Get Updates
Get notified of breaking news, exclusive insights, and must-see stories!

ನ.6 ಕನಕದಾಸ ಜಯಂತಿ ನಿಮಿತ್ತ ವಿಶೇಷ ಲೇಖನ

Recommended Video

      ಕೀರ್ತನೆಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಅನರ್ಘ್ಯ ಕೊಡುಗೆ ಕೊಟ್ಟವರು ಕನಕದಾಸರು | Oneindia Kannada

      ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ನವೆಂಬರ್ 6 ಕನಕ ಜಯಂತಿಯ ಅಂಗವಾಗಿ ಈ ವಿಶೇಷ ಲೇಖನ.

      ***
      ಕನ್ನಡ ಸಾಹಿತ್ಯಕ್ಕೆ ತಮ್ಮದೆ ಕೀರ್ತನೆಗಳ ಮೂಲಕ ಅನರ್ಘ್ಯ ಕೊಡುಗೆಯನ್ನು ನೀಡಿದವರು ಹಾಗೂ ದಾಸ ಸಾಹಿತ್ಯದ ಶ್ರೇಷ್ಠದಾಸರಲ್ಲಿ ಒಬ್ಬರಾಗಿರುವ ಕನಕದಾಸರು ವಿಶ್ವಮಾನವರಾಗಿದ್ದಾರೆ. ಅವರ ಕೀರ್ತನೆಗಳು ಮನುಜ ಕುಲ ಸನ್ಮಾರ್ಗದತ್ತ ಕೊಂಡೊಯುವಂತದ್ದದ್ದು.

      ಕರ್ನಾಟಕದಲ್ಲಿ 15 ಮತ್ತು 16ನೇ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕವಿಗಳು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

      "ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ತುತ್ತು ಹಿಟ್ಟಿಗಾಗಿ" ಎಂಬ ಕಾವ್ಯ ಭಾವಾರ್ಥವು ಯುವಕರ ಮನ ಮಿಡಿಯುವುದು ಯುವಕರ ನಿಲುವನ್ನು ಅವರ ಗುರಿಯನ್ನು ದಾರಿಗೆ ಒಯ್ಯುವಂತೆ ಮಾಡಿದ ನಮ್ಮ ಶ್ರೇಷ್ಠ ಸಂತಕವಿ ಕನಕದಾಸರು.

      Bhakta Kanaka Dasa, one of the pioneers of Karnataka Music

      ಈಗಿನ ಹಾವೇರಿ ಜಿಲ್ಲೆಯ ಬಾಡ ಗ್ರಾಮದ ಬೀರಪ್ಪ ಬಚ್ಚಮ್ಮ ದಂಪತಿಗಳ ಮಗ. ಇವರ ಪೂರ್ವದ ಹೆಸರು ತಿಮ್ಮಪ್ಪ ನಾಯಕ. ಬಾಡ ಗ್ರಾಮದಲ್ಲಿ ಆದಿಕೇಶವ ಮೂರ್ತಿಯನ್ನು ತಂದು ಕಾಗಿನೆಲೆಯಲ್ಲಿ ಪ್ರತಿಷ್ಠಾನ ಮಾಡಿ ದೇವಾಲಯವನ್ನು ಕಟ್ಟಿಸಿದರಂತೆ. ದಂಡನಾಯಕರಾಗಿದ್ದ ಕನಕದಾಸರಿಗೆ ಯುದ್ಧವೊಂದರಲ್ಲಿ ಸೋಲುಂಟಾಗಿ, ಜೀವನದಲ್ಲಿ ವೈರಾಗ್ಯ ಉಂಟಾಗಿ ವ್ಯಾಸರಾಯರಿಂದ ದೀಕ್ಷೆ ಪಡೆದು ಕನಕದಾಸರಾದರು.

      ಪುರಂದರರ ಸಮಕಾಲೀನರು : ಕನಕದಾಸರು ಪುರಂದರದಾಸರ ಸಮಕಾಲಿನವರು, ಅದೇ ರೀತಿ ಸ್ವತಂತ್ರ ಕಾಂತಿವುಳ್ಳವರೂ, ಸಮಾಜ ಸುಧಾರಕರೂ, ವೈಚಾರಿಕ ಮನೋಧರ್ಮದವರಾಗಿದ್ದರು. ಇವರು ಕೀರ್ತನೆಗಳಲ್ಲದೆ ಅನೇಕ ಕಾವ್ಯಗಳಾದ "ಮೋಹನ ತರಂಗಿಣಿ", ಹರಿಭಕ್ತಸಾರ, ನಳಚರಿತ್ರೆ, 'ರಾಮಧ್ಯಾನ ಚರಿತ್ರೆ, ಮುಂತಾದವುಗಳನ್ನು ಅಲ್ಲದೇ ಅಲ್ಲಮನ ಬೆಡಗಿನ ವಚನಗಳಂತೆ ಮುಡಿಗೆಗಳನ್ನು ರಚಿಸಿ ದಾಸ ಸಾಹಿತ್ಯಕ್ಕೆ ಅಪಾರವಾದ ವಿಶಿಷ್ಟ ಕೊಡುಗೆ ನೀಡಿದ್ದಾರೆ.

      ಇವರ ಕೀರ್ತನೆ ಕಾವ್ಯಾಂಶ ಪ್ರಧಾನವಾಗಿರುವುದರಿಂದ ಹಲವು ವಿಮರ್ಶಕರು ಗುರುತಿಸಿರುವುದನ್ನು ತಿಳಿದಿದ್ದೇವೆ. ಅವರು ಬಳಸಿರುವಂಥ ಪದ ಪ್ರಯೋಗಗಳು, ಅಲಂಕಾರಗಳು, ಛಂದಸ್ಸು ಚಮತ್ಕಾರ ವರ್ಣನೆಗಳಲ್ಲಿ ಕಾವ್ಯದ ಪ್ರಜ್ಞೆಯೆ ಎದ್ದು ಕಾಣಿಸುತ್ತಿದೆ.

      ಕೃಷ್ಣನ ಭಕ್ತ : ಅನೇಕರ ನಂಬಿಕೆಯಂತೆ ಕನಕರು ಕೂಡ ಶ್ರೀಕೃಷ್ಣನ ಭಕ್ತರು. ಉಡುಪಿಯ ದೇವಾಲಯದಲ್ಲಿ ಅವರಿಗೆ ಪ್ರವೇಶ ದೊರೆಯದೆ ಹೋದಾಗ ದೇವಸ್ಥಾನದ ಹಿಂಭಾಗದ ಸ್ಥಳದಲ್ಲಿ ನಿಂತು "ಬಾಗಿಲನು ತೆರೆದು ಸೇವೆಯನು ಕೊಡು ಹರಿಯೇ" ಎಂದೂ ಹಾಡತೊಡಗಿದರು. ಆಗ ಹಿಂಬಾಗದ ಗೋಡೆ ಬಿರುಕು ಒಡೆದು ಕೃಷ್ಣನ ವಿಗ್ರಹ ತಿರುಗಿತಂತೆ ಅವರ ಭಕ್ತಿಗೆ ಶ್ರೀಕೃಷ್ಣ ಪರಮಾತ್ಮನ ದರ್ಶನ ನೀಡಿರುವ ಕಿಂಡಿಯನ್ನು ಇಂದಿಗೂ 'ಕನಕನ ಕಿಂಡಿ' ಎಂದೆ ಪ್ರಸಿದ್ದಿ ಪಡೆದಿದೆ. ಅಂದು ಕಂಡಂತಹ ಉಡುಪಿಯ ಶ್ರೀಕೃಷ್ಣನ ದರ್ಶನವನ್ನು ಇಂದಿಗೂ ಕಾಣಬಹುದು.

      ಕೃತಿಗಳ ಸಾರಾಂಶ : ಮೋಹನತರಂಗಿಣಿ ಕಾವ್ಯ ಕೃತಿಯಲ್ಲಿ ಕನಕದಾಸರು ಕೃಷ್ಣಚರಿತೆಯನ್ನು ಹೇಳುತ್ತಾ ತಮ್ಮ ಅಧಿರಾಜನಾದ ಕೃಷ್ಣದೇವರಾಯನನ್ನೆ ಕೃಷ್ಣನಿಗೆ ಹೋಲಿಸುತ್ತಾನೆ. ನಳಚರಿತ್ರೆಯು ಹದಿಮೂರನೇ ಶತಮಾನದ ಒಂದು ಮಹಾನ್ ಪ್ರೇಮಕಥೆಯೊಂದು ನಳದಮಯಂತಿಯರ ಹಂಸದ ಮೂಲಕ ಕಳಿಸುವ ಸಂದೇಶಗಳನ್ನು ಒಳಗೊಂಡ ಕಥೆಯೂ ಇಂದಿಗೂ ಜನಪ್ರಿಯ. ರಾಮಧ್ಯಾನಚರಿತೆಯು ಕೂಡ ಭಾಮಿನಿ ಷಪ್ಟಧಿಯಲ್ಲಿ ರಚಿತವಾಗಿದೆ. ಸಮಾಜದಲ್ಲಿನ ಮೇಲ್ವರ್ಗದವರ ಹಾಗೂ ಕೆಳವರ್ಗದವರ ನಡುವಿನ ಆಹಾರದಾನ್ಯದ ನಡುವಿನ ವಿಚಾರ ಕುರಿತಂತಾಗಿದೆ. ಇನ್ನುಳಿದ ಕಾವ್ಯ ಕೃತಿಗಳು ಕೂಡ ಅದರದೆ ಆದ ಮಹತ್ವದ ಭಕ್ತಿಭಾವಗಳ ಮೆರಗುಗಳನ್ನು ಪಡೆದುಕೊಂಡಿವೆ.

      ಅವನತ್ತಿಯತ್ತ ದಾಸ ಸಾಹಿತ್ಯ : ಹಿಂದಿನ ದಿನಮಾನದಲ್ಲಿ ದಾಸ ಸಾಹಿತ್ಯಕ್ಕೆ ಹೆಚ್ಚಿನ ಒಲವು ನೀಡುತ್ತಿದ್ದರು. ಅಲ್ಲದೇ ಜಾನಪದ ಶೈಲಿಯನ್ನು ಬೆಳೆಸುವಂತೆ ರಾಜಂದಿರು ಪ್ರೋತ್ಸಾಹಿಸುತ್ತಿದ್ದರು. ಅಲ್ಲದೇ ಕಲೆ ಸಾಹಿತ್ಯ ಸಂಗೀತ ಮತ್ತು ಸಂಸ್ಕೃತಿಯನ್ನು ಬೆಳೆಸಲು ಮುಂದಾಗುತ್ತಿದ್ದರು. ಆದರೆ ಇಂದಿನ ಯುಗದ ಜನರಿಗೆ ದಾಸ ಸಾಹಿತ್ಯ, ಸಾಹಿತ್ಯದ ಅಭಿರುಚಿಗಳ ಬಗೆಯಲ್ಲಿ ಆಸಕ್ತಿ ಕಡಿಮೆಯಾಗುತ್ತಿದ್ದು, ಅದರ ಅರಿವು ಮೂಡಿವಸುವಂತಹ, ಸಮ್ಮೇಳನಗಳಲ್ಲಾಗಲಿ, ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಅವಕಾಶ ಕಲ್ಪಿಸಬೇಕಾಗಿದೆ. ಇದರಿಂದ ದಾಸ ಸಾಹಿತ್ಯ ಬೆಳೆಸಲು ಪ್ರಯತ್ನಿಸಬೇಕಾಗುವುದು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+