ಭಾರತರತ್ನ ಪಂಡಿತ್ ಭೀಮಸೇನ್ ಜೋಶಿ ಅಸ್ತಂಗತ

1922 ಫೆ.4 ರಂದು ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಜನಿಸಿದರು. ಸಣ್ಣ ವಯಸ್ಸಿನಲ್ಲಿಯೇ ಸಂಗೀತ ಕಲಿಯಲೆಂದು ಮನೆಯನ್ನು ಬಿಟ್ಟ ಜೋಶಿಯವರು ನಂತರ ಧಾರವಾಡ ಜಿಲ್ಲೆಗೆ ಹಿಂದಿರುಗಿ ಕುಂದಗೋಳದ ಪ್ರಸಿದ್ಧ ಗಾಯಕರಾದ ಸವಾಯಿ ಗಂಧರ್ವರ ಶಿಷ್ಯರಾದರು. ಹಿಂದುಸ್ತಾನಿ ಸಂಗೀತದ ಒಂದು ಪದ್ಧತಿಯಾದ ಕಿರಾಣಾ ಘರಾನಾದಲ್ಲಿ ಪರಿಣತರಾದ ಭೀಮಸೇನ ಜೋಷಿಯವರು ಕಳೆದ ಆರು ದಶಕಗಳ ಕಾಲ ಕಛೇರಿಗಳನ್ನು ನಡೆಸುತ್ತಾ ಬಂದಿದದ್ದರು.
ವಿಡಿಯೋ: ಗಾನ ಗಂಧರ್ವ ಭೀಮಸೇನ್ ಜೋಶಿ ಕಣ್ಮರೆ
ನಂಬಿದೆ ನಿನ್ನ ನಾದದೇವತೆಯೇ ಎಂದು ಸಂಗೀತವನ್ನು ಆರಾಧಿಸುತ್ತಾ ಬಂದ ಜೋಶಿ ಅವರಿಗೆ ಹಿಂದೂಸ್ತಾನಿ ಸಂಗೀತದ ಖಯಾಲ್ ಕೃತಿಗಳ ಹಾಡುಗಾರಿಕೆಗೆ ಪ್ರಸಿದ್ಧರಾದವರು. ಹಾಗೆಯೇ ಹಿಂದಿ ಭಜನೆಗಳು, ಮರಾಠಿ ಅಭಂಗ ಮತ್ತು ನಾಟ್ಯಗೀತೆಗಳನ್ನು ಸಹ ಬಹಳಷ್ಟು ಹಾಡಿದ್ದಾರೆ. ಕನ್ನಡ ಭಾಷೆಯ ದಾಸಪದವಾದ ಭಾಗ್ಯದ ಲಕ್ಷ್ಮಿ ಬಾರಮ್ಮ ಭೀಮಸೇನ ಜೋಶಿಯವರ ಹೆಸರಿನೊಂದಿಗೆ ಐಕ್ಯವಾಗುವಷ್ಟು ಪ್ರಸಿದ್ಧವಾಗಿದೆ. ಕನ್ನಡದಲ್ಲಿ ಭೀಮಸೇನ್ ಜೋಶಿಯವರ ಮುಖ್ಯ ಆಲ್ಬಮ್ ಗಳೆಂದರೆ ದಾಸವಾಣಿ ಮತ್ತು ಎನ್ನ ಪಾಲಿಸೊ.
ಪುಣೆ ನಿವಾಸಿಯಾಗಿದ್ದ ಭೀಮಸೇನ ಜೋಷಿ ಅವರು ತಮ್ಮ ಗುರುಗಳ ನೆನಪಿನಲ್ಲಿ 1952ರಿಂದ ಪ್ರತಿ ವರ್ಷವೂ ಅಲ್ಲಿ "ಸವಾಯಿ ಗಂಧರ್ವ ಸಂಗೀತ ಮಹೋತ್ಸವ"ವನ್ನು ನಡೆಸುತ್ತಾ ಬ೦ದಿದ್ದರು. ಪ್ರತಿಷ್ಠಿತ ಪದ್ಮವಿಭೂಷಣ ಪ್ರಶಸ್ತಿ ಭೀಮಸೇನ ಜೋಷಿಯವರಿಗೆ ಲಭಿಸಿದೆ.
ಜೋಶಿ ಅವರನ್ನು ಹುಡುಕಿಕೊಂಡ ಪ್ರಶಸ್ತಿಗಳು ಹಲವಾರು: 1972ರಲ್ಲಿ ಪದ್ಮಶ್ರೀ, 1976ರಲ್ಲಿ ಸಂಗೀತ ನಾಟಕ ಅಕಾಡೆಮಿಯ ಪ್ರಶಸ್ತಿ, 1985ರಲ್ಲಿ ಪದ್ಮಭೂಷಣ, 1999ರಲ್ಲಿ ಪದ್ಮವಿಭೂಷಣ ಹಾಗೂ 2008ರಲ್ಲಿ ಭಾರತ ರತ್ನ ಪ್ರಶಸ್ತಿಗಳು ಲಭಿಸಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications