ಅಂಥಿಂಥ ಹೆಣ್ಣು ನೀನಲ್ಲ!! ಹೌದೌದು!
ಇತ್ತೀಚಿನ ಚಲನಚಿತ್ರಗಳಲ್ಲಿ ಹಾಡಿಗಿಂತಲೂ ವಾದ್ಯಗಳದ್ದೇ ದೊಡ್ಡ ಸದ್ದು! ಕೇಳುವುದಕ್ಕೆ ಕರ್ಣ ಕಠೋರ! ಸಾಹಿತ್ಯ ಮತ್ತು ಸಂಗೀತ ಎರಡೂ ಕೆಟ್ಟಿವೆ ಎಂದು ಮನೆಯಲ್ಲಿನ ಹಿರಿ ತಲೆಗಳು ಆಗಾಗ ಹೇಳುತ್ತಿರುತ್ತವೆ. ಆ ಮಾತು ಒಂದರ್ಥದಲ್ಲಿ ನಿಜವೂ ಹೌದು. ಬೇಕಿದ್ದರೇ, 1964ರಲ್ಲಿ ತೆರೆಕಂಡ ತುಂಬಿದ ಕೊಡ ಚಿತ್ರದ ಅಂಥಿಂಥ ಹೆಣ್ಣು ನೀನಲ್ಲ ಹಾಡನ್ನು ನೆನಪಿಸಿಕೊಳ್ಳಿ....
ಅಂದ ಹಾಗೇ ಈ ಚಿತ್ರಕ್ಕೆ ಸಂಗೀತ ನೀಡಿದ್ದು; ಜಿ. ಕೆ. ವೆಂಕಟೇಶ್. ಕೆ.ಎಸ್.ನರಸಿಂಹಸ್ವಾಮಿ ಅವರ ದೀಪದ ಮಲ್ಲಿ ಸಂಕಲನದಲ್ಲಿರುವ ಈ ಪದ್ಯಕ್ಕೆ, ತಮ್ಮ ಶ್ರೀಮಂತ ಕಂಠದಿಂದ ಜೀವ ತುಂಬಿದ್ದು; ಕಾಳಿಂಗ ರಾವ್.
ಅಂಥಿಂಥ ಹೆಣ್ಣು ನೀನಲ್ಲ;ನಿನ್ನಂಥ ಹೆಣ್ಣು ಇನ್ನಿಲ್ಲ.
ಹೆಡೆಹೆಡೆಯ ಸಾಲು ತುರುಬೆಲ್ಲ,
ಗುಡಿನಿಂದ ಹೂವು ಮೇಲೆಲ್ಲ,
ತೆರೆತೆರೆಯ ಹೊರಳು ಕುರುಳೆಲ್ಲ,
ಸುಳಿಮಿಂಚು ಕಣ್ಣ ಹೊರಳೆಲ್ಲ!
ಮಣಿಮಾಲೆ ಕೊರಳ ದನಿಯೆಲ್ಲ,
ಹೊಂಬಾಳೆ ಆಸೆ ಒಳಗೆಲ್ಲ.
ಒತ್ತಾಯವಿಲ್ಲ: ಒಲವೆಲ್ಲ!
ನಿನ್ನಂಥ ಹೆಣ್ಣು ಹಲವಿಲ್ಲ.
ಎದೆಮಟ್ಟ ನಿಂತ ಹೂ ಬಳ್ಳಿ;
ಎಷ್ಟೊಂದು ಹೂವು ಅದರಲ್ಲಿ!
ಉಸಿರುಸಿರು ಮೊಗ್ಗು ಹೂವೆಲ್ಲ;
ನೀ ಬಳ್ಳಿ ಬೆಳಕು ಬದುಕೆಲ್ಲ!
ನಡುಬೆಟ್ಟದಲ್ಲಿ ನಿನ್ನೂರು;
ಅಲ್ಲಿಹವು ನವಿಲು ಮುನ್ನೂರು.
ಮುನ್ನೂರು ನವಿಲು ಬಂದಂತೆ
ನೀ ಬಂದರೆನಗೆ; ಸಿರಿವಂತೆ.
ನಡುದಾರಿಯಲ್ಲಿ ನನ್ನೂರು;
ಕುಡಿಮಿಂಚಿನೂರು ಹೊನ್ನೂರು
ಮುನ್ನೂರು ಮಿಂಚು ಹೊಳೆದಂತೆ
ನೀ ಬಂದರೆನಗೆ, ಸಿರಿವಂತೆ.
ಬಲುದೂರ ದೂರ ನೀನಾಗಿ,
ಹೊಂಗನಸು ನಡುವೆ ದನಿತೂಗಿ,
ಕಾದಿರಲು ನಾನು ನಿನಗಾಗಿ
ನೀ ಬರುವೆ ಚೆಲುವೆ ಹೊಳೆಯಾಗಿ.
ಏನಂಥ ಚೆಲುವೆ ನೀನಲ್ಲ.
ನೀನಲ್ಲ? ಚೆಲುವೆ ಇನ್ನಿಲ್ಲ!
ಹಾಡಲ್ಲ, ನೀನು ಕನಸಲ್ಲ;
ನಿನ್ನಿಂದ ಹಾಡು ಕನಸೆಲ್ಲ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications