ಉತ್ಕಟ ಕನ್ನಡಾಭಿಮಾನಿ ವೀಣೆ ರಾಜಾರಾಯರು

ತಮ್ಮ ತಂದೆ ಆಸ್ಥಾನ ವಿದ್ವಾನ್ ಭೈರವಿ ಲಕ್ಶ್ಮಿನಾರಣಪ್ಪನವರಲ್ಲಿ ಶಿಷ್ಯವೃತ್ತಿ ಮಾಡಿ ಪಳಗಿದ ರಾಯರು, ತಾರುಣ್ಯದಲ್ಲೆ ತಮ್ಮ ನೆಚ್ಚಿನ ಮೈಸೂರು ವಾಸುದೇವಾಚಾರ್ಯರ ಒಡನೆ ವಿನಿಕೆ ಮಾಡುವಷ್ಟು ಬೆಳೆದಿದ್ದರು! ವೀಣಾವಾದನ, ಗಾಯನ, ಸಂಗೀತ ಶಿಕ್ಷಣ, ಸಂಗೀತ ಶಾಸ್ತ್ರ, ರಂಗಭೂಮಿ, ಗಮಕ ಕಲೆ, ಭಾಷಣ ಕಲೆಗಳಲ್ಲಿ ಬೆಳಗಿದ ರಾಯರ ಪ್ರತಿಭೆ, ವಾಗ್ಗೇಯಕಾರರಾಗಿಯೂ ಮಿಂಚಿತ್ತು. ವರ್ಣ, ಸ್ವರಜತಿ, ಕೃತಿಗಳು ಮತ್ತು ತಿಲ್ಲಾನಗಳನ್ನೂ ಕೂಡ ರಾಯರು ರಚಿಸಿದ್ದಾರೆ.
ರಾಜಾರಾಯರು ಉತ್ಕಟ ಕನ್ನಡಾಭಿಮಾನಿಯಾಗಿದ್ದರು. ನೂರಾರು ಹರಿದಾಸರ ಪದಗಳು ಮತ್ತು ಶಿವಶರಣರ ವಚನಗಳಿಗೆ ಸ್ವರಪ್ರಸ್ತಾರ ಹಾಕಿ "ಕನ್ನಡ ಸಂಗೀತ"ವನ್ನು ಪ್ರತಿಪಾದಿಸಿದವರು ರಾಯರು. ಕನ್ನಡದಲ್ಲಿ ಸಂಗೀತ ಶಾಸ್ತ್ರವನ್ನು ಕುರಿತ ಪುಸ್ತಕಗಳು ಅಲಭ್ಯವಾಗಿದ್ದ ಕಾಲದಲ್ಲಿ ತಿಳಿಯಾದ ಕನ್ನಡದಲ್ಲಿ ಸಂಗೀತ ಶಾಸ್ತ್ರ ಗ್ರಂಥಗಳನ್ನು ಬರೆದು, ಪ್ರಕಟಿಸಿದರು.
ಮೇಲೆ ಹೇಳಿದ ಈ ಎರಡು ಕೊಡುಗೆಗಳು ಕನ್ನಡ ಸಂಗೀತದ ಇತಿಹಾಸದಲ್ಲಿ ಸ್ಮರಣೀಯ ದಾಖಲೆಗಳಾಗಿವೆ!
ಕರ್ನಾಟಕ ಗಾನ ಕಲಾ ಪರಿಷತ್ ಹಾಗೂ ಕರ್ನಾಟಕ ಸಂಗೀತ ನಾಟಕ ಅಕಾಡೆಮಿ ನಡೆಸಿದ ಎರಡು ರಾಜ್ಯಮಟ್ಟದ ಸಂಗೀತ ಸಮ್ಮೇಳನಗಳಿಗೆ ವೀಣೆ ರಾಜಾರಾಯರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆಚಾರ್ಯ ಪಾಠಶಾಲಾ ಕಾಲೇಜಿನಲ್ಲಿ ಮತ್ತು ತಾವು ಸ್ಥಾಪಿಸಿದ ಶ್ರೀನಿವಾಸ ಸಂಗೀತ ಕಲಾ ಶಾಲೆಯಲ್ಲಿ ನೂರಾರು ಮಂದಿಗೆ ಸಂಗೀತ ಶಿಕ್ಷಣ ನೀಡಿದ ರಾಜಾರಾಯರು ಪ್ರಾತ:ಸ್ಮರಣಿಯರಾಗಿದ್ದಾರೆ.
ಈ ವರ್ಷ ರಾಜಾರಾಯರ ಜನ್ಮ ಶತಮಾನೋತ್ಸವದ ಆಚರಣೆ ಯೋಜಿಸಲಾಗಿದೆ. ಅದಕ್ಕಾಗಿ ಗಾನಕಲಾ ಭೂಷಣ ರಾಜಾರಾವ್ ಫೌಂಡೇಶನ್ ಶುರು ಆಗಿದೆ. ಈ ತಿಂಗಳ 28ರಂದು ಡೆಟ್ರಾಯಿಟ್ ನಲ್ಲಿ ವಿದುಷಿ ವೀಣಾ ಕಿನ್ಹಾಲ್ (ರಾಜಾರಾಯರ ಪುತ್ರಿ) ಅವರ ಕಚೇರಿ ನಡೆಯಲಿದೆ. ಜುಲೈ 4, 5ರಂದು ಬೆಂಗಳೂರಿನಲ್ಲಿ ಶನಮಾನೋತ್ಸವ ಆಚರಣೆ ನಡೆಸಲಾಗುತ್ತಿದೆ. ಇದಕ್ಕಾಗಿ ಸಿದ್ದತೆಗಳು ಭರದಿಂದ ನಡೆಯುತ್ತಿವೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ : ಶ್ರೀನಿವಾಸ ರಾಜಾರಾವ್
ಈಮೈಲ್ : [email protected]
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications