ಕನ್ನಡಿಗರು ಬಿಟ್ಟಿ ಬಿದ್ದಿಲ್ಲ ಅನ್ನುವುದು ನೆನಪಿರಲಿ!

ಹೊರನಾಡಿನಿಂದ ಬಂದು ಈ ನೆಲದಲ್ಲಿ ಬದುಕು ಕಟ್ಟಿಕೊಂಡಿರುವ ಕೆಲವರಲ್ಲಿ ಈ ನೆಲದ ಭಾಷೆ, ಸಂಸ್ಕೃತಿ, ಆಚಾರಗಳಿಗೆ ಬೆಲೆ ಕೊಡಬೇಕು ಅನ್ನುವ ಕಾಮನ್ ಸೆನ್ಸ್ ಇಲ್ಲ ಅನ್ನುವುದಕ್ಕಿಂತ, ಯಾವುದಕ್ಕೂ ಪ್ರತಿಕ್ರಿಯಿಸದ ಕನ್ನಡಿಗರ ಧೋರಣೆಯನ್ನೆ ಇಂತಹ ಜನಗಳು ನಮ್ಮ ದೌರ್ಬಲ್ಯ ಅಂದುಕೊಂಡಿದ್ದಾರೆ. ಇಲ್ಲದಿದ್ದರೆ ಫ಼ೇಸ್ಬುಕ್ಕಿನಲ್ಲಿ ರಾಬಿನ್ ಚುಗ್ ಅನ್ನುವ ಪರದೇಶಿ ಕನ್ನಡಿಗರಿಗೆ ಫ಼ಕ್ ಆಫ಼್ ಅನ್ನುತ್ತಿರಲಿಲ್ಲ ಅಲ್ಲವಾ? ಆತ ಕೆಲಸ ಮಾಡುವ ಕಂಪನಿಗೆ ಮಿಂಚೆ ಬರೆದು (ಭಾಷೆ ವಿಷಯ ಮುಟ್ಟಿಸುವಂತಿರಲಿ, ಬೈಗುಳ ದಯವಿಟ್ಟು ಬೇಡ) ಈ ಮಣ್ಣಿನ ಭಾಷೆಯ ಬಗ್ಗೆ ಗೌರವ ಇಲ್ಲದ ಇಂಥವರನ್ನ ನಿಮ್ಮ ಕಂಪೆನಿಯಲ್ಲಿ ಇಟ್ಟುಕೊಳ್ಳುವಿರಾ ಅಂತಲೇ ಕೇಳಬೇಕು. ಇಂತಹ ಹುಡುಗನನ್ನು ವಾಪಸ್ ಅವನ ಮನೆಗೆ ಕಳಿಸೋದು ನಮ್ಮ ಕರ್ತವ್ಯವಲ್ಲವೇ ಗೆಳೆಯರೇ?
ಫ಼ೇಸ್ಬುಕ್ಕಿನಲ್ಲಿ, ಮಿಂಚೆಗಳ ಮೂಲಕ ಮತ್ತೆ ಕರೆ ಮಾಡಿ ಗದರಿಸಿದ ಮೇಲೆ, ನಂದು ತಪ್ಪಾಯ್ತು ಕ್ಷಮಿಸಿಬಿಡಿ ಅನ್ನುತಿದ್ದಾನೆ ಈತ. [ಚುಗ್ ಬರೆದಿರುವ ಕೈಲಿಖಿತ ಕ್ಷಮಾಪಣಾ ಪತ್ರದ ಪ್ರತಿ ಇಲ್ಲಿದೆ, ಓದಿರಿ] ನಾವುಗಳು ಕೇಳದೆ ಸುಮ್ಮನಿದ್ದಿದ್ದರೆ ಆತನಿಗೆ ಜ್ಞಾನೋದಯವಾಗುತ್ತಿರಲಿಲ್ಲ. ಈಗ ಎಲ್ಲರೂ ದಬಾಯಿಸಿದ ಮೇಲೆ ಭಯಕ್ಕೆ ಕ್ಷಮೆ ಕೋರುತಿದ್ದಾನೆ ಹೊರತು ತಪ್ಪಿನ ಅರಿವಾಗಿಯಲ್ಲ. ಕಂಪನಿ ಕೂಡ ಇವ ಮಾಡಿದ ತಪ್ಪನ್ನು ಮನ್ನಿಸಿ ಎಂದು ಕೇಳುತ್ತಿದೆ. ಮನ್ನಿಸಬೇಕೆ? ಖಂಡಿತ ಕೂಡದು. ಇವನನ್ನು ಮನೆಗಟ್ಟುವವರೆಗೆ ನಾವು ಸುಮ್ಮನೆ ಕೂಡುವುದು ಬೇಡ. ಇವನ ಮೇಲಿನ ಕ್ರಮವೇ ಇಂಥವರಿಗೊಂದು ಪಾಠವಾಗಲಿ. ನಾವು ಕನ್ನಡಿಗರು ಯಾವಾಗಲೂ ವಿಶಾಲ ಹೃದಯಿಗಳಾಗುವುದು ಬೇಡ ಅಂತ ನನ್ನಿಸಿಕೆ.
ಪಾಠ ಕಲಿಯದ ಹೊರನಾಡಿಗರು...
ಕನ್ನಡ ದ್ವೇಷಿ ಆಂಗ್ಲ ಪತ್ರಿಕೆಗಳು...
ಇವರೆಲ್ಲ ಸಾಲದು ಅಂತ ಮತ್ತೊಂದೆಡೆ ಇಂಗ್ಲಿಷ್ ಪತ್ರಿಕೆಗಳ ಕನ್ನಡ ವಿರೋಧಿ ನೀತಿ. ಯಾವಾಗಲೋ ಒಂದ್ ಸರಿ ಬಂದ್ರೆ ಎಲ್ಲೋ ಅಪ್ಪಿ ತಪ್ಪಿ ಹೀಗ್ ಬರ್ದಿರ್ಬೇಕು ಅನ್ಕೊಬಹುದಿತ್ತೇನೋ. ಆದ್ರೆ ಒಬ್ಬರಾದ ಮೇಲೆ ಒಬ್ರು ಕನ್ನಡಿಗರ ಹಕ್ಕು ಪ್ರತಿಪಾದನೆಯನ್ನು ಮಹಾಪರಾಧವೇನೋ ಎಂಬಂತೆ ಚಿತ್ರಿಸಲು ಹೊರಟಿವೆ. ಬೆಂಗಳೂರು ಮಹಾನಾಗರ ಪಾಲಿಕೆಯ ಚುನಾವಣೆಯ ಸಮಯದಲ್ಲಿ, ಮತ ಯಂತ್ರದಲ್ಲಿ 'ಕನ್ನಡ"ಬಳಸಿದ್ದನ್ನು ಆಕ್ಷೇಪಿಸಿದ ಲೋಕಸತ್ತಾ ಪಕ್ಷದ ಕೆಲವರ ಮಾತುಗಳನ್ನು ಪ್ರಕಟಿಸಿ ಅದಕ್ಕೊಂದು ಇಂತಹ ಕಿತ್ತೋಗಿರೋ ಶೀರ್ಷಿಕೆ ಕೊಟ್ಟಿದ್ದು ಯಾಕೆ? ಯಾರ ಮಧ್ಯೆ ಬೆಂಕಿ ಹಚ್ಚೋಕೆ ಹೊರಟಿದ್ದಾರೆ ಇವ್ರು? ಒಂದು ಊರಿಗೆ ಬಂದ ಮೇಲೆ ಅಲ್ಲಿನ ಜನರ ರೀತಿ, ರಿವಾಜುಗಳನ್ನ ಕಲಿತು ಅವರೊಂದಿಗೆ ಬೆರೆತು ಬದುಕಬೇಕಾಗಿರುವುದು ಹೊರಗಿನಿಂದ ಬಂದವರ ಕರ್ತವ್ಯ. ಅವರಿಗೋಸ್ಕರ ಈ ನೆಲೆದಲ್ಲೇ ಹುಟ್ಟಿ ಬೆಳೆದು ಬಂದವರು ನಮ್ಮ ಭಾಷೆನ ಬಿಟ್ಟು ಇಂಗ್ಲಿಷ್ ಕಲಿಬೇಕಾ? ನಮ್ ಕರ್ಮಕ್ಕೆ ಕೆಲ ಕನ್ನಡಿಗರು ಮನೆಗೆ ತರಿಸೋದು ಆಂಗ್ಲ ಪತ್ರಿಕೆಯನ್ನೇ!
ಇನ್ನೊಂದು ಕಡೆ ಜಾಹೀರಾತು ಫಲಕಗಳಲ್ಲಿ ದುರ್ಬಿನು ಹಾಕಿದರೂ ಕಾಣದ ಕನ್ನಡ. ಹಾಗೆ ಮಾಲ್, ರೆಸ್ಟೋರೆಂಟ್ಗಳಲ್ಲಿ ಕನ್ನಡ ವಾತಾವರಣಕ್ಕಾಗಿ ಬೇಡಿಕೊಳ್ಳುವ ದೈನೇಸಿ ಸ್ಥಿತಿಗೆ ಬಂದು ನಿಂತಿದ್ದೇವೆ. ನಮ್ಮ ನೆಲದಲ್ಲೇ ಪರದೇಶಿಗಳಂತೆ! ಒಂದೆಡೆ ಕಂಪೆನಿಗಳಿಗಾಗಿ ಭೂಮಿ ಕೊಟ್ಟ ಇಲ್ಲಿನ ಜನರ ಮಕ್ಕಳು ಅದೇ ಭೂಮಿಯಿಂದೇಳುವ ಕಂಪೆನಿ/ಮಾಲ್/ರೆಸ್ಟೋರೆಂಟ್ಗಳಲ್ಲಿ 'ಸಿ", 'ಡಿ" ದರ್ಜೆಯ ನೌಕರರಾದರೆ, ಅವರ ಮೇಲೆ ಬಂದು ಕೂರುವ ಅನ್ಯಭಾಷಿಕರು ಅವರ ತಲೆಯ ಮೇಲೆ ಕೂರುತ್ತಾರೆ. ಕಡೆಗೆ ಅಲ್ಲಿ ಅವರ ದರ್ಬಾರು ಶುರುವಾಗುತ್ತದೆ. ಹಾಗಂತ ನಾನು ಎಲ್ಲ ಅನ್ಯಭಾಷಿಕರನ್ನುದ್ದೇಶಿಸಿ ಹೀಗೆ ಬರೆಯುತ್ತಿಲ್ಲ. ಅಲ್ಲಿಂದ ಇಲ್ಲಿ ಬಂದು ನಮ್ಮ ನೆಲ, ಭಾಷೆಯ ಬಗ್ಗೆ ತುಚ್ಚವಾಗಿ ಮಾತನಾಡುವ ಕಿಡಿಗೇಡಿಗಳಿಗೆ ಮಾತ್ರ.
ಇನ್ಮುಂದೆ ಇಂತಹ ಕಿಡಿಗೇಡಿ ಕೃತ್ಯವನ್ನು 'ಕನ್ನಡ ದ್ವೇಷಿಗಳ ವಿರುದ್ಧ ಕರ್ನಾಟಕ" ಗುಂಪಿನಲ್ಲಿ ಹಂಚಿಕೊಳ್ಳೋಣ. ಮತ್ತು ಅಂತವರಿಗೆ ಶಾಂತಿ ಮಾರ್ಗದಲ್ಲಿಯೇ ಬುದ್ದಿ ಕಲಿಸೋಣ. ಬನ್ನಿ, ಇಂತಹ ಅನಿಷ್ಟಗಳ ವಿರುದ್ಧ ಒಂದಾಗೋಣ. ಕನ್ನಡಿಗರು ಬಿಟ್ಟಿ ಬಿದ್ದಿಲ್ಲ ಅನ್ನುವುದು ನೆನಪಿಸುತ್ತಲೇ, ನಮ್ಮ ನಿರ್ಲಿಪ್ತತೆ ನಮ್ಮ ದೌರ್ಬಲ್ಯವಲ್ಲ ಅಂತ ಇಂತ ಕನ್ನಡ ದ್ವೇಷಿಗಳಿಗೆ ತೋರಿಸೋಣ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications