ಆಧುನಿಕ ಬೆಂಗಳೂರಿನ ಶಿಲ್ಪಿ ಶೇಷಾದ್ರಿ ಐಯ್ಯರ್

* ಕೃಪೆ : ಮೂರ್ತಿ ಪೂಜೆ
ದಿವಾನ್ ಶೇಷಾದ್ರಿ ಐಯ್ಯರ್ ಅವರು ಓಡೆಯರ ಕಾಲದಲ್ಲಿ ಮೈಸೂರಿನ ದಿವಾನರಾಗಿದ್ದರು. ತಮ್ಮ ಆಡಳಿತಾವಧಿಯಲ್ಲಿ ಬೆಂಗಳೂರಿನ ಸರ್ವೊತೊಮುಖ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಆಧುನಿಕ ಬೆಂಗಳೂರಿನ ಶಿಲ್ಪಿಯೆಂದೇ ಪ್ರಸಿದ್ಧರಾಗಿದ್ದಾರೆ. ಇವತ್ತು (ಜೂನ್ 1) ಅವರ ಹುಟ್ಟಿದ ದಿನ. ಬನ್ನಿ ಕಬ್ಬನ್ ಉದ್ಯಾನವನದಲ್ಲಿರುವ ಅವರ ಮೂರ್ತಿಗೆ ಪೂಜೆ ಸಲ್ಲಿಸೋಣ. ಈ ಮೂರ್ತಿಯನ್ನು ನವೆಂಬರ್ 20, 1913ರಲ್ಲಿ ಸ್ಥಾಪಿಸಲಾಗಿದೆ.
ದಿವಾನ್ ಶೇಷಾದ್ರಿ ಐಯ್ಯರ್ ಅವರು ನಾಲ್ವಡಿ ಕೃಷ್ಣರಾಜ ಒಡೆಯರ ಅವರ ಕಾಲದಲ್ಲಿ ಮೈಸೂರಿನ ದಿವಾನರಾಗಿ (1883ರಿಂದ 1901ರವರೆಗೆ) ಕೆಲಸ ಮಾಡಿದರು. 1898ರಲ್ಲಿ ಬೆಂಗಳೂರು ಪ್ಲೇಗ್ನಿಂದ ತತ್ತರಿಸಿದಾಗ ಊರಿನ ಸ್ವಚ್ಛತೆಯ ಬಗ್ಗೆ ಗಮನ ಹರಿಸಿ ಜನರಲ್ಲಿ ನೈರ್ಮಲ್ಯ ಮತ್ತು ಆರೊಗ್ಯದ ಬಗೆಗಿನ ಕಾಳಜಿಯನ್ನು ಹೆಚ್ಚಿಸಿದ್ದರು. ಹಲವು ಕಡೆ ಚರಂಡಿಗಳನ್ನು ತೋಡಿಸಿದ್ದರು. ರಸ್ತೆಗಳನ್ನು ಅಗಲಗೊಳಿಸಿದ್ದರು. 1894ರಲ್ಲಿ ಬೆಂಗಳೂರಿಗೆ ಪ್ರಥಮ ಬಾರಿಗೆ ಹೆಸರಘಟ್ಟದ ಕೆರೆಯಿಂದ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿಸಿದ್ದರು.
ಕೊಲಾರದಲ್ಲಿ ಚಿನ್ನದ ಗಣಿ ಪ್ರಾರಂಭವಾಗಿದ್ದು ಇವರು ದಿವಾನರಾಗಿದ್ದ ಕಾಲದಲ್ಲಿಯೇ. ಇಷ್ಟೆ ಅಲ್ಲದೆ ಏಷ್ಯಾದಲ್ಲಿಯೇ ಪ್ರಥಮ ಜಲ ವಿದ್ಯುತ್ ಕಾರ್ಯಗಾರವನ್ನು ಶಿವನಸಮುದ್ರದಲ್ಲಿ ಪ್ರಾರಂಭಿಸಲು ಶೇಷಾದ್ರಿ ಐಯ್ಯರ್ ಅವರು ಕಾರಣಿಭೂತರಾದ್ದರು.
ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆ ಪ್ರಾರಂಭಿಸಿದ್ದು, ಲಾಲಬಾಗ್ನ ಗಾಜಿನಮನೆ ಕಟ್ಟಿಸಿದ್ದು , ಬಸವನಗುಡಿ ಮತ್ತು ಮಲ್ಲೇಶ್ವರ ಬಡಾವಣೆಗಳ ವಿಸ್ತರಣೆ ಮಾಡಿದ್ದು ನಮ್ಮ ಈ ಆಧುನಿಕ ಬೆಂಗಳೂರಿಗೆ ಶೇಷಾದ್ರಿ ಐಯ್ಯರ್ ಅವರ ಕಾಣಿಕೆ. ಅಲ್ಲದೆ ಭಾರತೀಯ ವಿಜ್ಞಾನ ಸಂಸ್ಥೆಯನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲು ಮಹಾರಾಜರಿಂದ 372 ಎಕರೆಯಷ್ಟು ಭೂಮಿಯನ್ನು ದಾನವಾಗಿ ಕೊಡಿಸಿದ್ದು ಶೇಷಾದ್ರಿ ಐಯ್ಯರ್ ಅವರ ಹೆಗ್ಗಳಿಕೆ.
ಶೇಷಾದ್ರಿ ಐಯ್ಯರ್ ಅವರು ಸೆಪ್ಟೆಂಬರ್ 13, 1901ರಲ್ಲಿ ತೀರಿಕೊಂಡರು. ಅವರ ನೆನೆಪಿಗಾಗಿ ಬೆಂಗಳೂರಿನ ಒಂದು ಬಡಾವಣೆಗೆ ಶೇಷಾದ್ರಿಪುರಂ ಏಂದು ನಾಮಕರಣ ಮಾಡಲಾಗಿದೆ. ಕುಮಾರಪುರಂ ಶೇಷಾದ್ರಿ ಅಯ್ಯರ್ ಅವರ ಖಾಸಗಿ ಮನೆ "ಕುಮಾರ ಕೃಪಾ" ಈಗ ರಾಜ್ಯದ ಅತಿಥಿ ಗೃಹವಾಗಿ ಬಳಕೆಯಾಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications