‘ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೇ...’
(ಭಕ್ತಿ ಪರಂಪರೆಯನ್ನು ಬೆಳೆಸುವಲ್ಲಿ , ಜನರ ಮನಸ್ಸಿನಲ್ಲಿ ಉಳಿಸುವಲ್ಲಿ ಚಲನಚಿತ್ರಗಳ ಪಾತ್ರ ದೊಡ್ಡದು. ಸಾಹಿತ್ಯ ಪುಟಗಳಿಂದ ಬಸಿದು ತಂದು, ಸಿನಿಮಾಭಕ್ತರಿಗೆ ಆ ಗೀತೆ ಮತ್ತು ಸಂದೇಶಗಳನ್ನು ತಲುಪಿಸಿದ ಪುಣ್ಯಾತ್ಮರಿಗೆ ಸಾವಿರ ಸಾವಿರ ನಮಸ್ಕಾರ.
‘ಭಕ್ತ ಕನಕದಾಸ’ ಚಿತ್ರದ ಪಿ.ಬಿ.ಶ್ರೀನಿವಾಸ್ ಕಂಠಸಿರಿಯಲ್ಲಿ ಮೊಳಗಿದ ಈ ಕೆಳಕಂಡ ಗೀತೆ, ಗೀತೆಯ ಮಾಧುರ್ಯ, ಭಾವ ಮತ್ತು ಸಂದೇಶ ಎಂದೆಂದಿಗೂ ಅಜರಾಮರ. ಆದರೆ ಅಂದಿನಿಂದ ಇಂದಿನ ದಿನಗಳ ತನಕ ಕುಲ ಕಾಳಗ ನಿಂತಿಲ್ಲ. ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಈ ಮಾತಿಗೆ ಜೇಸುದಾಸ್ ವಿವಾದ ಸದ್ಯದ ಉದಾಹರಣೆ. ಎಲ್ಲವನ್ನೂ ಪಕ್ಕಕ್ಕಿಟ್ಟು ಬನ್ನಿ ಒಂದು ಕ್ಷಣ, ಭಕ್ತಿಭಾವದಲ್ಲಿ ಮಿಯ್ಯೋಣ... -ಸಂಪಾದಕ)
ದೀನ ನಾನು ಸಮಸ್ತ ಲೋಕಕೆ ದಾನಿ ನೀನು
ವಿಚಾರಿಸಲು ಮತಿಹೀನ ನಾನು ಮಹಾಮಹಿಮ ಕೈವಲ್ಯಪತಿ ನೀನು।
ಏನ ಬಲ್ಲೆನು ನಾನು ನೆರೆಸುಜ್ನಾನಮೂರುತಿ ನೀನು
ನಿನ್ನ ಸಮಾನರುಂಟೇ ದೇವ ರಕ್ಷಿಸು ನಮ್ಮ ಅನವರತ ।।
ದೇವ ... ದೇವ.... ದೇವ....
ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೇ
ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೇ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ ಬಾಗಿಲನು ತೆರೆದು
ಪರಮಪದದೊಳಗೆ ವಿಷಧರನ ಕಲ್ಪದಲಿ ನೀ
ಸಿರಿಸಹಿತ ಕ್ಷೀರವಾರಿಧಿಯಾಳಿರಲೂ...
ಕರಿರಾಜ ಕಷ್ಟದಲಿ ಆದಿಮೂಲ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೋ ನರಹರಿಯೆ ಬಾಗಿಲನು ತೆರೆದು
ಕಡುಕೋಪದಿಂ ಖಳನು ಖಡ್ಗವನೆ ಪಿಡಿದು..
ನಿನ್ನೊಡೆಯ ಎಲ್ಲಿಹನು ಎಂದು ನುಡಿಯೇ..
ಧೃಢ ಭಕುತಿಯಲು ಶಿಶುವು ಬಿಡದೆ ನಿನ್ನನು ಭಜಿಸೆ..
ಸಡಗರದಿ ಸ್ತಂಭದಿಂದೊಡೆದೆ ನರಹರಿಯೆ ಬಾಗಿಲನು ತೆರೆದು...
ಯಮಸುತನ ರಾಣಿಗೆ ಅಕ್ಷಯವಸನವಾಯಿತೆ
ಸಮಯದಲಿ ಅಜಮಿಳನ ಪೊರೆದೇ...
ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಲಾಕ್ಷ ಕಾಗಿನೆಲೆಯಾದಿಕೇಶವನೇ ಬಾಗಿಲನು ತೆರೆದು...
ಬಾಗಿಲನು ತೆರೆದು
ಬಾಗಿಲನು ತೆರೆದು... ಸೇವೆಯನು ಕೊಡೊ ಹರಿಯೇ
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications