್ಞೆ ಎಂ.ಎಸ್.ಶೀಲಾ ಮತ್ತು ಭರತನಾಟ್ಯ ಕಲಾವಿದೆ ಡಾ.ತುಳಸಿ ರಾಮಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.
(ದಟ್ಸ್ಕನ್ನಡ ವಾರ್ತೆ)
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications