ಉತ್ಕಟ ಕನ್ನಡಾಭಿಮಾನಿ ವೀಣೆ ರಾಜಾರಾಯರು

ತಮ್ಮ ತಂದೆ ಆಸ್ಥಾನ ವಿದ್ವಾನ್ ಭೈರವಿ ಲಕ್ಶ್ಮಿನಾರಣಪ್ಪನವರಲ್ಲಿ ಶಿಷ್ಯವೃತ್ತಿ ಮಾಡಿ ಪಳಗಿದ ರಾಯರು, ತಾರುಣ್ಯದಲ್ಲೆ ತಮ್ಮ ನೆಚ್ಚಿನ ಮೈಸೂರು ವಾಸುದೇವಾಚಾರ್ಯರ ಒಡನೆ ವಿನಿಕೆ ಮಾಡುವಷ್ಟು ಬೆಳೆದಿದ್ದರು! ವೀಣಾವಾದನ, ಗಾಯನ, ಸಂಗೀತ ಶಿಕ್ಷಣ, ಸಂಗೀತ ಶಾಸ್ತ್ರ, ರಂಗಭೂಮಿ, ಗಮಕ ಕಲೆ, ಭಾಷಣ ಕಲೆಗಳಲ್ಲಿ ಬೆಳಗಿದ ರಾಯರ ಪ್ರತಿಭೆ, ವಾಗ್ಗೇಯಕಾರರಾಗಿಯೂ ಮಿಂಚಿತ್ತು. ವರ್ಣ, ಸ್ವರಜತಿ, ಕೃತಿಗಳು ಮತ್ತು ತಿಲ್ಲಾನಗಳನ್ನೂ ಕೂಡ ರಾಯರು ರಚಿಸಿದ್ದಾರೆ.
ರಾಜಾರಾಯರು ಉತ್ಕಟ ಕನ್ನಡಾಭಿಮಾನಿಯಾಗಿದ್ದರು. ನೂರಾರು ಹರಿದಾಸರ ಪದಗಳು ಮತ್ತು ಶಿವಶರಣರ ವಚನಗಳಿಗೆ ಸ್ವರಪ್ರಸ್ತಾರ ಹಾಕಿ "ಕನ್ನಡ ಸಂಗೀತ"ವನ್ನು ಪ್ರತಿಪಾದಿಸಿದವರು ರಾಯರು. ಕನ್ನಡದಲ್ಲಿ ಸಂಗೀತ ಶಾಸ್ತ್ರವನ್ನು ಕುರಿತ ಪುಸ್ತಕಗಳು ಅಲಭ್ಯವಾಗಿದ್ದ ಕಾಲದಲ್ಲಿ ತಿಳಿಯಾದ ಕನ್ನಡದಲ್ಲಿ ಸಂಗೀತ ಶಾಸ್ತ್ರ ಗ್ರಂಥಗಳನ್ನು ಬರೆದು, ಪ್ರಕಟಿಸಿದರು.
ಮೇಲೆ ಹೇಳಿದ ಈ ಎರಡು ಕೊಡುಗೆಗಳು ಕನ್ನಡ ಸಂಗೀತದ ಇತಿಹಾಸದಲ್ಲಿ ಸ್ಮರಣೀಯ ದಾಖಲೆಗಳಾಗಿವೆ!
ಕರ್ನಾಟಕ ಗಾನ ಕಲಾ ಪರಿಷತ್ ಹಾಗೂ ಕರ್ನಾಟಕ ಸಂಗೀತ ನಾಟಕ ಅಕಾಡೆಮಿ ನಡೆಸಿದ ಎರಡು ರಾಜ್ಯಮಟ್ಟದ ಸಂಗೀತ ಸಮ್ಮೇಳನಗಳಿಗೆ ವೀಣೆ ರಾಜಾರಾಯರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆಚಾರ್ಯ ಪಾಠಶಾಲಾ ಕಾಲೇಜಿನಲ್ಲಿ ಮತ್ತು ತಾವು ಸ್ಥಾಪಿಸಿದ ಶ್ರೀನಿವಾಸ ಸಂಗೀತ ಕಲಾ ಶಾಲೆಯಲ್ಲಿ ನೂರಾರು ಮಂದಿಗೆ ಸಂಗೀತ ಶಿಕ್ಷಣ ನೀಡಿದ ರಾಜಾರಾಯರು ಪ್ರಾತ:ಸ್ಮರಣಿಯರಾಗಿದ್ದಾರೆ.
ಈ ವರ್ಷ ರಾಜಾರಾಯರ ಜನ್ಮ ಶತಮಾನೋತ್ಸವದ ಆಚರಣೆ ಯೋಜಿಸಲಾಗಿದೆ. ಅದಕ್ಕಾಗಿ ಗಾನಕಲಾ ಭೂಷಣ ರಾಜಾರಾವ್ ಫೌಂಡೇಶನ್ ಶುರು ಆಗಿದೆ. ಈ ತಿಂಗಳ 28ರಂದು ಡೆಟ್ರಾಯಿಟ್ ನಲ್ಲಿ ವಿದುಷಿ ವೀಣಾ ಕಿನ್ಹಾಲ್ (ರಾಜಾರಾಯರ ಪುತ್ರಿ) ಅವರ ಕಚೇರಿ ನಡೆಯಲಿದೆ. ಜುಲೈ 4, 5ರಂದು ಬೆಂಗಳೂರಿನಲ್ಲಿ ಶನಮಾನೋತ್ಸವ ಆಚರಣೆ ನಡೆಸಲಾಗುತ್ತಿದೆ. ಇದಕ್ಕಾಗಿ ಸಿದ್ದತೆಗಳು ಭರದಿಂದ ನಡೆಯುತ್ತಿವೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ : ಶ್ರೀನಿವಾಸ ರಾಜಾರಾವ್
ಈಮೈಲ್ : [email protected]
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications