ನ್ಯಾಯಾಧೀಕರಣದತ್ತ ಹರಿದ ಮಹದಾಯಿ ವಿವಾದ
ಕರ್ನಾಟಕದ ರೈತ ಸಮುದಾಯ ಬಳಸಲು ಬಯಸುತ್ತಿರುವುದು ಇದಿಷ್ಟೂ ನೀರನ್ನಲ್ಲ. ಮಲಪ್ರಭೆಗೆ ಕೊರತೆಯಿರುವ 16 ಟಿಎಂಸಿ ನೀರನ್ನು ಮಾತ್ರ. ಕರ್ನಾಟಕ ಸರ್ಕಾರ ತನ್ನ ಯೋಜನೆಯಲ್ಲಿ ಕೇಳಿದ್ದು ಕುಡಿಯುವ ಸಲುವಾಗಿ 7.56 ಟಿಎಂಸಿ, ಕಾಳಿ ನದಿ ಯೋಜನೆಗಾಗಿ 5.25, 15 ಟಿಎಂಸಿ ಮಹದಾಯಿ ಪಾತ್ರದಲ್ಲಿ ಜಲವಿದ್ಯುತ್ ಯೋಜನೆಗಾಗಿ 15 ಟಿಎಂಸಿ ಸೇರಿದಂತೆ ಒಟ್ಟಾಗಿ 24 ಟಿಎಂಸಿ ನೀರನ್ನು ಬಳಸಲು ಸರ್ಕಾರ ಯೋಜನೆಯನ್ನು ರೂಪಿಸಿ ಅಷ್ಟನ್ನು ಬೇಡಿತು. ಇದುವರೆವಿಗೂ ಕರ್ನಾಟಕ ಸರ್ಕಾರ ನೀರಾವರಿಗಾಗಿ ಮಹದಾಯಿ ನೀರು ಬೇಕೆಂಬುದಾಗಿ ಎಲ್ಲಿಯೂ ಕೇಳಿರಲಿಲ್ಲ ಎನ್ನುತ್ತಾರೆ ಹೋರಾಟಗಾರರು.
ನಮ್ಮ ರಾಜ್ಯಕ್ಕೆ ಪರಿಶೀಲನೆಗೆ ಭೇಟಿ ಕೊಟ್ಟ ಅಧಿಕಾರಿಗಳ ತಂಡ, ಯಾಕಾಗಿ ನೀವು ಕಾಲುವೆ ತೋಡುತ್ತಿದ್ದೀರಿ ಎಂದಾಗ ಸರ್ಕಾರವು ಕಳಸಾ ನಾಲೆಯಿಂದ ಬರುವ ಹೆಚ್ಚುವರಿ ನೀರಿಗಾಗಿ ಎಂದಿತ್ತು. ಕೊನೆಗೆ ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಡೆಯಲು ಅಲ್ಲೊಂದು ತಡೆಗೋಡೆಯನ್ನು ಕಟ್ಟಿತು. ಆ ಮೂಲಕ ಸಾಂಕೇತಿಕವಾಗಿ ತಾನು ನೀರನ್ನು ಅಕ್ರಮವಾಗಿ ಹರಿಸುವುದಿಲ್ಲ ಎಂಬುದನ್ನು ಸಾರಿತು.
ಇದೇ ಅಧಿಕಾರಿಗಳ ಸಮ್ಮುಖದಲ್ಲಿ ರೈತ ಮುಖಂಡರು ನೀರಾವರಿಗಾಗಿ ನೀರನ್ನು ಸರ್ಕಾರ ಕೇಳಿಲ್ಲದಿರುವುದನ್ನು ಗಮನಕ್ಕೆ ತಂದಾಗ ಬೇಡಿಕೆ ಇಟ್ಟಲ್ಲಿ ಪರಿಗಣಿಸಬಹುದು ಎಂದಾಗ, ಬೇಡಿಕೆಗೆ ತಿದ್ದುಪಡಿಯನ್ನು ಮಾಡಿಸಲಾಯಿತು. ನದಿನೀರು ಹಂಚಿಕೆಯಲ್ಲಿ ಆದ್ಯತೆಯ ಲೆಕ್ಕದಲ್ಲಿ ಮೊದಲಿಗೆ ಕುಡಿಯುವ ನೀರು, ನಂತರ ವ್ಯವಸಾಯ, ಮೀನುಗಾರಿಕೆ, ಜಲಸಾರಿಗೆ ಮತ್ತು ಕೈಗಾರಿಕೋದ್ಯಮ ಬರುತ್ತದೆ.

ಇದರ ಅರ್ಥ ನೀರಾವರಿಗೆ ಕೇಳಬಾರದು ಅಂತೇನಿಲ್ಲ. ಕರ್ನಾಟಕದ ಬೇಡಿಕೆಯಲ್ಲಿ ನೀರಾವರಿಯನ್ನು 2014ರ ಡಿಸೆಂಬರ್ ತಿಂಗಳಲ್ಲಿ ಸೇರಿಸಲಾಯ್ತು. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಅದುವರೆವಿಗೆ ಆಗಿದ್ದ ಕಳಸಾ ಬಂಡೂರ ನಾಲೆಯ ಕಾಮಗಾರಿ ನಿಂತುಹೋಯಿತು.
ಮಹದಾಯಿ ನ್ಯಾಯಾಧೀಕರಣವನ್ನು 2010ರಲ್ಲಿ ಶುರುಮಾಡಿ ಅದಕ್ಕೆ ಆರು ವರ್ಷಗಳ ಕಾಲಾವಧಿಯನ್ನು ನೀಡಲಾಯಿತು. ಬಹುದಿನಗಳ ಕಾಲ ನ್ಯಾಯಾಧೀಕರಣಕ್ಕೆ ಸೂಕ್ತ ಸವಲತ್ತುಗಳನ್ನು ಒದಗಿಸದ ಕಾರಣ ವಿಚಾರಣೆಯೇ ಮಂದಗತಿಯಲ್ಲಿ ಸಾಗುತ್ತಿತ್ತು. ಇದೇ ಹೊತ್ತಿನಲ್ಲಿ ನರಗುಂದ ಭಾಗದ ರೈತರು "ರೈತ ಸೇನೆ ಕರ್ನಾಟಕ"ದ ಹೆಸರಿನ ಸಂಘಟನೆಯನ್ನು ಮಾಡಿಕೊಂಡು ಮಹದಾಯಿ ನೀರಿಗಾಗಿ ಹೋರಾಟ ಶುರುಮಾಡಿತು. ಈ ಹೋರಾಟ ಸಮಿತಿಯ ವತಿಯಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಅಕ್ಟೋಬರ್ 3, 2013ರಂದು ಸಾರ್ವಜನಿಕ ಹಿತಾಸಕ್ತಿಯ ಮೊಕದ್ದಮೆಯನ್ನು ಹೂಡಲಾಗಿ ನ್ಯಾಯಾಧೀಕರಣದ ಚಟುವಟಿಕೆ ಚುರುಕುಗೊಂಡಿತು. ಇದಾದ ನಂತರ ರೈತಸೇನೆ ತನ್ನ ಅರ್ಜಿಯನ್ನು ಹಿಂಪಡೆಯಿತು.
-
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications