ಪ್ರಕೃತಿಯ ಪಾಠಕ್ಕೆ ಮಕ್ಕಳನ್ನು ಒಡ್ಡಿದ ಅರಿವು ಶಾಲೆ

ಕಲಿಕೆಯ ಹೊಸತಂತ್ರ!
ಮಕ್ಕಳಲ್ಲಿ ಸಾಮಾಜಿಕ ಕಳಕಳಿ, ಸಾಂಸ್ಕೃತಿಕ ಬದ್ಧತೆ, ಪರಿಸರದೊಂದಿಗೆ ಹೊಂದಾಣಿಕೆ, ನಾಯಕತ್ವ ಮತ್ತು ಸಹಕಾರದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಇಲ್ಲಿ ಪರಿಸರಕ್ಕೂ, ಮಕ್ಕಳಿಗೂ ಹಿತವೆನ್ನಿಸೋ ಕಲಿಕೆಯನ್ನು ನೀಡುತ್ತಿದೆ. ಮಕ್ಕಳಿಗೆ ತಾವಿರುವ ಪರಿಸರದಿಂದಲೇ ಶಿಕ್ಷಣ ನೀಡುತ್ತಾ ಇಂದಿನ ಸ್ಫರ್ಧಾ ಪ್ರಪಂಚದಲ್ಲಿ ತಮ್ಮತನ ಕಾಯ್ದುಕೊಳ್ಳುವಂತಹ ಸುಲಭ - ಸಹಜ ಕಲಿಕೆಗೆ ಅನುವು ಮಾಡಿಕೊಡುತ್ತಿದೆ. ಪರಿಸರದ ಮೂಲಕ ಕಲಿಕೆ ಎಂದೇ ಹೊರಟಿರುವ ಅರಿವು ಶಾಲೆ ಪ್ರಕೃತಿಯ ಪಾಠಕ್ಕೆ ಮಕ್ಕಳನ್ನು ಒಡ್ಡಿದೆ. ತರಗತಿಯಲ್ಲಿ ನಡೆಯುವ ಪಠ್ಯಪುಸ್ತಕ ಶಿಕ್ಷಣದ ಜೊತೆಯಲ್ಲೇ ಪ್ರತಿವಾರ ಕೆರೆ, ಗುಡ್ಡ, ಪಕ್ಷಿ ವೀಕ್ಷಣೆ, ಸುತ್ತಲ ಗಿಡಮರಗಳ ಅಧ್ಯಯನಕ್ಕೆ ಹೋಗುತ್ತಾರೆ. ಪೊಲೀಸ್ ಸ್ಟೇಷನ್, ಇಟ್ಟಿಗೆ ಕಾರ್ಖಾನೆ, ಮ್ಯೂಸಿಯಂಗಳು, ಎಣ್ಣೆ ಗಾಣ ಹೀಗೆ ಊರಿನಲ್ಲಿರುವ ಎಲ್ಲ ಬಗೆಯ ಸ್ಥಳಗಳಿಗೆ ಹೋಗಿ ತಿಳಿವು ಹೆಚ್ಚಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಈ ರೀತಿ ತಮ್ಮ ಕಣ್ಣಿಗೆ ಕಾಣುವ ವಿಷಯಗಳ ಬಗ್ಗೆ ತಿಳಿದುಕೊಳ್ಳುವ ಮಕ್ಕಳಲ್ಲಿ ಸಹಜವಾಗಿಯೇ ಕಲಿಯುವ ಆಸಕ್ತಿ ಹೆಚ್ಚುತ್ತದೆ.
ನುರಿತ ತರಬೇತುದಾರರಿಂದ ಪಠ್ಯೇತರ ಕಲಿಕೆ
"ಅರಿವು ಶಾಲೆ" ಮಕ್ಕಳಿಗೆ ವಿವಿಧ ಕ್ಷೇತ್ರದಲ್ಲಿ ವಿಪುಲ ಅವಕಾಶಗಳನ್ನು ಒದಗಿಸುತ್ತಿದೆ. ಬೇರೆ ಬೇರೆ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಸುಮಾರು 8 ತರಬೇತುದಾರರು ನಿಜವಾದ ಶಿಕ್ಷಣದತ್ತ ಮಕ್ಕಳನ್ನು ಒಯ್ಯುತ್ತಿದ್ದಾರೆ. ಈಜು, ತಬಲಾ, ರಂಗಗೀತೆಗಳು, ಶಾಸ್ತ್ರೀಯ ಸಂಗೀತ, ದೇಸಿ ಆಟಗಳು, ಇಂಗ್ಲಿಷ್ ಸಂವಹನ, ಚಾರಣ ಮುಂತಾದ ಹಲವು ಕ್ಷೇತ್ರಗಳನ್ನು ಮಕ್ಕಳಿಗೆ ಪರಿಚಯಿಸುತ್ತಾ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹಾಕಿಸುತ್ತಾರೆ. ಹಾಂ... ನೀವು ಈ ಶಾಲೆಯ 1-2ನೇ ತರಗತಿಯಲ್ಲಿ ಕಲಿಯುತ್ತಿರುವ ಮಕ್ಕಳು ರಕ್ತ ಪರಿಚಲನೆ, ಮೂತ್ರೋತ್ಪತ್ತಿ, ಅಯಸ್ಕಾಂತ, ಮಸೂರಗಳ ಬಗ್ಗೆ ಮಾತನಾಡಿದರೆ ಅಚ್ಚರಿ ಪಡಬೇಕಿಲ್ಲ! ಆಡುನುಡಿಯಲ್ಲಿ ಕಲಿಯುವುದರಿಂದ ಮತ್ತು ಅನುಭವಗಳ ಸಮೇತ ಕಲಿಸುವ ಪದ್ದತಿ ಇರುವುದರಿಂದ ಅರ್ಥವಾಗುವಷ್ಟನ್ನು ಹೇಳುತ್ತಾರೆ. ಈ ಮಕ್ಕಳಲ್ಲಿ ಕಂಡದ್ದನ್ನೆಲ್ಲಾ ಇದೇನು? ಇದೇನು? ಎಂದು ತಿಳಿದುಕೊಳ್ಳಬೇಕೆನ್ನುವ ಕುತೂಹಲ ತೋರಿಸುವುದು ಹೆಚ್ಚಿದೆ. ಮಕ್ಕಳ ಸಹಜವಾದ ಈ ಕುತೂಹಲವನ್ನು ತುಳಿಯದೆ ತಣಿಸುವ ವಾತಾವರಣ ಇಲ್ಲಿದೆ. ಸಾಹಸ ಕ್ರೀಡೆಗಳು, ಪರ್ವತಾರೋಹಣ, ಕೆರೆ ಓಡಾಟ ಮಕ್ಕಳಿಗೆ ಸಾಕಷ್ಟು ಧೈರ್ಯ ಕಲಿಸಿದೆ.
ಪರಿಸರ ಪಾಠದ ಗುರುಗಳಾದ ಗುರು ಸಾರ್ ಮಕ್ಕಳಿಗೆ ಹಾವು ಹಿಡಿಯುವುದನ್ನು ಹೇಳಿಕೊಟ್ಟಿದ್ದಾರೆ ಅಂದ್ರೆ ನಂಬ್ತೀರಾ? ನೋಡಿ ಈ ಫೋಟೋನಾ.. ಜೀವ ಸಂಕುಲದ ಬಗ್ಗೆ ಪ್ರೀತಿ ಬೆಳೆಸಿಕೊಂಡಿರುವ ಮಕ್ಕಳು ಮುಂದೆ ಪರಿಸರ ಹಾನಿಯ ಕೆಲಸ ಮಾಡಲಾರರು ಎಂಬ ಭರವಸೆ ಮೂಡುತ್ತದೆ. ಸತತವಾಗಿ ಅರಿವು ಬಳಗ ತಮ್ಮನ್ನು ತಾವು ಕಲಿಕೆಗೆ ಒಡ್ದಿಕೊಂಡು ಮಕ್ಕಳೊಡನೆ ಒಂದಾಗಿ ಕಲಿಸುವ, ಕಲಿಕೆಯ ರೀತಿಯ ಬಗ್ಗೆ ನಿರಂತರತೆ ಕಾಯ್ದುಕೊಳ್ಳುವ ಗುರಿ ಹೊಂದಿದೆ.
ಹೆಚಿನ ಮಾಹಿತಿಗಾಗಿ ಸಂಪರ್ಕಿಸಿ:
ಅರಿವು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್
ಲಿಂಗಾಂಬುದಿ ಪಾಳ್ಯ ರಸ್ತೆ,
ಲಿಂಗಾಂಬುದಿ ಪಾಳ್ಯ, ಶ್ರೀರಾಂಪುರ,
ಮೈಸೂರು
ದೂರವಾಣಿ: 0821-2363399
ಡಾ ಮನೋಹರ - 9901225074
ಸುದರ್ಶನ - 9480326758
ಜನಾರ್ದನ - 9008512188
ಬರ್ಟಿ ಒಲಿವೆರಾ - 9448481968
ಮಾರುತಿ - 9880530404 (ಕೃಪೆ : ಕಲಿಕೆಯು...)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications