ಇಂಗ್ಲಿಷ್ ಶಾಲೆಗಳ ಬಗ್ಗೆ ಕನ್ನಡಿಗರು ಏನನ್ನುತ್ತಾರೆ?

ರಾಜ್ಯ ಸರ್ಕಾರವು ಕಲಿಕೆಯ ವಿಷಯದಲ್ಲಿ ಮೊದಲಿನಿಂದಲೂ ಕನ್ನಡ ವಿರೋಧಿಯನ್ನು ಧೋರಣೆಯನ್ನು ತೋರಿಸುತ್ತಿರುವ ಅನುಮಾನವಿದೆ. ಎರಡು ವರ್ಷಗಳ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲೆಯನ್ನು ಭಾರತೀಯ ವಿದ್ಯಾಭವನ ಎನ್ನುವ ಖಾಸಗಿ ಸಂಸ್ಥೆಗೆ ಕೇಂದ್ರೀಯ ಪಠ್ಯಕ್ರಮದ ಆಂಗ್ಲ ಮಾಧ್ಯಮ ಶಾಲೆಯನ್ನು ನಡೆಸಲು ಒಪ್ಪಿಸಿಬಿಟ್ಟಿತು. ಆ ಮೂಲಕ ರಾಜ್ಯ ಸರ್ಕಾರದ ಪಠ್ಯಕ್ರಮದಲ್ಲಿ ತನಗೆ ನಂಬಿಕೆ ಇಲ್ಲವೆಂಬುದನ್ನು ತೋರಿಸಿಕೊಂಡಿತ್ತು. ಹೀಗೆ ನಡೆದುಕೊಳ್ಳಲು "ಬಡಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು" ಎನ್ನುವ ಕಾರಣವನ್ನು ನೀಡಿತ್ತು. ಇದಾದ ಕೆಲದಿನಗಳಲ್ಲೇ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಎಂದು ಸುಮಾರು ಮೂರು ಸಾವಿರ ಕನ್ನಡ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ಮುಂದಾಯಿತು. ಈ ಬಗ್ಗೆ ಜನರಿಂದ ವಿರೋಧ ಬಂದಾಗ "ಮುಚ್ಚುವಿಕೆ ಅಲ್ಲಾ... ಹತ್ತಿರದ ಶಾಲೆಯೊಂದಿಗೆ ವಿಲೀನ" ಎಂದಿತು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಯಾಕೆ ಕಡಿಮೆ? ಎನ್ನುವುದಕ್ಕೆ "ಹಳ್ಳಿಗಳಿಂದ ನಗರಗಳಿಗೆ ಜನರು ವಲಸೆ ಹೋಗುತ್ತಿದ್ದಾರೆ" ಎಂದಿತು. "ಹಾಗಾದರೆ ಹಳ್ಳಿಗಾಡಿನ ಖಾಸಗಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೇಗೆ ಹೆಚ್ಚುತ್ತಿದೆ?" ಎನ್ನುವ ಪ್ರಶ್ನೆಗೆ ಉತ್ತರವಿಲ್ಲ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಮಕ್ಕಳ ಸಂಖ್ಯೆ ಐದಕ್ಕಿಂತಾ ಕಡಿಮೆಯಿದೆ ಎನ್ನುವ ಕಾರಣ ನೀಡುತ್ತಾ "ಇದು ಕೇಂದ್ರ ಸರ್ಕಾರದ ಆದೇಶ, ನಮ್ಮ ತಪ್ಪೇನೂ ಇಲ್ಲಾ" ಎಂದು ತಿಪ್ಪೆ ಸಾರಿಸಲಾಯಿತು. ಇಷ್ಟೇ ಅಲ್ಲದೆ ಕೇಂದ್ರೀಯ ಪಠ್ಯಕ್ರಮದ ಶಾಲೆಗಳನ್ನು ಆರಂಭಿಸಲು ಇರುವ ಕಟ್ಟುಪಾಡುಗಳನ್ನೆಲ್ಲಾ ಗಾಳಿಗೆ ತೂರಿ ನಿರಾಕ್ಷೇಪಣಾ ಪತ್ರಗಳನ್ನು ನೀಡುವುದನ್ನು ಮುಂದುವರೆಸಲಾಯಿತು, ಇದು ಬೀದಿಗೊಂದು ಕೇಂದ್ರ ಪಠ್ಯಕ್ರಮದ ಶಾಲೆ ಆರಂಭವಾಗಲು ಕಾರಣವಾಯಿತು. ಇವಿಷ್ಟೂ ಒಂದು ಹಂತದ ಕಥೆಯಾದರೆ ಈಗಿನದ್ದು ಮತ್ತೊಂದು.
ಈಗ ರಾಜ್ಯ ಸರ್ಕಾರದ 341 ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಶುರುಮಾಡಲು ಮುಂದಾಗಿದೆ. "ಇದಕ್ಕೆ ಜನರಿಂದ ಬೇಡಿಕೆಯಿದೆ, ಬಡಮಕ್ಕಳು ಖಾಸಗಿ ಶಾಲೆಗಳನ್ನು ಸೇರಲಾಗದ ಕಾರಣದಿಂದ ಆಂಗ್ಲ ಮಾಧ್ಯಮದಲ್ಲಿ ಕಲಿಯುವುದರಿಂದ ವಂಚಿತರಾಗಬಾರದು, ಇದು ರಾಜ್ಯ ಸರ್ಕಾರದ ಭಾಷಾ ನೀತಿಯನ್ನು ಉಲ್ಲಂಘಿಸುತ್ತಿಲ್ಲ" ಇತ್ಯಾದಿ ಕಾರಣಗಳನ್ನು ಕೊಡಲಾಗುತ್ತಿದೆ. ಕರ್ನಾಟಕದ ಭಾಷಾ ನೀತಿ ಕನ್ನಡ ಮಾಧ್ಯಮದಲ್ಲಿನ ಕಲಿಕೆಯನ್ನು 5ನೇ ತರಗತಿಯವರೆಗೆ ಕಡ್ಡಾಯ ಮಾಡಿರುವುದನ್ನು "ಕನಿಷ್ಠ 5ನೇ ತರಗತಿಯವರೆಗೆ" ಎಂದು ಪರಿಗಣಿಸದೇ "ಗರಿಷ್ಠ 5ನೇ ತರಗತಿಯವರೆಗೆ" ಎಂದು ಸರ್ಕಾರ ಪರಿಗಣಿಸಿದಂತಿದೆ.
ಇದೆಲ್ಲದರ ಅರ್ಥವು ನೇರವೂ ಸರಳವೂ ಆಗಿದೆ. ಕನ್ನಡನಾಡಿನ ಭವಿಷ್ಯ ರೂಪಿಸಲು ಅಗತ್ಯವಾಗಿರುವ 'ಕನ್ನಡಿಗರ ಕಲಿಕೆ'ಗೆ 'ಕನ್ನಡ ನುಡಿ' ಯೋಗ್ಯವಾಗಿದೆ ಎನ್ನುವ ನಂಬಿಕೆಯೇ ಸರ್ಕಾರಕ್ಕಿಲ್ಲ. ಈಗಿರುವ ಕಲಿಕೆ ಏರ್ಪಾಟಿನಲ್ಲಿರುವ ಕುಂದುಕೊರತೆಗಳನ್ನು ನೀಗಿಸಿಕೊಂಡು "ಅತ್ಯುತ್ತಮವಾಗಿ ನಿರ್ವಹಿಸಲಾಗುತ್ತಿರುವ, ಅತ್ಯುತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ"ಯನ್ನು ಕಟ್ಟಬೇಕೆಂಬ ಸಣ್ಣ ಹಂಬಲವೂ ಸರ್ಕಾರಕ್ಕಿರುವಂತೆ ತೋರುತ್ತಿಲ್ಲ. ಬದಲಾಗಿ ಕನ್ನಡಕ್ಕೆ ಕಲಿಕಾ ಮಾಧ್ಯಮವಾಗುವ ಯೋಗ್ಯತೆಯಿಲ್ಲಾ ಎಂದೂ, ಕನ್ನಡಿಗರಿಗೆ ಆಂಗ್ಲ ಮಾಧ್ಯಮದಲ್ಲಿನ ಕಲಿಕೆಯೇ ಒಳಿತೆಂದೂ ತಿಳಿದಿರುವಂತಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications