ಅಭಿಜಾತ ಅಭಿಯಂತ ಸರ್ ಎಮ್ ವಿಶ್ವೇಶ್ವರಯ್ಯ
ಇಂದು "ಇಂಜಿನೀಯರ್ ದಿನ", ಅದೇ ನಮ್ಮ ನೆಚ್ಚಿನ ಇಂಜನೀಯರ್-ದಿವಾನರು-ಮಹಾಮುತ್ಸದ್ಧಿ ಸರ್ ಎಮ್. ವಿಶ್ವೇಶ್ವರಯ್ಯನವರ 150ನೇ ಹುಟ್ಟುಹಬ್ಬ. ಈ ಸುದಿನದಂದು ಕೃಷ್ಣರಾಜೆಂದ್ರ ವೃತ್ತದಲ್ಲಿರುವ ಅವರ ಮೂರ್ತಿಗೆ ನಮಿಸೋಣ. ವಿಶ್ವೇಶ್ವರಯ್ಯನವರ ಈ ಮೂರ್ತಿ ಸ್ಥಾಪನೆಯಾದದ್ದು 1970ರಲ್ಲಿ.
ವಿಶ್ವೇಶ್ವರಯ್ಯನವರು ಹುಟ್ಟಿದ್ದು ಸೆಪ್ಟೆಂಬರ್ 15, 1860ರಂದು ಬೆಂಗಳೂರಿನಿಂದ 40 ಮೈಲಿ ದೂರದಲ್ಲಿರುವ ಮುದ್ದೇನಹಳ್ಳಿಯಲ್ಲಿ. ತಂದೆ ಶ್ರೀನಿವಾಸ ಶಾಸ್ತ್ರಿ, ತಾಯಿ ವೆಂಕಾಚಮ್ಮ. ವಿಶ್ವೇಶ್ವರಯ್ಯನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮ ಶಾಸ್ತ್ರಗಳನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. 1881ರಲ್ಲಿ ಮದರಾಸು ವಿಶ್ವವಿದ್ಯಾಲಯದಿಂದ ಬಿಎ ಪದವಿಯನ್ನು ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಎಂಜಿನಿಯರಿಂಗ್ ಪದವಿಯನ್ನು ಪಡೆದರು. [ವಿಶ್ವೇಶ್ವರಯ್ಯ ಜನ್ಮದಿನ: ಉಸಿರಾಡುವ ಅಂಚೆಚೀಟಿ ಕಂಡ ಕನ್ನಡಿಗ]

ಇಂಜನೀಯರಾಗಿ : ಶಿಕ್ಷಣದ ನಂತರ ಅವರು ಮುಂಬೈ ನಗರದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಸೇರಿದರು. ಇದರ ನಂತರ ಭಾರತೀಯ ನೀರಾವರಿ ಕಮಿಷನ್ ಅನ್ನು ಸೇರಿ ದಖನ್ ಪ್ರಸ್ತಭೂಮಿಯಲ್ಲೇ ಉತ್ತಮವಾದ ನೀರಾವರಿ ವ್ಯವಸ್ಥೆಯನ್ನು ವಿಶ್ವೇಶ್ವರಯ್ಯನವರು ಪರಿಚಯಿಸಿದರು.
ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ ಸ್ವಯಂಚಾಲಿತ ಫ್ಲಡ್ ಗೇಟ್ ವಿನ್ಯಾಸವೊಂದನ್ನು ಕಂಡುಹಿಡಿದು ಅದಕ್ಕಾಗಿ ಪೇಟೆಂಟ್ ಪಡೆದರು. ಮೊದಲ ಬಾರಿಗೆ 1903ರಲ್ಲಿ ಈ ಫ್ಲಡ್ ಗೇಟ್ ಗಳು ಪುಣೆಯ ಖಡಕ್ವಾಸ್ಲಾ ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು ಮತ್ತು ಕರ್ನಾಟಕದ ಕೃಷ್ಣರಾಜಸಾಗರ ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ ಗಳ ಉದ್ದೇಶ ಅಣೆಕಟ್ಟೆಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು. ಕೃಷ್ಣರಾಜಸಾಗರವನ್ನು ಕಟ್ಟಿದಾಗ ಅದು ಆ ಕಾಲದಲ್ಲಿ ಭಾರತದ ಅತ್ಯಂತ ದೊಡ್ಡ ಅಣೆಕಟ್ಟು.
ಹೈದರಾಬಾದ್ ನಗರವನ್ನು ಪ್ರವಾಹಗಳಿಂದ ರಕ್ಷಿಸಲು ಅವರು ಅಳವಡಿಸಿದ ಪ್ರವಾಹ ರಕ್ಷಣಾ ವ್ಯವಸ್ಥೆ ಅವರ ಪ್ರಸಿದ್ಧಿಯನ್ನು ಹೆಚ್ಚಿಸಿತ್ತು. [ಸರ್ ಎಂವಿಯನ್ನು ಕಂಡ ಈ ಕಣ್ಣುಗಳೇ ಧನ್ಯ]

ಕನ್ನಡನಾಡಿಗೆ ಸರ್ ಎಮ್.ವಿ ಕೊಡುಗೆ : ಮೈಸೂರು ರಾಜ್ಯದ ಮುಖ್ಯ ಇಂಜನೀಯರ್ ಆಗಿ, ನಂತರ ದಿವಾನರಾಗಿ, ಅದರ ನಂತರ ಹಲವಾರು ಲಾಭ-ರಹಿತ ಹುದ್ದೆಗಳಲ್ಲಿ ಕನ್ನಡ ನಾಡಿನ ಸೇವೆಗೈದ ವಿಶ್ವೇಶ್ವರಯ್ಯನವರ ಕೆಲ ಮುಖ್ಯ ಕೊಡುಗೆಗಳು:
* ಕೃಷ್ಣರಾಜಸಾಗರದ ನಿರ್ಮಾಣ.
* ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಚೇರಮನ್ನರಾಗಿ ಅದರ ಅಭಿವೃದ್ಧಿಗೆ ಕೊಡುಗೆ.
* ಮೈಸೂರು ಸಾಬೂನು ಕಾರ್ಖಾನೆಯ ಸ್ಥಾಪನೆ.
* ಮೈಸೂರು ವಿಶ್ವವಿದ್ಯಾಲಯದ ಸ್ಥಾಪನೆ.
* ಮೈಸೂರು ಬ್ಯಾಂಕ್ ಸ್ಥಾಪನೆ.
* ಮೈಸೂರು ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಗ್ರಂಥಾಲಯಗಳ ಸ್ಥಾಪನೆ.
* ಮೈಸೂರು ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ.
* ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ.
* ಶ್ರೀ ಜಯಚಾಮರಾಜೇಂದ್ರ ವೃತ್ತಿಶಿಕ್ಷಣ ತರಬೇತಿ ಸಂಸ್ಥೆಯ ಸ್ಥಾಪನೆ.
ವಿಶ್ವೇಶ್ವರಯ್ಯನವರ ಪ್ರಾಮಾಣಿಕತೆ, ವೃತ್ತಿಪರತೆಗಳು ಕೂಡ ದಂತೆಕತೆಗಳಾಗಿ ಹೋಗಿವೆ. (ಕೃಪೆ : ಮೂರ್ತಿ ಪೂಜೆ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications