ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ

ಒಂದು ಕಡೆ ದಲಿತ ಕಾಲೋನಿಗಳಲ್ಲಿ ಓಡಾಡಿ ಹಿಂದೂ ಧರ್ಮವನ್ನು ಉದ್ಧರಿಸುವ ಮತ್ತು ಮತಾಂತರವನ್ನು ವಿರೋಧಿಸುವ ಮಾತನಾಡುವ ಶ್ರೀಗಳಿಗೆ ಮಡೆಸ್ನಾನದಿಂದ ಯಾವ ಧರ್ಮಕ್ಕೆ, ಹೇಗೆ ನಷ್ಟವಾಗಬಹುದು ಮತ್ತು ಹಿಂದೂ ಅನ್ನುವ ಧರ್ಮದ ಬಗ್ಗೆ ಮಾಧ್ಯಮಗಳ ಮೂಲಕ ಜಗತ್ತಿಗೆ ಯಾವ ಸಂದೇಶ ತಲುಪಬಹುದು ಅನ್ನುವುದರ ಅರಿವಿರಲಿಕ್ಕಿಲ್ಲವಾ? ಇದ್ದರೆ ಈ ರೀತಿ ಮೈಗೆ ಎಣ್ಣೆ ಹಚ್ಚಿಕೊಂಡವರಂತೆ ಹೇಳಿಕೆ ನೀಡುತಿದ್ದರಾ?
ಮಡೆ ಸ್ನಾನ ಅನ್ನುವ So Called ಧಾರ್ಮಿಕ ನಂಬಿಕೆ(?) ನಡೆದುಕೊಂಡು ಬಂದ ಹಾದಿಗೆ 400 ವರ್ಷಗಳ ಇತಿಹಾಸವಿದೆ. ಆದರೆ ತೀರಾ ಇದು ಮಾಧ್ಯಮಗಳಲ್ಲಿ ದೊಡ್ದ ಮಟ್ಟದ ಸುದ್ದಿ ಮಾಡಲಿಕ್ಕಾರಂಭಿಸಿದ್ದು ಬಹುಷಃ ಕಳೆದ ವರ್ಷದಿಂದಲೇ. ಸದ್ಯ, ಈಗಲಾದರೂ ನಮ್ಮ ದನಿ ಕೇಳಿಬರುತ್ತಿದೆ ಅನ್ನುವ ಸಂತೋಷದ ಜೊತೆ ಜೊತೆಗೆ ಇಂತಹ ಅನಿಷ್ಟ ಪದ್ಧತಿಗಳಿಗೆ ಬ್ರೇಕ್ ಹಾಕಬೇಕಾದ ಸರ್ಕಾರ ಮತ್ತು ಸರ್ಕಾರದ ಸಚಿವರೇ "ನೋ ಕಮೆಂಟ್ಸ್" ಅನ್ನುವುದು ನೋಡಿ ಬೇಸರವೂ ಆಗುತ್ತದೆ.
ಈ ಮಡೆ ಸ್ನಾನ ಅಂದರೆ ಬ್ರಾಹ್ಮಣರ ತಿಂದ ಎಂಜಲೆಲೆಗಳ ಮೇಲೆ ಉರುಳುವುದು. ಎಂಜಲೆಲೆಗೆ ಅದ್ಭುತ ಶಕ್ತಿಯಿದೆ ಅನ್ನುವುದಾದರೆ ಅದು ಯಾರು ತಿಂದು ಬಿಟ್ಟ ಎಲೆಯಾದರೂ ಆದೀತು ಅಲ್ಲವೇ? ಬ್ರಾಹ್ಮಣರೇ ಯಾಕೆ ಬೇಕು ಅನ್ನುವ ವಾದ ಮಾಡುವುದು ಅದೇ ಎಂಜಲೆಲೆಯ ಮೇಲೆ ಹೊರಳಾಡಿದಂತೆಯೇ ಸರಿ. ಹಿಂದೆ ನಮ್ಮಲ್ಲಿದ್ದಂತಹ ಸತಿ-ಪದ್ದತಿ, ವಿಧವಾ ಕೇಶ ಮುಂಡನ, ಬೆತ್ತಲೆ ಸೇವೆಯಂತೆ ಈ ಮಡೆ ಸ್ನಾನವು ಒಂದು ವಿಕೃತಿ ಅಲ್ಲದೆ ಮತ್ತಿನ್ನೇನು? [ಬಿದ್ದಿರುವುದು ಬೆಂಕಿಯಲ್ಲ ಎಂಜಲೆಲೆ]
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications