ಮದನಿ ಯಾರು, ಆತನ ಪ್ರತಾಪಗಳೇನು?

ಭಯೋತ್ಪಾದಕ ಸಂಘಟನೆ ಲಷ್ಕರ್-ಇ-ತೊಯ್ಬಾದೊಂದಿಗೆ ಗುರುತಿಸಿಕೊಂಡಿರುವ ಅಬ್ದುಲ್ ನಾಸಿರ್ ಮದನಿ ಕೊಯಂಬತ್ತೂರು ಪ್ರಕರಣದಲ್ಲಿ ಜೈಲು ಊಟ ಮಾಡಿ ಬಂದ ನಂತರ ತಾನು ಸಂಪೂರ್ಣ ಪರಿವರ್ತಿತನಾಗಿರುವುದಾಗಿ ಭೋಂಗು ಬಿಟ್ಟಿದ್ದ. 1997ರಲ್ಲಿ ಆ ಪ್ರಕರಣದಲ್ಲಿ ಬಿಡುಗಡೆಯಾದ ನಂತರ ತಾನು 'ಜಾತ್ಯತೀತ' ಎಂದು ಹೇಳಿಕೊಂಡು ತಿರುಗಿದ ಮದನಿಯ ಹೆಸರು ನಂತರ ಕೇಳಿಬಂದಿದ್ದೇ ಬೆಂಗಳೂರು ಸರಣಿ ಸ್ಫೋಟದಲ್ಲಿ.
2008ರ ಜುಲೈ 25ರಂದು ಬೆಂಗಳೂರಿನಲ್ಲಿ ಸರಣಿ ಸ್ಫೋಟದಲ್ಲಿ ಆತ ಪರೋಕ್ಷವಾಗಿ ಭಾಗಿಯಾಗಿರುವುದು ಆತನ ಮೇಲಿರುವ ಪ್ರಮುಖ ಆರೋಪ. ಬೆಂಗಳೂರು ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ನಾಸಿರ್ ಎಂಬಾತ ಸ್ಫೋಟಕ್ಕೆ ಮುಂಚೆ ಮದನಿಯನ್ನು ಸಂಧಿಸಿದ್ದಾಗಿ ಹೇಳಿಕೆ ನೀಡಿ, ಮದನಿಯ ಭಾಗೀದಾರಿಕೆಯನ್ನು ಸ್ಪಷ್ಟಪಡಿಸಿದ್ದಾನೆ.
ಬಾಲ್ಯ ಮತ್ತು ಯೌವನ : 1965ರಲ್ಲಿ ಕೇರಳದ ಸಸ್ತಮಕೊಟ್ಟ ಎಂಬಲ್ಲಿ ಜನಿಸಿದ ಮದನಿ ವಿದ್ಯಾಭ್ಯಾಸ ನಡೆಸಿದ್ದು ಮದರಸಾಗಳಲ್ಲಿ. ಯೌವನದ ದಿನಗಳಿಂದಲೂ ಮುಸ್ಲಿಂರನ್ನು ಸಂಘಟಿಸುವುದು, ಪ್ರಚೋದನಕಾರಿ ಭಾಷಣ ಮಾಡುವುದು, ಯುವಕರನ್ನು ಭಯೋತ್ಪಾದನೆಗೆ ಪ್ರೇರೇಪಿಸುವುದನ್ನು ಮಾಡಿಕೊಂಡು ಬಂದಿದ್ದಾನೆ. ಭಯೋತ್ಪಾದಕ ಸಂಘಟನೆ ಲಷ್ಕರ್-ಇ-ತೊಯ್ಬಾ ಜೊತೆಗೆ ನಂಟಸ್ತನ ಬೆಳೆಸಿಕೊಂಡಿದ್ದಾನೆ ಎಂಬ ಆರೋಪ ಕೂಡ ಹೊತ್ತಿದ್ದಾನೆ.
1993ರಲ್ಲಿ ನಿಷೇಧಿಸಲಾದ ಇಸ್ಲಾಮಿಕ್ ಸೇವಕ ಸಂಘದ ಸ್ಥಾಪಕ. ಒಂದು ಬಾರಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಿಂದ ಮಾರಣಾಂತಿಕವಾಗಿ ಹಲ್ಲೆಗೀಡಾಗಿದ್ದ. ಆ ಹಲ್ಲೆಯಲ್ಲಿ ಒಂದು ಕಾಲನ್ನು ಊನ ಕೂಡ ಮಾಡಿಕೊಂಡಿದ್ದಾನೆ. 1992ರ ಬಾಬ್ರಿ ಮಸೀದಿ ಧ್ವಂಸದ ನಂತರ 1993ರಲ್ಲಿ ಆತ ಹುಟ್ಟುಹಾಕಿದ್ದು ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ. ವಾಕ್ಚಾತುರ್ಯದಿಂದಾಗಿ ಬಡ ಮುಸ್ಲಿಂರ ಮೇಲೆ ಸಾಕಷ್ಟು ಪ್ರಭಾವ ಬೆಳೆಸಿಕೊಂಡಿದ್ದಾನೆ ಮದನಿ. ಮುಸ್ಲಿಂ ಓಟುಗಳ ಆಸೆಯಿಂದಾಗಿ ಅನೇಕ ರಾಜಕೀಯ ಪಕ್ಷಗಳು ಮದನಿಯೊಂದಿಗೆ ಚುನಾವಣೆಗಳಲ್ಲಿ ಹಸ್ತಲಾಘವ ಮಾಡಿಕೊಂಡಿವೆ.
"ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಮದನಿಯನ್ನು ಬೆಂಗಳೂರು ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಕೊಯಂಬತ್ತೂರು ಸ್ಫೋಟ ಪ್ರಕರಣದಂತೆ ಈ ಪ್ರಕರಣದಲ್ಲಿಯೂ ಯಾವುದೇ ವಿಚಾರಣೆಗಳಿಲ್ಲದೆ, ಜಾಮೀನು ಕೂಡ ನೀಡದಂತೆ ಜೈಲಲ್ಲಿ ಇಡುವುದಿಲ್ಲ ಎಂದು ಏನು ಗ್ಯಾರಂಟಿ" ಎಂದು ಇನ್ನೊಂದು ಮುಸ್ಲಿಂ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪ್ರಶ್ನೆ ಎತ್ತಿದೆ.
ತಾನು ಯಾವುದೇ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ, ವಿನಾಕರಣ ತನ್ನ ಹೆಸರನ್ನು ಎಳೆದುತರಲಾಗುತ್ತಿದೆ ಎಂದು ಆರೋಪಿಸುವ ಮದನಿಯನ್ನು ಮಾನವೀಯತೆಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಕೇರಳ ಸರಕಾರವೇ 1996ರಲ್ಲಿ ಆದೇಶ ನೀಡಿತ್ತು. ಆಗಸ್ಟ್ 17ರ ಮಧ್ಯಾಹ್ನ ಮದನಿಯನ್ನು ಬೆಂಗಳೂರು ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರ ಸಹಕಾರದೊಂದಿಗೆ ಕರ್ನಾಟಕದ ಪೊಲೀಸರು ಬಂಧಿಸಿದ್ದಾರೆ. ಇನ್ನು ಮುಂದೆ ಕರ್ನಾಟಕದ ನ್ಯಾಯಾಲಯದಲ್ಲಿ ಆತನ ವಿಚಾರಣೆ ನಡೆಯಬೇಕಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications