ಗುಬ್ಬಚ್ಚಿ : ಬದುಕಿದೆಯಾ ಬಡಜೀವವೆ

ನಗರವಾಸಿಗಳಿಗಂತೂ ಈ ಅಂಗುಲ ಉದ್ದದ ಉಣ್ಣೆ ಉಂಡೆಯಂತಹ ಪಕ್ಷಿಯ ಬಗ್ಗೆ ವಿಶೇಷ ಅಕ್ಕರೆ. ಅಂಗಡಿಯ ಶೆಲ್ಪಿನ ಮೂಲೆಯಲ್ಲಿ, ಕ್ಯಾಲೆಂಡರಿನ ಹಿಂದೆ, ಗೋಡೆಗೆ ನೇತಿಟ್ಟ ದೇವರ ಫೋಟೋದ ಹಿಂಬಾಗದಲ್ಲಿ, ಬೆಳಕಿಂಡಿಯ ಕಿಟಕಿಯಲ್ಲಿ ಹೀಗೆ ಎಲ್ಲೆಂದರಲ್ಲಿ ಗರಿಗಳನ್ನು, ಹುಲ್ಲು ಗರಿಕೆಗಳನ್ನು ತಂದು ಬೆಚ್ಚನೆಯ ಗೂಡುಕಟ್ಟಿ ಸಂಸಾರ ಹೋಡುವ ಈ ಹಕ್ಕಿ ನಿರುಪದ್ರವಿ. ಆದರೆ ಈ ಪುಟ್ಟ ಜೀವಕ್ಕೆ ಮನುಷ್ಯನ ಉಪದ್ರವ ಮಾತ್ರ ಸಂತತಿಯೇ ನಾಶವಾಗುವಷ್ಟು ಕಾಡಿಸಿದ್ದು ಖರೆ.
ಆಧುನಿಕ ಅತ್ಯಾವಶ್ಯಕ ವಸ್ತುವಾಗಿರುವ ಮೊಬೈಲ್ ಸಂಜ್ಞೆಗಳಿಂದಾಗಿ ಗುಬ್ಬಚ್ಚಿಯ ಸಂತತಿಯೇ ನಾಶವಾಗುವ ಹಂತ ತಲುಪಿದ್ದು ಹಳೆಯ ಸಂಗತಿ. ವಿಜ್ಞಾನಿಗಳು ಗುಬ್ಬಿಯ ಮೇಲೆ ಸಂಜ್ಞೆಗಳು ಬೀರಿದ ಪರಿಣಾಮವನ್ನು ಆಧಾರವಾಗಿಟ್ಟುಕೊಂಡೇ ಮೊಬೈಲ್ ಮನುಷ್ಯನ ಮೇಲೆ ಅದರಲ್ಲೂ ಚಿಕ್ಕಮಕ್ಕಳ ದೇಹದ ಮೇಲೆ ಬೀರುವ ಅಪಾಯಗಳ ಕುರಿತು ಪ್ರತಿಪಾದಿಸಿದ್ದರು. ಹೃದಯ, ಮೆದುಳು ಮುಂತಾದ ಸೂಕ್ಷ್ಮ ಅವಯವಗಳ ಮೇಲೆ ಅಪಾಯವುಂಟುಮಾಡಿ, ಕ್ಯಾನ್ಸರ್ನ ಹುಟ್ಟಿಗೆ ಕೂಡ ಕಾರಣವಾಗಬಹುದು ಎಂದು ಎಚ್ಚರಿಸಿದ್ದರು.
ಈ ಕುರಿತು ಹಲವು ವಿಸ್ತ್ರತ ಸಂಶೋಧನೆಗಳು ನಡೆದವು. ಮೊಬೈಲ್ ವಿಕಿರಣಗಳು ಬೀರುವ ಅಪಾಯಗಳೂ ಸಿದ್ಧವಾದವು. ಜನರು ವಿಜ್ಞಾನಿಗಳು ನೀಡಿದ ವರದಿಯಿಂದ ಕಂಗಾಲಾದರು. ಆದರೆ ಮೊಬೈಲ್ ಬಳಕೆಯಿಂದ ವಿಮುಖವಾಗುವ ಮನಸ್ಸನ್ನು ಯಾರೂ ಮಾಡಿಲ್ಲ. ಅಪಾಯದ ಅರಿವಿದ್ದರೂ ಮೊಬೈಲ್ ಕಂಪನಿಗಳು ನೀಡುವ ತರಹೇವಾರಿ ಆಫರ್ಗಳಿಗೆ ಮನಸೋತು ಖರೀದಿಸಿದರು. ಇದೆಲ್ಲದರ ಪರಿಣಾಮ ನೇರವಾಗಿ ಆಗಿದ್ದು ಗುಬ್ಬಚ್ಚಿಯೆಂಬ ಪುಟ್ಟ ಪಕ್ಷಿಯಮೇಲ್ಹಾಗೂ ಇಂತದೇ ಇನ್ನಷ್ಟು ಸೂಕ್ಷ್ಮ ಜೀವಿಗಳ ಮೇಲೆ. ಸುಮಾರು 10 ವರ್ಷಗಳ ಕಾಲ ಒಂದೇ ಸಮನೆ ಈ ಗುಬ್ಬಿಯ ಸಂತತಿಯು ಕ್ಷೀಣಿಸಿತು. ಆದರೆ ಇದೀಗೆ ಮತ್ತೆ ಕಾಣಿಸಕೊಳ್ಳತೊಡಗಿವೆ. ದುಂಡುದುಂಡಾಗಿ ಅಂಗಡಿಯಮುಂಗಟ್ಟುಗಳ ಮುಂದೆ, ಬಸ್ಟ್ಯಾಂಡ್ನ ಟ್ಯೂಬ್ಲೈಟ್ ಮೇಲೆ, ಪುಸ್ತಕದ ಅಂಗಡಿಯಲ್ಲಿ ನೇತುಬಿಟ್ಟ ಪುಸ್ತಕಗಳ ಮೇಲೆ ಗುಬ್ಬಿಗಳ ರೆಕ್ಕೆ ಸದ್ದು ಕೇಳತೊಡಗಿದೆ.
ಜೀವ ವಿಜ್ಞಾನದ ಮಹತ್ವದ ಅಂಶವೊಂದು ಸಾಮಾನ್ಯನ ಅರಿವಿಗೂ ಬರುವಂತಾಗಿದೆ. ಗುಬ್ಬಿಗಳ ದೇಹದಲ್ಲಿ ಮೊಬೈಲ್ ವಿಕಿರಣಗಳನ್ನು ಜಯಿಸುವಂತೆ ಮಾರ್ಪಾಟಾಗಿರಬಹುದು. ಈ ಬದಲಾವಣೆಯೇ ಮತ್ತೆ ಗುಬ್ಬಿಗಳು ಕಾಣಿಸಿಕೊಳ್ಳಲು ಕಾರಣವಾಗಿರಲೂಬಹುದು.
ಜೀವ ವಿಕಾಸದ ಪ್ರಮುಖ ಘಟ್ಟದಲ್ಲಿ ಅಳಿಯಲಿರುವ ಸಂತತಿಯೊಂದು ಉಳಿಯುವುದಕ್ಕಾಗಿ ಪ್ರಕೃತಿಯ ಒತ್ತಡಗಳ ಜೊತೆಗೆ ಜಿದ್ದಿಗೆ ಬಿದ್ದು ಗೆದ್ದಿದೆ ಎನ್ನಬಹುದು. ಇದೇ ರೀತಿ ಮನುಷ್ಯನು ಕೂಡ ನಿರಂತರವಾಗಿ ಮೊಬಾಯಿಲ್ ಸಂಸರ್ಗದಲ್ಲಿಯೇ ಇರುತ್ತಾನಾದ್ದರಿಂದ ಅಪಾಯಗಳನ್ನು ಜಯಿಸಿದರೂ ಜಯಿಸಬಹುದು. ಈ ನಿಟ್ಟಿನಲ್ಲಿ ವಿಜ್ಞಾನಿಗಳು ಸಂಶೋಧನೆಗಳನ್ನು ಕೈಗೊಂಡು ವಾಸ್ತವಾಂಶಗಳನ್ನು ಖಚಿತಪಡಿಸಬೇಕಾಗಿದೆ.
IS ELECTROSMOG KILLING THE SPARROW?
-
ಐಪಿಎಲ್ ಪಂದ್ಯಗಳ ವೇಳೆ ಅಪ್ರಾಪ್ತರನ್ನು ಬಳಸಿ ಮೊಬೈಲ್ ಕಳ್ಳತನ: ಅಂತರರಾಜ್ಯ ಗ್ಯಾಂಗ್ ಬೆಂಗಳೂರಿನಲ್ಲಿ ವಶಕ್ಕೆ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications