ಗಣಪತಿ ಭಟ್, ಶ್ರೀಧರ್ ಸೇರಿದಂತೆ 18 ಕಲಾಸಾಧಕರಿಗೆ ಪ್ರಶಸ್ತಿ
ಬೆಂಗಳೂರು, ಆಗಸ್ಟ್ 02 : ನಾದಗ್ರಾಮ ಸೃಷ್ಟಿಕರ್ತ ಹಿಂದೂಸ್ತಾನಿ ಗಾಯಕ ಗಣಪತಿ ಭಟ್ ಮತ್ತು ಭರತನಾಟ್ಯ ಪ್ರವೀಣ ನಟ ಶ್ರೀಧರ್ ಸೇರಿದಂತೆ 18 ಕಲಾಸಾಧಕರನ್ನು 2007-08 ಸಾಲಿನ ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಅಕಾಡೆಮಿ ಅಧ್ಯಕ್ಷ ರಾಜಶೇಖರ್ ಮನ್ಸೂರ್ ಅವರು ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿ ಡಿಸೆಂಬರ್ ಮೊದಲ ವಾರದಲ್ಲಿ ಮೈಸೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಗೌರವ ಪ್ರಶಸ್ತಿ ಪುರಸ್ಕೃತರಿಗೆ ಹತ್ತು ಸಾವಿರ ರುಪಾಯಿ ಮತ್ತು ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ಐದು ಸಾವಿರ ರುಪಾಯಿ ನೀಡಲಾಗುವುದು. ಇದರೊಂದಿಗೆ ಶಾಲು, ಹಾರ, ಫಲ-ತಾಂಬೂಲ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಅವರು ವಿವರಿಸಿದರು.
ಪ್ರಶಸ್ತಿ ವಿಜೇತರ ಪಟ್ಟಿ ಇಂತಿದೆ:
ಕರ್ನಾಟಕ ಸಂಗೀತ
ಡಾ.ರತ್ನಾ ಶಿವಶಂಕರ್, ಬೆಂಗಳೂರು (ಹಾಡುಗಾರಿಕೆ)
ಬಿ.ಜಿ.ಶ್ರೀನಿವಾಸ, ಬೆಂಗಳೂರು (ಕೊಳಲು)
ಕೆ.ಜೆ.ವೆಂಕಟೇಶಾಚಾರ್, ಮೈಸೂರು (ಪಿಟೀಲು)
ಹಿಂದೂಸ್ತಾನಿ ಸಂಗೀತ
ಗಣಪತಿ ಭಟ್ ಹಾಸಣಗಿ, ಉತ್ತರ ಕನ್ನಡ (ಗಾಯನ)
ಎಂ.ವೆಂಕಟೇಶಕುಮಾರ್, ಧಾರವಾಡ (ಗಾಯನ)
ಅಕ್ಕಮಹಾದೇವಿ ಹಿರೇಮಠ, ಧಾರವಾಡ (ಪಿಟೀಲು)
ಭರತನಾಟ್ಯ
ಚಿತ್ರನಟ ಶ್ರೀಧರ್, ಬೆಂಗಳೂರು
ನಿರ್ಮಲಾ ಮಂಜುನಾಥ್, ಬೆಂಗಳೂರು
ಕೆ.ಜಿ.ಕುಲಕರ್ಣಿ, ಹಾವೇರಿ
ಕುಮುದಿನಿರಾವ್, ಧಾರವಾಡ
ಸುಗಮ ಸಂಗೀತ
ನಾರಾಯಣ ಢಗೆ, ರಾಯಚೂರು
ಕಥಾಕೀರ್ತನ
ಬಿ.ಪಿ. ರಾಜಮ್ಮ, ಬೆಂಗಳೂರು
ಡಾ.ಎಂ.ಕಿರಣಕುಮಾರ್, ಬೆಂಗಳೂರು
ಗಮಕವಾಚನ
ಕೆ.ಜಯಮ್ಮ, ಹಾಸನ
ಎಂ.ಆರ್.ಸತ್ಯನಾರಾಯಣ, ಬೆಂಗಳೂರು
ಸಂಘಸಂಸ್ಥೆ
ಕುಮಾರವ್ಯಾಸ ಮಂಟಪ, ರಾಜಾಜಿನಗರ, ಬೆಂಗಳೂರು
ಗೌರವ ಪ್ರಶಸ್ತಿಗಾಗಿ ಕರ್ನಾಟಕ ಸಂಗೀತಜ್ಞೆ ಎಂ.ಎಸ್.ಶೀಲಾ ಮತ್ತು ಭರತನಾಟ್ಯ ಕಲಾವಿದೆ ಡಾ.ತುಳಸಿ ರಾಮಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.
(ದಟ್ಸ್ಕನ್ನಡ ವಾರ್ತೆ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications