ಜಯ ಭಾರತ ಜನನಿಯ ತನುಜಾತೆ!
‘ಜಯ ಭಾರತ ಜನನಿಯ ತನುಜಾತೆ ’ ಎನ್ನುವ ಸಾಲಿನಿಂದಲೇ ಜನಪ್ರಿಯವಾದ ಕುವೆಂಪು ವಿರಚಿತ ‘ನಾಡಗೀತೆ’ ಕವಿತೆ ಕರ್ನಾಟಕದ ಅಧಿಕೃತ ನಾಡಗೀತೆಯಾಗಿ ಆಯ್ಕೆಯಾಗಿದೆ. ಈ ಸಂದರ್ಭದಲ್ಲಿ ಭಾರತ ಜನನಿಯ ಹಿರಿಯ ಮಗಳ ಸ್ತುತಿಸುವ ಮಂಗಳ ಗೀತೆ ಮತ್ತೊಮ್ಮೆ ಓದಿಗೆ ಹಾಗೂ ಹಾಡಿಗೆ.
ನಾಡಗೀತೆ
- ಕುವೆಂಪು
ಜಯಹೇ ಕರ್ನಾಟಕ ಮಾತೆ!
ಜಯ್ ಸುಂದರ ನದಿ ವನಗಳ ನಾಡೆ,
ಜಯ ಹೇ ರಸಋಷಿಗಳ ಬೀಡೆ!
ಭೂದೇವಿಯ ಮಕುಟದ ನವಮಣಿಯೆ,
ಗಂಧದ ಚಂದದ ಹೊನ್ನಿನ ಗಣಿಯೆ;
ರಾಘವ ಮಧುಸೂದನರವತರಿಸಿದ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಜನನಿಯ ಜೋಗುಳ ವೇದದ ಘೋಷ,
ಜನನಿಗೆ ಜೀವವು ನಿನ್ನಾವೇಶ.
ಹಸುರಿನ ಗಿರಿಗಳ ಸಾಲೆ
ನಿನ್ನಯ ಕೊರಳಿನ ಮಾಲೆ,
ಕಪಿಲ ಪತಂಜಲ ಗೌತಮ ಜಿನನುತ
ಭಾರತ ಜನನಿಯ ತನುಜಾತೆ
ಜಯ ಹೇ ಕರ್ನಾಟಕ ಮಾತೆ!
ಶಂಕರ ರಾಮಾನುಜ ವಿದ್ಯಾರಣ್ಯ
ಬಸವೇಶ್ವರರಿಹ ದಿವ್ಯಾರಣ್ಯ
ರನ್ನ ಷಡಕ್ಷರಿ ಪೊನ್ನ
ಪಂಪ ಲಕುಮಿಪತಿ ಜನ್ನ
ಕಬ್ಬಿಗರುದಿಸಿದ ಮಂಗಳಧಾಮ,
ಕವಿಕೋಗಿಲೆಗಳ ಪುಣ್ಯಾರಾಮ!
ನಾನಕ ರಾಮಾನಂದ ಕಬೀರರ
ಭಾರತ ಜನನಿಯ ತನುಜಾತೆ,
ಜಯಹೇ ಕರ್ನಾಟಕ ಮಾತೆ!
ತೈಲಪ ಹೊಯ್ಸಳರಾಳಿದ ನಾಡೆ,
ಡಂಕಣ ಜಕಣರ ನೆಚ್ಚಿನ ಬೀಡೆ,
ಕೃಷ್ಣ ಶರಾವತಿ ತುಂಗಾ
ಕಾವೇರಿಯ ವರ ರಂಗ!
ಚೈತನ್ಯ ಪರಮಹಂಸ ವಿವೇಕರ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಸರ್ವ ಜನಾಂಗದ ಶಾಂತಿಯ ತೋಟ,
ರಸಿಕರ ಕಂಗಳ ಸೆಳೆಯುವ ನೋಟ.
ಹಿಂದೂ ಕ್ರೈಸ್ತ ಮುಸಲ್ಮಾನ
ಪಾರಸಿಕ ಜೈನರುದ್ಯಾನ.
ಜನಕನ ಹೋಲುವ ದೊರೆಗಳ ಧಾಮ,
ಗಾಯಕ ವೈಣಿಕರಾರಾಮ
ಕನ್ನಡಿ ನುಡಿ ಕುಣಿದಾಡುವ ಗೇಹ,
ಕನ್ನಡ ತಾಯಿಯ ಮಕ್ಕಳ ದೇಹ!
ಜಯ್ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಜಯ್ ಸುಂದರ ನದಿ ವನಗಳ ನಾಡೆ,
ಜಯ ಹೇ ರಸಋಷಿಗಳ ಬೀಡೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications