ಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?

* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ ಚುನಾವಣೆಯಲ್ಲಿ ತಮಿಳರ ಮತ ಗಳಿಕೆಯ ದೃಷ್ಟಿಯಿಂದಲೇ ಹೊರತು ತಮಿಳುನಾಡಿನೊಡನೆ ಯಾವ ಸೌಹಾರ್ದದ ಉದ್ದೇಶದಿಂದಲೂ ಅಲ್ಲ. ಏಕೆಂದರೆ, ದೇಶದ ಎಲ್ಲ ಪಕ್ಷಗಳ ಎಲ್ಲ ರಾಜಕಾರಣಿಗಳೂ ಅಂತರಂಗದಲ್ಲಿ ಸದಾ ಮಿತ್ರರೇ.
* ಬೆರಳೆಣಿಕೆಯ ಹಿರಿಯ ಸಾಹಿತಿಗಳು ಬೆಂಬಲಿಸುತ್ತಿರುವುದು ತಮ್ಮ ಪ್ರವೃತ್ತಿಬಂಧುದ್ವಯರಮೇಲಿನ ಅಭಿಮಾನದಿಂದ ಮತ್ತು ಆ ಕವಿಶ್ರೇಷ್ಠದ್ವಯರ ಪಂಗಡಕ್ಕೆ ಸೇರಿದ ಶ್ರೇಷ್ಠರು ತಾವೆಂದು ಈ ಮೂಲಕ ಪರೋಕ್ಷವಾಗಿ ಸಾರುವ ಉದ್ದೇಶದಿಂದ. ಈ ಹಿರಿಯ ಸಾಹಿತಿಗಳು ತಮಿಳುನಾಡು ಸರ್ಕಾರವನ್ನು ಮತ್ತು ತಮಿಳರನ್ನು ಅರ್ಥಮಾಡಿಕೊಂಡ ಬಗೆ ಇವರ ಮುಗ್ಧತೆಯನ್ನು ತೋರಿಸುತ್ತದೆ.
* ಕನ್ನಡಪರ ಸಂಘಟನೆಗಳು ವಿರೋಧಿಸುತ್ತಿರುವುದರಲ್ಲಿ ಸ್ವಾರ್ಥ ಇರಬಹುದಾದರೂ ವಿರೋಧವು ಸಕಾರಣವಾದುದಾಗಿದೆ.
* ಚೆನ್ನೈನಲ್ಲಿ ಕನ್ನಡಿಗರು ತಮ್ಮ ಬುಡ ಭದ್ರಪಡಿಸಿಕೊಳ್ಳಲು, ತಮ್ಮ ಬೇರುಗಳನ್ನು ವಿಸ್ತರಿಸಲು ಮತ್ತು ತಮ್ಮ ಬಾಹುಗಳನ್ನು ಚಾಚಲು ಸರ್ವಜ್ಞನ ಪ್ರತಿಮೆಯನ್ನು ಎಂದೂ ಬಳಸಿಕೊಳ್ಳುವುದಿಲ್ಲ; ಆದರೆ ಬೆಂಗಳೂರಿನ ತಮಿಳರ ಬಗ್ಗೆ ಈ ಭರವಸೆ ಇಲ್ಲ.
* ಈಗಾಗಲೇ ಕನ್ನಡಿಗರು ಅಲ್ಪಸಂಖ್ಯಾತರಾಗಿರುವ ಮತ್ತು ಕನ್ನಡವು ತೀವ್ರಗತಿಯಲ್ಲಿ ಮಾಯವಾಗುತ್ತಿರುವ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಕೇವಲ 'ಕವಿಗೌರವ ಮತ್ತು ಸೌಹಾರ್ದ'ದ ದೃಷ್ಟಿಯಿಂದ ಮಾತ್ರ ನೋಡಿದರೆ ಸಾಲದು. ರಾಜಧಾನಿಯಲ್ಲಿ ಕನ್ನಡದ ಮತ್ತು ಕನ್ನಡಿಗರ ರಕ್ಷಣೆಯ ದೃಷ್ಟಿಯಿಂದಲೂ ನೋಡಬೇಕು. ಕನ್ನಡ ಮತ್ತು ಕನ್ನಡಿಗರು ಗಟ್ಟಿಮುಟ್ಟಾಗಿ ಉಳಿದರೆ ತಾನೇ, ಕವಿ, ಸೌಹಾರ್ದ ಇತ್ಯಾದಿ?
* ಇಷ್ಟಕ್ಕೂ ಎರಡೂ ಪ್ರತಿಮೆಗಳನ್ನೂ ಏಕಕಾಲದಲ್ಲಿ ಅನಾವರಣಗೊಳಿಸಲು ಸಾಧ್ಯವಿಲ್ಲವೆ? ಇದರಲ್ಲೂ ತಮಿಳರದೇ ಮೇಲುಗೈಯಾಗಬೇಕೆ? ಈ ಚಿಕ್ಕ ವಿಷಯದಲ್ಲೂ ಕನ್ನಡಿಗರಾದ ನಾವು ಬೆನ್ನು ಬಗ್ಗಿಸುತ್ತೇವೆಂದರೆ ಇನ್ನು ಕಾವೇರಿ, ಹೊಗೇನಕಲ್, ಶಾಸ್ತ್ರೀಯ ಭಾಷೆ....ಈ ವಿಷಯಗಳಲ್ಲಿ ಮುಂದೆ ನಮ್ಮ ಪಾಡೇನು? ಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?
* ತಿರುವಳ್ಳುವರ್ ಪ್ರತಿಮೆಯ ಅನಾವರಣ ಭಾನುವಾರದಂದು. ಗರಿಷ್ಠ ಸಂಖ್ಯೆಯ ತಮಿಳರು ಅನಾವರಣ ಸಮಾರಂಭಕ್ಕೆ ಹಾಜರಾಗಲು ಅನುಕೂಲ. ಅದೇ, ಸರ್ವಜ್ಞನ ಪ್ರತಿಮೆಯ ಅನಾವರಣ ಗುರುವಾರದಂದು! ಹೇಗಿದೆ ತಮಿಳರ ಐಡಿಯಾ!
* 'ಕನ್ನಡ ನೆಲ-ಜಲ-ಭಾಷೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ' ಎಂಬ ಹಳಸಲು ಮಾತನ್ನು ನಮ್ಮ ಎಲ್ಲ ರಾಜಕಾರಣಿಗಳಂತೆಯೇ ಯಡಿಯೂರಪ್ಪನವರೂ ನೂರಾಒಂದನೇ ಸಲ ಹೇಳುತ್ತಿದ್ದಾರೆ. ಸಮಸ್ಯೆಗಳನ್ನು ತಮಿಳುನಾಡಿನೊಡನೆ ಮಾತುಕತೆ ಮೂಲಕ ಪರಿಹರಿಸಿಕೊಳ್ಳುವುದಾಗಿಯೂ ಹೇಳುತ್ತಿದ್ದಾರೆ. ಕಾವೇರಿ ವಿವಾದ, ಹೊಗೇನಕಲ್ ವಿವಾದ, ಶಾಸ್ತ್ರೀಯಭಾಷೆ ವಿವಾದ ಮೊದಲಾದ ವಿವಾದಗಳು ಬಗೆಹರಿದ ನಂತರ ಇಬ್ಬರೂ ಒಟ್ಟಾಗಿ ಎರಡೂ ಪ್ರತಿಮೆಗಳನ್ನೂ ವಿಜೃಂಭಣೆಯಿಂದ ಅನಾವರಣ ಮಾಡೋಣ ಎಂದು ಯಡಿಯೂರಪ್ಪನವರು ಕರುಣಾನಿಧಿಯವರನ್ನು ಮಾತುಕತೆ ಮೂಲಕ ಒಪ್ಪಿಸಬಹುದಲ್ಲವೆ? ಇದೇ ಸಾಧ್ಯವಾಗದಿದ್ದರೆ ಇನ್ನು ವಿವಾದಗಳೆಲ್ಲ ಮಾತುಕತೆ ಮೂಲಕ ನ್ಯಾಯಯುತವಾಗಿ ಬಗೆಹರಿಯುವುದು ಸಾಧ್ಯವೆ?
* ಚಾರ್ಲಿ ಚಾಪ್ಲಿನ್ ಪ್ರತಿಮೆಯ ಗೊಟಾಳೆ ಆಯಿತು, ಈಗ ತಿರುವಳ್ಳುವರ್ ಪ್ರತಿಮೆಯ ಗೊಟಾಳೆ. ಸಮಾಜದ ಮನಸ್ಸನ್ನು ಒಡೆದು ಪ್ರತಿಮೆಗಳನ್ನು ಸ್ಥಾಪಿಸುವ ತುರ್ತು ಅಂಥಾದ್ದೇನಿದೆ? ಗಾಂಧೀಜಿಯ ಆದರ್ಶಗಳಿಗೆ ಚಿಕ್ಕಾಸಿನ ಬೆಲೆಯನ್ನೂ ಕೊಡದ ನಾವು ಆ ವ್ಯಕ್ತಿಯ ಪ್ರತಿಮೆಗಳನ್ನು ಮಾತ್ರ ಗಲ್ಲಿಗೊಂದರಂತೆ ಸ್ಥಾಪಿಸಿ ಏನು ಸಾಧಿಸಿದ್ದೇವೆ?
* ಕೊನೆಗೊಂದು ಕಟಕಿ: ಉಳ್ಳವರ್ ತಿರುವಳ್ಳುವರ್ ಪ್ರತಿಮೆಯ ಸ್ಥಾಪಿಸುವರ್. ತಿರಿದುಣ್ಣುವರ್ ಅದರ ಕೆಳಗೆ ಕುಳಿತು ಸುರಿದುಣ್ಣುವರ್! ಅಕಟಕಟಾ!
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications