ಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ

ಕೆ ಕೆ ಪೈ ಅವರ ಆರೋಗ್ಯ ಇತ್ತೀಚಿನ ದಿನಗಳಲ್ಲಿ ತೀವ್ರವಾಗಿ ಹದಗೆಟ್ಟಿತ್ತು. ಆಧುನಿಕ ಮಣಿಪಾಲ್ ದ ಬ್ರಹ್ಮ ಡಾ ಟಿ ಎಂ ಎ ಪೈ, ಕೇಂದ್ರ ಸರ್ಕಾರದ ಮಾಜಿ ಸಚಿವ ಟಿ ಎಂ ಪೈ ಅವರ ಬಳಿಕ ಮಣಿಪಾಲ್ ಸಂಸ್ಥೆಗಳ ಚುಕ್ಕಾಣಿ ಹಿಡಿದು ಮುನ್ನೆಡೆಸಿದ ಕೆಕೆ ಪೈ ಅವರು ದೇಹಕ್ಕೆ ವಯಸ್ಸಾದರೂ ಮನಸ್ಸಿಗೆ ಮುಪ್ಪಿಲ್ಲ ಎಂಬಂತೆ ತೀರಾ ಇತ್ತೀಚಿನವರೆಗೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಕೆಕೆ ಪೈ ಉಡುಪಿಯ ಪುರಸಭೆ ಅಧ್ಯಕ್ಷರಾಗಿ, ಸಿಂಡಿಕೇಟ್ ಬ್ಯಾಂಕ್ ಅಧ್ಯಕ್ಷ, ಮಣಿಪಾಲ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾಗಿ ಹೀಗೆ ಅನೇಕ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಅವರ ಪ್ರಮುಖ ಕ್ಷೇತ್ರ ಬ್ಯಾಂಕಿಂಗ್ ಆಗಿದ್ದರೂ ಕೃಷಿ, ಹೈನುಗಾರಿಕೆಯಿಂದ ಕಲೆ, ಸಾಹಿತ್ಯ, ಶಿಕ್ಷಣ, ಧಾರ್ಮಿಕ ಕ್ಷೇತ್ರಗಳೆಲ್ಲದರಲ್ಲೂ ಅಧಿಕಾರವಾಣಿಯಿಂದ ಮಾತನಾಡಬಲ್ಲ ಪ್ರಾಜ್ಞರಾಗಿದ್ದರು. ಕೆಕೆ ಪೈ ಅವರ ಪತ್ನಿ ಸುಗುಣ ಪೈ ನಾಲ್ಕು ವರ್ಷಗಳ ಹಿಂದೆ ನಿಧನರಾಗಿದ್ದರು. ಕೆಕೆ ಪೈ ಅವರ ಪುತ್ರರಾದ ಡಾ ಅರವಿಂದ ಪೈ, ಸುರೇಶ್ ಪೈ, ಮತ್ತು ಪುತ್ರಿಯರಾದ ಗೀತಾ, ಡಾ ಸುಧಾ ಪ್ರಭು ಅವರನ್ನು ಅಗಲಿದ್ದಾರೆ.
ಗುರುವಾರ ಮಧ್ಯಾಹ್ನದವರೆಗೆ ಎಂಜಿಎಂ ಕಾಲೇಜಿನ ಆವರಣದಲ್ಲಿ ಕೆಕೆ ಪೈ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ನಮನಕ್ಕಾಗಿ ಇಡಲಾಗುತ್ತಿದೆ. ಬಳಿಕ ಇಂದ್ರಾಳಿ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಕೆಕೆ ಪೈ ನಿಧನಾರ್ಥ ಮಣಿಪಾಲ್ ಶಿಕ್ಷಣ ಸಮೂಹ ಸಂಸ್ಥೆಗಳ ಶಾಲಾ ಕಾಲೇಜುಗಳಿಗೆ ಜನವರಿ 15 ರಂದು ರಜೆ ಘೋಷಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications