ಕನ್ನಡಿಗರು ಬಿಟ್ಟಿ ಬಿದ್ದಿಲ್ಲ ಅನ್ನುವುದು ನೆನಪಿರಲಿ!

ಹೊರನಾಡಿನಿಂದ ಬಂದು ಈ ನೆಲದಲ್ಲಿ ಬದುಕು ಕಟ್ಟಿಕೊಂಡಿರುವ ಕೆಲವರಲ್ಲಿ ಈ ನೆಲದ ಭಾಷೆ, ಸಂಸ್ಕೃತಿ, ಆಚಾರಗಳಿಗೆ ಬೆಲೆ ಕೊಡಬೇಕು ಅನ್ನುವ ಕಾಮನ್ ಸೆನ್ಸ್ ಇಲ್ಲ ಅನ್ನುವುದಕ್ಕಿಂತ, ಯಾವುದಕ್ಕೂ ಪ್ರತಿಕ್ರಿಯಿಸದ ಕನ್ನಡಿಗರ ಧೋರಣೆಯನ್ನೆ ಇಂತಹ ಜನಗಳು ನಮ್ಮ ದೌರ್ಬಲ್ಯ ಅಂದುಕೊಂಡಿದ್ದಾರೆ. ಇಲ್ಲದಿದ್ದರೆ ಫ಼ೇಸ್ಬುಕ್ಕಿನಲ್ಲಿ ರಾಬಿನ್ ಚುಗ್ ಅನ್ನುವ ಪರದೇಶಿ ಕನ್ನಡಿಗರಿಗೆ ಫ಼ಕ್ ಆಫ಼್ ಅನ್ನುತ್ತಿರಲಿಲ್ಲ ಅಲ್ಲವಾ? ಆತ ಕೆಲಸ ಮಾಡುವ ಕಂಪನಿಗೆ ಮಿಂಚೆ ಬರೆದು (ಭಾಷೆ ವಿಷಯ ಮುಟ್ಟಿಸುವಂತಿರಲಿ, ಬೈಗುಳ ದಯವಿಟ್ಟು ಬೇಡ) ಈ ಮಣ್ಣಿನ ಭಾಷೆಯ ಬಗ್ಗೆ ಗೌರವ ಇಲ್ಲದ ಇಂಥವರನ್ನ ನಿಮ್ಮ ಕಂಪೆನಿಯಲ್ಲಿ ಇಟ್ಟುಕೊಳ್ಳುವಿರಾ ಅಂತಲೇ ಕೇಳಬೇಕು. ಇಂತಹ ಹುಡುಗನನ್ನು ವಾಪಸ್ ಅವನ ಮನೆಗೆ ಕಳಿಸೋದು ನಮ್ಮ ಕರ್ತವ್ಯವಲ್ಲವೇ ಗೆಳೆಯರೇ?
ಫ಼ೇಸ್ಬುಕ್ಕಿನಲ್ಲಿ, ಮಿಂಚೆಗಳ ಮೂಲಕ ಮತ್ತೆ ಕರೆ ಮಾಡಿ ಗದರಿಸಿದ ಮೇಲೆ, ನಂದು ತಪ್ಪಾಯ್ತು ಕ್ಷಮಿಸಿಬಿಡಿ ಅನ್ನುತಿದ್ದಾನೆ ಈತ. [ಚುಗ್ ಬರೆದಿರುವ ಕೈಲಿಖಿತ ಕ್ಷಮಾಪಣಾ ಪತ್ರದ ಪ್ರತಿ ಇಲ್ಲಿದೆ, ಓದಿರಿ] ನಾವುಗಳು ಕೇಳದೆ ಸುಮ್ಮನಿದ್ದಿದ್ದರೆ ಆತನಿಗೆ ಜ್ಞಾನೋದಯವಾಗುತ್ತಿರಲಿಲ್ಲ. ಈಗ ಎಲ್ಲರೂ ದಬಾಯಿಸಿದ ಮೇಲೆ ಭಯಕ್ಕೆ ಕ್ಷಮೆ ಕೋರುತಿದ್ದಾನೆ ಹೊರತು ತಪ್ಪಿನ ಅರಿವಾಗಿಯಲ್ಲ. ಕಂಪನಿ ಕೂಡ ಇವ ಮಾಡಿದ ತಪ್ಪನ್ನು ಮನ್ನಿಸಿ ಎಂದು ಕೇಳುತ್ತಿದೆ. ಮನ್ನಿಸಬೇಕೆ? ಖಂಡಿತ ಕೂಡದು. ಇವನನ್ನು ಮನೆಗಟ್ಟುವವರೆಗೆ ನಾವು ಸುಮ್ಮನೆ ಕೂಡುವುದು ಬೇಡ. ಇವನ ಮೇಲಿನ ಕ್ರಮವೇ ಇಂಥವರಿಗೊಂದು ಪಾಠವಾಗಲಿ. ನಾವು ಕನ್ನಡಿಗರು ಯಾವಾಗಲೂ ವಿಶಾಲ ಹೃದಯಿಗಳಾಗುವುದು ಬೇಡ ಅಂತ ನನ್ನಿಸಿಕೆ.
ಪಾಠ ಕಲಿಯದ ಹೊರನಾಡಿಗರು...
ಕನ್ನಡ ದ್ವೇಷಿ ಆಂಗ್ಲ ಪತ್ರಿಕೆಗಳು...
ಇವರೆಲ್ಲ ಸಾಲದು ಅಂತ ಮತ್ತೊಂದೆಡೆ ಇಂಗ್ಲಿಷ್ ಪತ್ರಿಕೆಗಳ ಕನ್ನಡ ವಿರೋಧಿ ನೀತಿ. ಯಾವಾಗಲೋ ಒಂದ್ ಸರಿ ಬಂದ್ರೆ ಎಲ್ಲೋ ಅಪ್ಪಿ ತಪ್ಪಿ ಹೀಗ್ ಬರ್ದಿರ್ಬೇಕು ಅನ್ಕೊಬಹುದಿತ್ತೇನೋ. ಆದ್ರೆ ಒಬ್ಬರಾದ ಮೇಲೆ ಒಬ್ರು ಕನ್ನಡಿಗರ ಹಕ್ಕು ಪ್ರತಿಪಾದನೆಯನ್ನು ಮಹಾಪರಾಧವೇನೋ ಎಂಬಂತೆ ಚಿತ್ರಿಸಲು ಹೊರಟಿವೆ. ಬೆಂಗಳೂರು ಮಹಾನಾಗರ ಪಾಲಿಕೆಯ ಚುನಾವಣೆಯ ಸಮಯದಲ್ಲಿ, ಮತ ಯಂತ್ರದಲ್ಲಿ 'ಕನ್ನಡ"ಬಳಸಿದ್ದನ್ನು ಆಕ್ಷೇಪಿಸಿದ ಲೋಕಸತ್ತಾ ಪಕ್ಷದ ಕೆಲವರ ಮಾತುಗಳನ್ನು ಪ್ರಕಟಿಸಿ ಅದಕ್ಕೊಂದು ಇಂತಹ ಕಿತ್ತೋಗಿರೋ ಶೀರ್ಷಿಕೆ ಕೊಟ್ಟಿದ್ದು ಯಾಕೆ? ಯಾರ ಮಧ್ಯೆ ಬೆಂಕಿ ಹಚ್ಚೋಕೆ ಹೊರಟಿದ್ದಾರೆ ಇವ್ರು? ಒಂದು ಊರಿಗೆ ಬಂದ ಮೇಲೆ ಅಲ್ಲಿನ ಜನರ ರೀತಿ, ರಿವಾಜುಗಳನ್ನ ಕಲಿತು ಅವರೊಂದಿಗೆ ಬೆರೆತು ಬದುಕಬೇಕಾಗಿರುವುದು ಹೊರಗಿನಿಂದ ಬಂದವರ ಕರ್ತವ್ಯ. ಅವರಿಗೋಸ್ಕರ ಈ ನೆಲೆದಲ್ಲೇ ಹುಟ್ಟಿ ಬೆಳೆದು ಬಂದವರು ನಮ್ಮ ಭಾಷೆನ ಬಿಟ್ಟು ಇಂಗ್ಲಿಷ್ ಕಲಿಬೇಕಾ? ನಮ್ ಕರ್ಮಕ್ಕೆ ಕೆಲ ಕನ್ನಡಿಗರು ಮನೆಗೆ ತರಿಸೋದು ಆಂಗ್ಲ ಪತ್ರಿಕೆಯನ್ನೇ!
ಇನ್ನೊಂದು ಕಡೆ ಜಾಹೀರಾತು ಫಲಕಗಳಲ್ಲಿ ದುರ್ಬಿನು ಹಾಕಿದರೂ ಕಾಣದ ಕನ್ನಡ. ಹಾಗೆ ಮಾಲ್, ರೆಸ್ಟೋರೆಂಟ್ಗಳಲ್ಲಿ ಕನ್ನಡ ವಾತಾವರಣಕ್ಕಾಗಿ ಬೇಡಿಕೊಳ್ಳುವ ದೈನೇಸಿ ಸ್ಥಿತಿಗೆ ಬಂದು ನಿಂತಿದ್ದೇವೆ. ನಮ್ಮ ನೆಲದಲ್ಲೇ ಪರದೇಶಿಗಳಂತೆ! ಒಂದೆಡೆ ಕಂಪೆನಿಗಳಿಗಾಗಿ ಭೂಮಿ ಕೊಟ್ಟ ಇಲ್ಲಿನ ಜನರ ಮಕ್ಕಳು ಅದೇ ಭೂಮಿಯಿಂದೇಳುವ ಕಂಪೆನಿ/ಮಾಲ್/ರೆಸ್ಟೋರೆಂಟ್ಗಳಲ್ಲಿ 'ಸಿ", 'ಡಿ" ದರ್ಜೆಯ ನೌಕರರಾದರೆ, ಅವರ ಮೇಲೆ ಬಂದು ಕೂರುವ ಅನ್ಯಭಾಷಿಕರು ಅವರ ತಲೆಯ ಮೇಲೆ ಕೂರುತ್ತಾರೆ. ಕಡೆಗೆ ಅಲ್ಲಿ ಅವರ ದರ್ಬಾರು ಶುರುವಾಗುತ್ತದೆ. ಹಾಗಂತ ನಾನು ಎಲ್ಲ ಅನ್ಯಭಾಷಿಕರನ್ನುದ್ದೇಶಿಸಿ ಹೀಗೆ ಬರೆಯುತ್ತಿಲ್ಲ. ಅಲ್ಲಿಂದ ಇಲ್ಲಿ ಬಂದು ನಮ್ಮ ನೆಲ, ಭಾಷೆಯ ಬಗ್ಗೆ ತುಚ್ಚವಾಗಿ ಮಾತನಾಡುವ ಕಿಡಿಗೇಡಿಗಳಿಗೆ ಮಾತ್ರ.
ಇನ್ಮುಂದೆ ಇಂತಹ ಕಿಡಿಗೇಡಿ ಕೃತ್ಯವನ್ನು 'ಕನ್ನಡ ದ್ವೇಷಿಗಳ ವಿರುದ್ಧ ಕರ್ನಾಟಕ" ಗುಂಪಿನಲ್ಲಿ ಹಂಚಿಕೊಳ್ಳೋಣ. ಮತ್ತು ಅಂತವರಿಗೆ ಶಾಂತಿ ಮಾರ್ಗದಲ್ಲಿಯೇ ಬುದ್ದಿ ಕಲಿಸೋಣ. ಬನ್ನಿ, ಇಂತಹ ಅನಿಷ್ಟಗಳ ವಿರುದ್ಧ ಒಂದಾಗೋಣ. ಕನ್ನಡಿಗರು ಬಿಟ್ಟಿ ಬಿದ್ದಿಲ್ಲ ಅನ್ನುವುದು ನೆನಪಿಸುತ್ತಲೇ, ನಮ್ಮ ನಿರ್ಲಿಪ್ತತೆ ನಮ್ಮ ದೌರ್ಬಲ್ಯವಲ್ಲ ಅಂತ ಇಂತ ಕನ್ನಡ ದ್ವೇಷಿಗಳಿಗೆ ತೋರಿಸೋಣ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications