ಮನೆಗೆ ಮಾರಿ...
- ಆನಂದ್ ಜಿ., ಬನವಾಸಿ ಬಳಗ, ಬೆಂಗಳೂರು
[email protected]
ಕಾರ್ಗಿಲ್ ಯುದ್ಧದಿ
ದಂಡಿನ ಮಂದಿ ಬಲಿಯಾದಾಗ
ಮರುಗಿದ ಕನ್ನಡ ಮನವೇ ...
ಹಿಂದೊಮ್ಮೆ ... ಲಾಥೂರ್, ಕಿಲಾರಿಯಲೊಮ್ಮೆ
ಕಛ್, ಭುಜ್ನಲ್ಲಿ ಮತ್ತೊಮ್ಮೆ
ಮನೆ ಮುರಿದಾಗ
ಮಿಡಿದ ಕನ್ನಡ ಮನವೇ ...
ನಿನ್ನೆ ... ಸಾಗರದಲೆಗಳು ತಮಿಳು ತೀರದಲಿ
ಮೃತ್ಯು ನರ್ತನ ನಡೆಸಿರಲು,
ಧಿಗ್ಗನೆ ನೆರವಿಗೆ
ಧಾವಿಸಿದ ಕನ್ನಡ ಮನವೇ ...
ಮೆಚ್ಚಿ ತಲೆಬಾಗುವೆ
ನಿನ್ನ ರಾಷ್ಟ್ರೀಯ ಭಾವಕ್ಕೆ ...
ಜಾತಿ ಭಾಷೆ ಮೀರಿದ
ನಿನ್ನ ಉದಾತ್ತತೆಗೆ ... ನಿನ್ನೊಡಲ ದೇಶ ಪ್ರೇಮಕ್ಕೆ ...
ಇಂದು ... ಕೃಷ್ಣೆ ಉಕ್ಕಿಹುದು,
ಭೀಮ ನುಗ್ಗಿಹುದು
ನಿನ್ನದೇ ಮನೆಯ ಒಳಗೆ ...
ನೆಲ, ಮನೆ, ದನಕರು ಕಡೆಗೆ
ಹೆತ್ತ ಕಂದಮ್ಮಗಳೂ ... ಕೃಷ್ಣಾರ್ಪಣ ...
ಇಂದು ... ಕಮರಿದೆ ಕನಸು, ಮುರುಟಿದೆ ಮನಸು
ಬಟಾ ಬಯಲಾಗಿದೆ ಬದುಕು...
ಭೂಕಂಪಿತರಿಗೆ ಬಟ್ಟೆ
ಸೈನ್ಯದ ಜನಕೆ ಹಣ,
ಸುನಾಮಿ ಪೀಡಿತರಿಗೆ ಚಪಾತಿ ಅನ್ನ.
ನಿನ್ನಯ ಮನೆಯ ಜನಕ್ಕೆ ??
ಕಡೆ ಪಕ್ಷ ಒಂದು ಹನಿ ಕಣ್ಣೀರು ?
mp;#3210;ರಿಗೆ ಉಪಕಾರಿ
ಇದು ಕನ್ನಡಿಗನ ನಿಜ ರೂಪವೆಂದು
ಬೆಚ್ಚಿಹಳು ಭುವನೇಶ್ವರಿ ...
ನಿನ್ನ ನಿರಭಿಮಾನ ನಿರ್ಲಜ್ಜತನ, ನಿನ್ನದೇ ಜನಗಳ
ಕಷ್ಟಕಾಲದಲ್ಲೂ ತಟಸ್ಥವಾಗಿಹ ನಿನ್ನ ಗುಣ,
ಮೈಮನ ತುಂಬಿಹ ನಿಷ್ಕಿೃಯತನ
ನಿನ್ನಂತಹ ಮಕ್ಕಳನ್ನು ಹಡೆದವ್ವೆ ಧನ್ಯ !!!
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications