ಜಾತಿ-ಮತಗಳ ಮೀರುವ ಪ್ರಯತ್ನಕ್ಕೆ ನಾಂದಿಯಾಗಲಿ ಕನಕಜಯಂತಿ
ನೀ ಮಾಯೆಯೊಳಗೋ ಮಾಯೆ ನಿನ್ನೊಳಗೊ ..? ನೀ ದೇಹದೊಳಗೊ ದೇಹ ನಿನ್ನೊಳಗೊ ..?, ತಲ್ಲಣಸಿದಿರು ಕಂಡ್ಯ ತಾಳು ಮನವೆ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ.., ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ.. ಎಂಬಿತ್ಯಾದಿ ಶ್ರೇಷ್ಠ ಕೀರ್ತನೆಗಳ ಮೂಲಕ ದಾಸಶ್ರೇಷ್ಠರಲ್ಲೊಬ್ಬರಾದವರು ಕನಕದಾಸರು.
ಇಂದು(ನ.6) ಕರ್ನಾಟಕದಾದ್ಯಂತ ಅವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಕನಕ ಜಯಂತಿ ಆಚರಣೆಯ ಹಿಂದಿರುವ ರಾಜಕೀಯ, ಜಾತಿ ಓಲೈಕೆಗಳ ಕಸರತ್ತುಗಳನ್ನೆಲ್ಲ ಆಚೆ ಇಟ್ಟು ಒಬ್ಬ ಶ್ರೇಷ್ಠಾತಿ ಶ್ರೇಷ್ಠ ದಾಸರನ್ನಾಗಿ ಕನಕದಾಸರನ್ನು ಕಂಡರೆ, ಕಾಗಿನೆಲೆಯ ಆದಿಕೇಶವನೂ ಮೆಚ್ಚಿಯಾನು!
ಹಾವೇರಿ ಜಿಲ್ಲೆಯ ಬಾಡದಲ್ಲಿ ಜನಿಸಿದ ಕನಕದಾಸರು, ಕಾಗಿನೆಲೆಯಾದಿಕೇಶವರಾಯ ಎಂಬ ಅಂಕಿತನಾಮದೊಂದಿಗೆ ಹಲವು ಕೀರ್ತನೆಗಳನ್ನು ರಚಿಸಿದ್ದಾರೆ. ಮೇಳು ಕೀಳೆಂಬ ಭಾವವೇ ಸುಳ್ಳು, ಶುದ್ಧ ಭಕ್ತಿ, ಪವಿತ್ರ ಮನಸ್ಸಿದ್ದರೆ ದೇವ ತಾನಾಗಿಯೇ ಒಲಿಯಬಲ್ಲ ಎಂಬುದನ್ನು ಅರ್ಥಮಾಡಿಸಿದವರು ಕನಕದಾಸರು. ಅದಕ್ಕೆಂದೇ ಉಡುಪಿಯ ಕೃಷ್ಣ, ಶುದ್ಧ ಮನಸ್ಸಿನ ಕನಕದಾಸರ ಭಕ್ತಿಗೆ ಒಲಿದು ಗೋಡೆಯೊಡೆದು ದರ್ಶನ ನೀಡಿದ!
ಜಾತಿ ಮತಗಳನ್ನು ಮೀರಿ ಬೆಳೆವ ಸಂಕಲ್ಪದೊಂದಿಗೆ ಪ್ರತಿವರ್ಷ ಆಚರಣೆಗೊಳ್ಳುವ ಕನಕ ಜಯಂತಿಗೆ ಹಲವು ಗಣ್ಯರು ಟ್ವಿಟ್ಟರ್ ನಲ್ಲಿ ಶುಭಹಾರೈಸಿದ್ದಾರೆ.
|
ದಿವ್ಯಚೇತನ ಕನಕದಾಸ
ಕುಲವನ್ನು ನಡತೆಯ ಮೇಲೆ ನಿರ್ಧರಿಸಬೇಕೇ ವಿನಃ ಹುಟ್ಟಿನಿಂದಲ್ಲ ಎಂದು ಹಾಡುತ್ತಾ, ಜಾತಿ-ಧರ್ಮಗಳ ಕಳಂಕವನ್ನು ಹೋಗಲಾಡಿಸಲು ಶ್ರಮಿಸಿದ ದಿವ್ಯಚೇತನ ಕನಕದಾಸರನ್ನು ಸ್ಮರಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ಕನಕದಾಸರ ಮಾತು ಇಂದಿಗೂ ಪ್ರಸ್ತುತ
ಕುಲಕುಲ ಕುಲವೆಂದು ಹೊಡೆದಾಡದಿರಿ ಎಂದು ಕನಕದಾಸರು ಅಂದೇ ಹೇಳಿದ್ದಾರೆ.ಇಂದಿಗೂ ಅವರ ಮಾತು ಅಷ್ಟೇ ಪ್ರಸ್ತುತ. ಎಲ್ಲರಿಗೂ ಕನಕದಾಸರ ಜಯಂತಿಯ ಶುಭಾಶಯಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
|
ಸಮಾಜ ಸುಧಾರಕ ಕನಕದಾಸರು
ಮಹಾನ್ ಕವಿ ಮತ್ತು ಜಾತಿ ಪದ್ಧತಿಯ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಿದ ಸಾಮಾಜಿಕ ಸುಧಾರಕ ಕನಕದಾಸರನ್ನು ಅವರ ಜಯಂತಿಯಂದು ನೆನೆಯೋಣ ಎಂದು ಕಾಂಗ್ರೆಸ್ ನಾಯಕ ರಿಜ್ವಾನ್ ಅರ್ಶದ್ ಟ್ವೀಟ್ ಮಾಡಿದ್ದಾರೆ.
|
ಶ್ರೀಕೃಷ್ಣ ಭಕ್ತ ಕನಕಜಯಂತಿ
ಕರ್ನಾಟಕದ ಸಮಸ್ತ ಜನರಿಗೆ ಶ್ರೀ ಕೃಷ್ಣ ಭಕ್ತ ಕನಕದಾಸ ಜಯಂತಿಯ ಹಾರ್ದಿಕ ಶುಭಾಶಯಗಳು ಎಂದು ಬಿಜೆಪಿ ಮುಖಂಡ ಅಶ್ವತ್ಥನಾರಾಯಣ ಅವರು ಟ್ವೀಟ್ ಮಾಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications