ಇಂಗ್ಲಿಷ್ ಮೇಲೆ ದಿಗ್ವಿಜಯ ಸಾಧಿಸಿದ ಮಕ್ಕಳಿಬ್ಬರ ಕಥೆ
ಅಪ್ಪಟ ಕನ್ನಡ ಪ್ರೇಮ ಇರುವ ಪಾಲಕರು ಕೂಡ ತಮ್ಮ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮ ಶಾಲೆಗೆ ಸೇರಿಸಿರುತ್ತಾರೆ. ಉತ್ತಮ ಇಂಗ್ಲಿಷ್ ಜ್ಞಾನ ದೊರೆಯಬೇಕಿದ್ದರೆ ಇಂಗ್ಲಿಷ್ ಮೀಡಿಯಂನಲ್ಲೇ ಮಕ್ಕಳನ್ನು ಓದಿಸಬೇಕು, ಇಲ್ಲದಿದ್ದರೆ ಮುಂದೆ ಕೆಲಸಕ್ಕೆ ಪ್ರಯತ್ನಿಸಿದಾಗ ತೊಂದರೆ ಅನುಭವಿಸಬೇಕಾಗುತ್ತದೆ ಎಂದೇ ಶೇ.80ರಷ್ಟು ಪಾಲಕರು ಅಂದುಕೊಂಡಿರುತ್ತಾರೆ.
ಮಕ್ಕಳಿಗೆ ಮಾತೃಭಾಷೆಯಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ದೊರೆಯಬೇಕು ಎಂಬ ಮಾತಿಗೆ ಸಮಾಜದಲ್ಲಿ ಹೆಚ್ಚು ಕಿಮ್ಮತ್ತಿಲ್ಲ. ಶಿಕ್ಷಣತಜ್ಞರೇ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೂ ಇಂಗ್ಲಿಷ್ ಶಿಕ್ಷಣ ದೊರೆಯಬೇಕು ಎಂದು ಹೇಳುತ್ತಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಆದರೆ, ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿವರೆಗೆ ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಓದಿಸಲು ಒಪ್ಪುತ್ತೀರಾ? ಇದು ಪ್ರಾಕ್ಟಿಕಲ್ ಅಲ್ಲ ಅಂತ ಅನ್ನುವವರೇ ಜಾಸ್ತಿ.

ಅಂಥದರಲ್ಲಿ, ಎಸ್ಸೆಸ್ಸೆಲ್ಸಿ ಮಾತ್ರವಲ್ಲ ಪಿಯುಸಿವರೆಗೆ ಕನ್ನಡ ಮಾಧ್ಯಮದಲ್ಲೇ ಓದಿ, ಪದವಿ, ಸ್ನಾತಕೋತ್ತರ ಪದವಿಯಲ್ಲೂ ಅತ್ಯುತ್ತಮ ಅಂಕಗಳನ್ನು ಪಡೆದು ಇಂಗ್ಲಿಷ್ ಮೇಲೆ ದಿಗ್ವಿಜಯ ಸಾಧಿಸಿದ ಅಣ್ಣ-ತಂಗಿಯರಿಬ್ಬರ ಯಶೋಗಾಥೆ ಇಲ್ಲಿದೆ. ತಮ್ಮಿಬ್ಬರು ಮಕ್ಕಳು ಮಾಡಿರುವ ಸಾಧನೆಯನ್ನು ಜಗದೀಶ್ ಕೊಪ್ಪ ಅವರು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.
ಮಕ್ಕಳಿಬ್ಬರ ಈ ಸಾಧನೆಯ ಹಿಂದೆ ನಮ್ಮಿಬ್ಬರ ಕೈವಾಡವೇನೂ ಇಲ್ಲ, ಎಲ್ಲ ನಿರ್ಧಾರಗಳನ್ನು ಮಕ್ಕಳಿಗೇ ಬಿಟ್ಟಿದ್ದೆವು ಎಂದು ಜಗದೀಶ್ ಕೊಪ್ಪ ಅವರು ಹೆಮ್ಮೆ ಮತ್ತು ನಮ್ರತೆಯಿಂದ ಹೇಳಿದ್ದಾರೆ. ತಮ್ಮ ಆಸೆ, ಆಕಾಂಕ್ಷೆಗಳನ್ನು ಮಕ್ಕಳ ಮೇಲೆ ಹೇರುವ ತಂದೆ-ತಾಯಿಗಳೇ ಎಲ್ಲೆಡೆ ಇರುವಾಗ ಇವರ ಬದುಕು, ತೆಗೆದುಕೊಂಡ ನಿರ್ಣಯಗಳು ನಿಜಕ್ಕೂ ವಿಸ್ಮಯ ಹುಟ್ಟಿಸುತ್ತವೆ. ಈಗ ಹೇಳಿ ನಿಮ್ಮ ಮಕ್ಕಳನ್ನು ಯಾವ ಮಾಧ್ಯಮದಲ್ಲಿ ಓದಿಸುತ್ತೀರಿ?
***
ಕನ್ನಡ ಮಾಧ್ಯಮದಲ್ಲಿ ಮಕ್ಕಳು ಓದಿದರೆ, ಅವರ ಭವಿಷ್ಯ ಹಾಳಾಗಿ ಹೋಗುತ್ತೆ ಎಂದು ನಂಬಿದವರಿಗೆ ಒಂದು ಶಾಕಿಂಗ್ ನ್ಯೂಸ್. ಪಿ.ಯು.ಸಿ.ಯವರೆಗೆ ಅಪ್ಪಟ ಕನ್ನಡ ಮಾಧ್ಯದಲ್ಲಿ ಓದಿದ ನನ್ನ ಮಗಳು ಅಪೂರ್ವ, ಇಂಗ್ಲೀಷ್ ಸಾಹಿತ್ಯದದಲ್ಲಿ ಎಂ.ಎ. ಮಾಡಬೇಕು ಎಂಬ ಉದ್ದೇಶದಿಂದ ಬಿ.ಎ.. ಪದವಿಗೆ ಇಂಗ್ಲೀಷ್ ಮಾಧ್ಯಮ ಆಯ್ಕೆ ಮಾಡಿಕೊಂಡಿದ್ದಳು. ಈದಿನ ಅವಳ ಅಂತಿಮ ಪದವಿಯ ಫಲಿತಾಂಶ ಹೊರಬಿದ್ದಿತು. ಶೇಕಡ 81ರಷ್ಟು ಅಂಕ ಗಳಿಸಿದ್ದಾಳೆ.
***
ಮಿತ್ರರೇ, ನಿನ್ನೆ ನನ್ನ ಮಗಳ ಫಲಿತಾಂಶ ಮತ್ತು ಆಕೆಯ ಮಾಧ್ಯಮ ಆಯ್ಕೆ ಕುರಿತು ನಾನು ಫೇಸ್ ಬುಕ್ ಗೆ ಹಾಕಿದ ಮಾಹಿತಿಗೆ ಬಂದ ಪ್ರತಿಕ್ರಿಯೆ ನೋಡಿ ನನಗೆ ಶಾಕ್ ಆಯಿತು. ಹಾಗೆ ನೋಡಿದರೆ, ಇದರಲ್ಲಿ ನನ್ನದು ಮತ್ತು ಪತ್ನಿಯ ಪಾತ್ರ ಏನೂ ಇರಲಿಲ್ಲ. ನಾವಿಬ್ಬರೂ ಮಕ್ಕಳು ಬೆಳೆಯುತ್ತಿದ್ದಂತೆ ಒಂದು ನಿರ್ಧಾರಕ್ಕೆ ಬಂದಿದ್ದವು. ಯಾವ ಕಾರಣಕ್ಕೂ ನಮ್ಮ ಆಸೆ, ಅಭಿಲಾಸೆಗಳನ್ನು ಮಕ್ಕಳ ಮೇಲೆ ಹೇರಬಾರದು ಎಂಬುದು ನಮ್ಮ ನಿರ್ಧಾರವಾಗಿತ್ತು.
ಎಂದಿಗೂ ಕೂಡ ನಮ್ಮ ಮಕ್ಕಳ ವಿಷಯದಲ್ಲಿ, ಅವರು ಆಯ್ಕೆ ಮಾಡಿಕೊಳ್ಳಬಹುದಾದ ಅಧ್ಯಯನ ಕುರಿತಂತೆ ನಾವು ಹಾಕಿಕೊಂಡಿದ್ದ ಲಕ್ಷಣ ರೇಖೆಯನ್ನು ದಾಟಲಿಲ್ಲ. ಆರು ವರ್ಷದ ಹಿಂದೆ ಮಂಡ್ಯ ನಗರದಲ್ಲಿ ಪಿ.ಯು.ಸಿ. ಮುಗಿಸಿ ಶೇಕಡ 89ರಷ್ಟು ಅಂಕ ಗಳಿಸಿದ್ದ ಮಗ(ಅನನ್ಯ) ಸಿ.ಇ.ಟಿ. ಪರೀಕ್ಷೆ ತೆಗೆದುಕೊಳ್ಳಲಿಲ್ಲ. ನನಗೆ ಇಂಜಿನಿಯರಿಂಗ್, ವೈದ್ಯಕೀಯ ಆಸಕ್ತಿ ಇಲ್ಲ ಎಂದ. ನಾವು ಮರು ಮಾತನಾಡಲಿಲ್ಲ.
ಧಾರವಾಡದಲ್ಲಿ ಜೈವಿಕ ತಂತ್ರ ಜ್ಙಾನ ದಲ್ಲಿ ಪದವಿ (ಶೇಕಡ 91) ನಂತರ ಮೈಸೂರು ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ (ಶೇಕಡ 88) ಸಾಧನೆ ಮಾಡಿದ. ಆತನಿಗೆ ಪಿ.ಹೆಚ್.ಡಿ. ಅಧ್ಯಯನ ಮಾಡುವ ಆಸಕ್ತಿ ಇತ್ತು. ಕಳೆದ 2011ರಲ್ಲಿ ಗೌರಿ-ಗಣೇಶ ಹಬ್ಬಕ್ಕೆ ಬಂದವನು, ನನ್ನಿಂದ ನೂರು ರೂಪಾಯಿ ಪಡೆದು. ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಹಾಕಿದ್ದ. 4700 ಮಂದಿ ಪ್ರಥಮ ದರ್ಜೆಯ ಬಿ.ಎಸ್.ಸಿ. ಪದವೀಧರರ ಪೈಕಿ ಎರಡನೇ ಸ್ಥಾನ ಗಳಿಸಿ. ಹುದ್ದಗೆ ಆಯ್ಕೆಯಾದ. ಕಳೆದ ವರ್ಷ ಜೂನ್ 29 ಕ್ಕೆ ಸ್ನಾತಕೋತ್ತರ ಪದವಿ ಮುಗಿಸಿ ಮೈಸೂರಿನಿಂದ ಧಾರವಾಡಕ್ಕೆ ಬಂದ ಮಗ ಅನನ್ಯ, ಕೇವಲ ನಾಲ್ಕುದಿನ ಮನೆಯಲ್ಲಿದ್ದು, ಜುಲೈ 3ನೇ ತಾರೀಕು ತರಬೇತಿಗಾಗಿ ಅಮ್ಮನ ಜೊತೆ ಮಧ್ಯಪ್ರದೇಶ ಮತ್ತು ಛತ್ತೀಸ್ ಗಡದ ಅರಣ್ಯಕ್ಕೆ ಹೊರಟು ನಿಂತ.
ಆ ವೇಳೆಗೆ ಆತನ ವಯಸ್ಸು 22 ವರ್ಷ, ಮೂರು ತಿಂಗಳು. (ಈ ವಯಸ್ಸಿನಲ್ಲಿ ನಾನು ಪ್ರಥಮ ಬಿ.ಎ. ಓದುತ್ತಿದ್ದೆ. ಏಕೆಂದರೆ, ನನ್ನಪ್ಪ, ನನ್ನನ್ನು ಎಸ್.ಎಸ್.ಎಲ್.ಸಿ. ನಂತರ ಓದಿಸಲಾರದೆ ನಾಲ್ಕು ವರ್ಷಗಳ ಕಾಲ ಹಸು, ಕುರಿ ಮೇಯಿಸಲಿಕ್ಕೆ ಹಾಕಿದ್ದ.)
ನಾವು ಮಕ್ಕಳಿಗೆ ಸದಾ ಹೇಳುತ್ತಿದ್ದ ಮಾತು ಒಂದೇ, ನೀವು ಏನೇ ಆಗಿ ನಮ್ಮ ಅಭ್ಯಂತರವಿಲ್ಲ, ಅದರೆ, ಮನುಷ್ಯರಾಗಿ ಇರಬೇಕು. ಇದೊಂದು ಷರತ್ತನ್ನು ಸದಾ ಮಕ್ಕಳಿಗೆ ವಿಧಿಸುತ್ತಿದ್ದೆವು. ಈ ಕಾರಣಕ್ಕಾಗಿ ಅವರನ್ನು ದೇವರು, ಜಾತಿ, ಧರ್ಮ ಇವುಗಳ ವೃತ್ತದ ಹೊರಗಿಟ್ಟು ಬೆಳಸಿದೆವು. ಕೊನೆಗೂ ನಮ್ಮ ಪ್ರಯೋಗ ವಿಫಲವಾಗಲಿಲ್ಲ. ಅದೋಂದೆ ನಮಗೆ ನೆಮ್ಮದಿಯ ಸಂಗತಿ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications