ಗೋವಿನ ಹಾಡು : ಪುಣ್ಯಕೋಟಿಯ ಕಥೆಯಿದು

ಧರಣಿಮಂಡಲ ಮಧ್ಯದೊಳಗೆ
ಮೆರೆಯುತಿಹ ಕರ್ನಾಟ ದೇಶದೊ
ಳಿರುವ ಕಾಳಿಂಗನೆಂಬ ಗೊಲ್ಲನ
ಪರಿಯನೆಂತು ಪೇಳ್ವೆನೊ
ಗೊಲ್ಲ ದೊಡ್ಡಿಯಲಿರುವ ಪಶುಗಳ
ಎಲ್ಲ ಬೆಟ್ಟದ ಮೇಲೆ ಮೇಯುತ
ಹುಲ್ಲುವೊಳ್ಳೆ ನೀರ್ಗಳಿಂದಲೆ
ಅಲ್ಲಿ ಮೆರೆದವರಣ್ಯದಿ
ಎಳೆಯ ಮಾವಿನ ಮರದ ಕೆಳಗೆ
ಕೊಳಲನೂದುತ ಗೊಲ್ಲ ಗೌಡನು
ಬಳಸಿ ನಿಂದ ತುರುಗಳನ್ನು
ಬಳಿಗೆ ಕರೆದನು ಹರುಷದಿ
ಗಂಗೆ ಬಾರೆ ಗೌರಿ ಬಾರೆ
ತುಂಗಭದ್ರೆ ತಾಯಿ ಬಾರೆ
ಪುಣ್ಯಕೋಟಿ ನೀನು ಬಾರೆ
ಎಂದು ಗೊಲ್ಲನು ಕರೆದನು
ಗೊಲ್ಲ ಕರೆದಾ ದನಿಯ ಕೇಳಿ
ಎಲ್ಲ ಹಸುಗಳು ಬಂದು ನಿಂದು
ಚೆಲ್ಲಿ ಸೂಸಿ ಹಾಲು ಕರೆಯಲು
ಅಲ್ಲಿ ತುಂಬಿತು ಬಿಂದಿಗೆ
ಹಬ್ಬಿದಾಮಲೆ ಮಧ್ಯದೊಳಗೆ
ಅರ್ಭುತಾನೆಂದೆಂಬ ವ್ಯಾಘ್ರನು
ಅಬ್ಬರಿಸಿ ಹಸಿಹಸಿದು ಬೆಟ್ಟದ
ಕಿಬ್ಬಿಯಾಳು ತಾನಿದ್ದನು
ಸಿಡಿದು ರೋಷದಿ ಗುಡುಗುತಾ ಹುಲಿ
ಘುಡುಘುಡಿಸಿ ಭೋರಿಡುತವ್ಯಾಘ್ರನು
ತುಡುಕಿ ಎರಗಿದ ರಭಸ ಕೇಳಿ
ಓಡಿಹೋದವು ಹಸುಗಳು
ತನ್ನ ಮಗನಾ ಪಡೆದ ಪಶುವು
ತನ್ನ ಕಂದನ ನೆನೆದುಕೊಂಡು
ಪುಣ್ಯಕೋಟಿಯೆಂಬ ಹಸುವು
ಚೆಂದದಿಂದ ತಾ ಬರುತಿರೆ
ಇಂದೆನಗೆ ಆಹಾರ ಸಿಕ್ಕಿತು
ಎಂದು ಬೇಗನೆ ದುಷ್ಟ ವ್ಯಾಘ್ರನು
ಬಂದು ಬಳಸಿ ಅಡ್ಡಗಟ್ಟಿ
ನಿಂದನಾ ಹುಲಿರಾಯನು
ಮೇಲೆ ಬಿದ್ದು ನಿನ್ನನೀಗಲೆ
ಬೀಳಹೊಯ್ವೆನು ನಿನ್ನ ಹೊಟ್ಟೆಯ
ಸೀಳಿಬಿಡುವೆನು ಎನುತ ಕೋಪದಿ
ಖೂಳವ್ಯಾಘ್ರನು ಕೂಗಲು
ಒಂದು ಬಿನ್ನಹ ಹುಲಿಯೆ ಕೇಳು
ಕಂದನಿರುವನು ದೊಡ್ಡಿಯಾಳಗೆ
ಒಂದು ನಿಮಿಷದಿ ಮೊಲೆಯ ಕೊಟ್ಟು
ಬಂದು ಸೇರುವೆನಿಲ್ಲಿಗೆ
ಹಸಿದವೇಳೆಗೆ ಸಿಕ್ಕಿದೊಡವೆಯ
ವಶವ ಮಾಡದೆ ಬಿಡಲು ನೀನು
ನುಸುಳಿ ಹೋಗುವೆ ಮತ್ತೆ ಬರುವೆಯ
ಹುಸಿಯ ನುಡಿಯುವೆನೆಂದಿತು
ಸತ್ಯವೆ ನಮ್ಮ ತಾಯಿ ತಂದೆ
ಸತ್ಯವೆ ನಮ್ಮ ಬಂಧು ಬಳಗ
ಸತ್ಯವಾಕ್ಯಕೆ ತಪ್ಪಿ ನಡೆದರೆ
ಮೆಚ್ಚನಾ ಪರಮಾತ್ಮನು
ಕೊಂದು ತಿನ್ನುವೆನೆಂಬ ಹುಲಿಗೆ
ಚಂದದಿಂದ ಭಾಷೆಕೊಟ್ಟು
ಕಂದ ನಿನ್ನನು ನೋಡಿ ಪೋಗುವೆ
ನೆಂದು ಬಂದಿತು ದೊಡ್ಡಿಗೆ
ಅಮ್ಮ ನೀನು ಸಾಯಲೇಕೆ
ನಮ್ಮ ತಬ್ಬಲಿ ಮಾಡಲೇಕೆ
ಸುಮ್ಮನಿಲ್ಲಿಯೆ ನಿಲ್ಲು ಎಂದು
ಅಮ್ಮನಿಗೆ ಕರು ಹೇಳಿತು
ಆರ ಮೊಲೆಯನು ಕುಡಿಯಲಮ್ಮ
ಆರ ಬಳಿಯಲಿ ಮಲಗಲಮ್ಮ
ಆರ ಸೇರಿ ಬದುಕಲಮ್ಮ
ಆರು ನನಗೆ ಹಿತವರು
ಕೊಟ್ಟ ಭಾಷೆಯ ತಪ್ಪಲಾರೆನು
ಕೆಟ್ಟ ಯೋಚನೆ ಮಾಡಲಾರೆನು
ನಿಷ್ಠೆಯಿಂದಲಿ ಪೋಪೆನಲ್ಲಿಗೆ
ಕಟ್ಟ ಕಡೆಗಿದು ಖಂಡಿತಾ
ಅಮ್ಮಗಳಿರ ಅಕ್ಕಗಳಿರ
ಎನ್ನ ತಾಯಾಡಹುಟ್ಟುಗಳಿರಾ
ಕಂದ ನಿಮ್ಮವನೆಂದು ಕಾಣಿರಿ
ತಬ್ಬಲಿಯನೀ ಕರುವನೂ
ಮುಂದೆ ಬಂದರೆ ಹಾಯಬೇಡಿ
ಹಿಂದೆ ಬಂದರೆ ವೊದೆಯಬೇಡಿ
ಕಂದ ನಿಮ್ಮವನೆಂದು ಕಾಣಿರಿ
ತಬ್ಬಲಿಯನೀ ಕರುವನೂ
ತಬ್ಬಲಿಯು ನೀನಾದೆ ಮಗನೆ
ಹೆಬ್ಬುಲಿಯ ಬಾಯನ್ನು ಹೊಗುವೆನು
ಇಬ್ಬರಾ ಋಣ ತೀರಿತೆಂದು
ತಬ್ಬಿಕೊಂಡಿತು ಕಂದನಾ
ಗೋವು ಸ್ನಾನವ ಮಾಡಿಕೊಂಡು
ಗವಿಯಬಾಗಿಲ ಸೇರಿನಿಂತು
ಸಾವಕಾಶವ ಮಾಡದಂತೆ
ತವಕದಲಿ ಹುಲಿಗೆಂದಿತು
ಖಂಡವಿದೆಕೋ ಮಾಂಸವಿದೆಕೋ
ಗುಂಡಿಗೆಯ ಬಿಸಿರಕ್ತವಿದೆಕೋ
ಚಂಡವ್ಯಾಘ್ರನೆ ನೀನಿದೆಲ್ಲವ
ನುಂಡು ಸಂತಸದಿಂದಿರು
ಪುಣ್ಯಕೋಟಿಯ ಮಾತಕೇಳಿ
ಕಣ್ಣನೀರನು ಸುರಿಸಿ ನೊಂದೂ
ಕನ್ನೆಯಿವಳನು ಕೊಂದು ತಿಂದರೆ
ಮೆಚ್ಚನಾ ಪರಮಾತ್ಮನೂ
ಎನ್ನವೊಡಹುಟ್ಟಿದಕ್ಕ ನೀನು
ನಿನ್ನ ಕೊಂದು ಏನ ಪಡೆವೆನು
ಅನ್ನೆಕಾರಿ ನಾನು ಎನುತಲಿ
ತನ್ನ ಮನದೊಳು ನೊಂದಿತು
ಮೂರುಮೂರ್ತಿಗೆ ಕೈಯಮುಗಿದು
ಸೇರಿ ಎಂಟುದಿಕ್ಕು ನೋಡಿ
ಹಾರಿ ಆಕಾಶಕ್ಕೆ ನೆಗೆದು
ಮೀರಿ ಪ್ರಾಣವ ಬಿಟ್ಟಿತೂ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications